ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸಮಿತಿ ರಚನೆ ಮಾಡಿ


Team Udayavani, Oct 21, 2019, 4:38 PM IST

kolar-tdy-2

ಕೆಜಿಎಫ್: ಕನ್ನಡ ತಾಯಿ ಭುವನೇಶ್ವರಿ ಆರಾಧನೆ ಮತ್ತು ನಾಡು ನುಡಿಯ ಬಗ್ಗೆ ಗೌರವವಾಗಿ ನಡೆದುಕೊಳ್ಳಬೇಕು. ಎಲ್ಲಾ ಹಿರಿಯರನ್ನು ಒಳಗೊಂಡ ರಾಜ್ಯೋತ್ಸವ ಸಮಿತಿ ರಚನೆ ಮಾಡಿ, ಅದರ ಮೂಲಕ ದಿನಾಚರಣೆ ಮಾಡಬೇಕು ಎಂದು ಶಾಸಕಿ ಎಂ.ರೂಪಕಲಾ ಹೇಳಿದರು.

ನಗರದ ಕಿಂಗ್‌ ಜಾರ್ಜ್‌ಹಾಲ್‌ನಲ್ಲಿ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಒಂದು ಕೋಟಿ ರೂ. ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣ ಮಾಡಬೇಕು. ಅದಕ್ಕಾಗಿ ಪ್ರಯತ್ನ ಮಾಡುತ್ತಿದ್ದೇನೆ. ಕನ್ನಡ ಕಲೆ, ಸಂಸ್ಕೃತಿ ಉಳಿಯಬೇಕು. ಇಲ್ಲಿ ಕನ್ನಡ ಹೋರಾಟಗಾರರು, ಪ್ರಥಮ ಮುಖ್ಯಮಂತ್ರಿಯನ್ನು ಕೊಟ್ಟಿರುವ ತಾಲೂಕು ಇದೆ. ಸರ್ಕಾರ ಬಹುಶಃ ಶೀಘ್ರದಲ್ಲಿಯೇ ಒಂದು ಕೋಟಿ ರೂ.ಬಿಡುಗಡೆ ಮಾಡುವ ಸಂಭವ ಇದೆ ಎಂದರು.

ಪ್ರತಿಯೊಬ್ಬರ ಸಹಕಾರ ಅಗತ್ಯ: ಭಾಷೆ ಬಗೆಗೆ ಭಿನ್ನಾಭಿಪ್ರಾಯ ಬರಬಾರದು.ಭಾಷೆಗೆ ಅಪಮಾನ ಮಾಡಬಾರದು. ನನ್ನಿಂದ ಕೆಲವು ತಪ್ಪಾಗಿದೆ. ಅದನ್ನು ಮರಕಳಿಸಲು ಬಿಡುವುದಿಲ್ಲ. ನಮ್ಮ ಊರು ಚಿನ್ನದ ನಾಡು ಎಂದು ಹೇಳಲಾಗುತ್ತಿದೆ. ಆದರೆ, ನಿಜವಾದ ಚಿನ್ನದ ನಾಡು ನಮ್ಮ ಊರು ಇಲ್ಲ. ಚೆನ್ನಾಗಿರಬೇಕಾದ ಊರು ಹೇಗಿರಬೇಕು ಎಂಬ ನನ್ನ ಯೋಜನೆ ಇದೆ. ಅಭಿವೃದ್ಧಿ ಆಗಬೇಕಾಗಿದೆ. ಅಧಿಕಾರಿಗಳು ಸಹಕಾರ ನೀಡಬೇಕು. ಪ್ರತಿಯೊಬ್ಬರೂ ಪರಿಶ್ರಮ ಇರಬೇಕು ಎಂದರು.

