ಆಡಳಿತ ಮಂಡಳಿಯಿಂದ ಕೋಟಿ ಹಗರಣ


Team Udayavani, Mar 19, 2020, 3:00 AM IST

adalita-mandali

ಬಂಗಾರಪೇಟೆ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಬೂದಿಕೋಟೆ ಮಾರ್ಕಂಡೇಯಗೌಡ ನೇತೃತ್ವದ ಆಡಳಿತ ಮಂಡಳಿ ಒಂದು ಕೋಟಿ ವೆಚ್ಚದ ವಾಣಿಜ್ಯ ಸಂಕೀರ್ಣ ನಿರ್ಮಾಣ ಕಾಮಗಾರಿಯಲ್ಲಿ ಸರ್ಕಾರದ ಮಾರ್ಗಸೂಚಿ ಪಾಲಿಸಿಲ್ಲ. ಟೆಂಡರ್‌ ಕರೆಯದೇ ಅಕ್ರಮವಾಗಿ ಕಟ್ಟಡ ನಿರ್ಮಾಣವನ್ನು ತಕ್ಷಣವೇ ಸಹಕಾರ ಇಲಾಖೆ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ದೂರು ನೀಡಿದ್ದಾರೆ.

ಪಟ್ಟಣದ ಸರ್ಕಾರಿ ಅತಿಥಿ ಗೃಹ ಎದುರಿನಲ್ಲಿರುವ ಟಿಎಪಿಸಿಎಂಎಸ್‌ ಜಾಗದಲ್ಲಿ 10 ಅಂಗಡಿಗಳುಳ್ಳ ವಾಣಿಜ್ಯ ಸಂಕೀರ್ಣ ನಿರ್ಮಾಣವಾಗುತ್ತಿದೆ. ಟಿಎಪಿಸಿಎಂಎಸ್‌ ಅಧ್ಯಕ್ಷ ಮಾರ್ಕಂಡೇಯಗೌಡರ ನೇತೃತ್ವದ ಸಮಿತಿ ನಿರ್ವಹಣೆ ಮಾಡುತ್ತಿದ್ದು, ಸರ್ಕಾರದ ಸುತ್ತೋಲೆ ಹಾಗೂ ಟೆಂಡರ್‌ ಪ್ರಕ್ರಿಯೆ ನಡೆಸದೇ ಏಕಾಏಕಿ ಕಾನೂನಿಗೆ ವಿರುದ್ಧ ಉಪ ಸಮಿತಿ ರಚಿಸಿಕೊಂಡು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಟಿಎಪಿಸಿಎಂಎಸ್‌ನ 2 ಕೋಟಿ ಅಧಿಕ ಬೆಲೆ ಬಾಳುವ ಆಸ್ತಿಯನ್ನು ಆಡಳಿತ ಮಂಡಳಿಯೇ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿದೆ. ಕ್ಯಾಸಂಬಳ್ಳಿಯಲ್ಲಿರುವ ಕಟ್ಟಡ 10 ಲಕ್ಷ ರೂ, ಹಾಗೂ ಬೇತಮಂಗಲದಲ್ಲಿರುವ ಆಸ್ತಿಯನ್ನು 1.15 ಕೋಟಿಗೆ ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಹಕಾರ ಇಲಾಖೆ ಮೇಲಾಧಿಕಾರಿಗಳ ಗಮನಕ್ಕೆ ತರದೇ ಟಿಎಪಿಸಿಎಂಎಸ್‌ ಆಸ್ತಿ ಅಕ್ರಮವಾಗಿ ಮಾರಿ, ಆ ಹಣದಿಂದ ಟೆಂಡರ್‌ ಪ್ರಕ್ರಿಯೆಗಳನ್ನು ಪಾಲಿಸದೇ ಸಮಿತಿಯಿಂದಲೇ ಹಣ ಡ್ರಾ ಮಾಡಿ, ಅಕ್ರಮವಾಗಿ ಸಂಕೀರ್ಣ ನಿರ್ಮಾಣ