ಮಾನಸಿಕವಾಗಿ ಸಬಲರಾಗಿ: ಎಂಜಿನಿಯರ್‌, ಡಾಕ್ಟರ್‌, ವಿಜ್ಞಾನಿಗಳು ಬೇರೆ ದೇಶದಲ್ಲಿದ್ದಾರೆ. ನಮ್ಮ ಆಸ್ತಿಯಾದ ವಿದ್ಯಾವಂತ ಮಕ್ಕಳನ್ನು ನಾವು ಬಳಸಿಕೊಳ್ಳಬೇಕು. ವಯಸ್ಸಾದ ತಂದೆ ತಾಯಿಗಳು ಕೊನೆಗಾಲದಲ್ಲಿ ಕೊರತೆ ಅನುಭವಿಸಬಾರದು. ಮಕ್ಕಳು ನಮ್ಮ ಮುಂದೆ ಇದ್ದರೆ ಯಾವುದೇ ಕಾಯಿಲೆ ಬರಲ್ಲ. ಮಾನಸಿಕವಾಗಿ ಸಬಲರಾಗಿರುತ್ತೇವೆ. ಆರೋಗ್ಯ ಇಲ್ಲ. ಯಾಕೆಂದರೆ ನಮ್ಮ ಮಕ್ಕಳು ನಮ್ಮ ಹತ್ತಿರ ಇಲ್ಲ ಎಂದು ಶಾಸಕಿ ವಿಷಾದಿಸಿದರು. 50-60 ಸಾವಿರ ಜನಕ್ಕೆ ಕೆಲಸ ಕೊಟ್ಟ ಕೆಜಿಎಫ್ ಮತ್ತೆ ಗತವೈಭವವನ್ನು ಮರುಕಳಿಸಬೇಕು. ಇಲ್ಲಿ ಕೈಗಾರಿಕೆಗಳು ಬರಬೇಕು. ಅದಕ್ಕಾಗಿ ಆಸಕ್ತಿಯಿಂದ ಕೆಲಸ ಮಾಡುತ್ತಿದ್ದೇನೆ. ಇಲ್ಲಿಗೆ ಕೆಲಸ ಹುಡುಕಿಕೊಂಡು ಬರಬೇಕು. ಅಂತಹ ಕ್ಷೇತ್ರವನ್ನು ಸೃಷ್ಟಿಸಬೇಕು ಎಂದರು.

ಎಲ್ಲಾ ಭಾಷಿಕರು ಸಹಬಾಳ್ವೆ ನಡೆಸುವ ವಾತಾವರಣ ಇರಬೇಕು ಎಂದು ಶಾಸಕಿ ಹೇಳಿದರು. ನಗರಸಭೆ, ತಹಶೀಲ್ದಾರ್‌ ಅವರು, ಖಾಸಗಿ ಶಾಲೆಗಳಲ್ಲಿ ಕನ್ನಡದ ಫ‌ಲಕ ಹಾಕಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಎಲ್ಲೆಲ್ಲಿ ಕವಿ, ಸಾಹಿತಿಗಳ ಹೆಸರು ಇಡಬೇಕು ಎಂಬ ಸೂಚನೆ ಪಾಲಿಸುತ್ತೇನೆ ಎಂದು ರೂಪಕಲಾ ಹೇಳಿದರು. ತಹಶೀಲ್ದಾರ್‌ ಕೆ.ರಮೇಶ್‌, ನಗರಸಭೆ ಆಯುಕ್ತ ಸಿ.ರಾಜು, ಕೆಡಿಎ ಆಯುಕ್ತ ಜಬ್ಟಾರ್‌, ಕನ್ನಡ ಸಂಘದ ಅಧ್ಯಕ್ಷ ವಿಜಯಶಂಕರ್‌, ಅಶೋಕ ಲೋಣಿ, ವಿ.ಎಸ್‌.ಪ್ರಕಾಶ್‌, ಪುರುಷೋತ್ತಮ ಇದ್ದರು. ಅಶ್ವತ್ಥ್ಕಾ ರ್ಯಕ್ರಮ ನಿರ್ವಹಣೆ ಮಾಡಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.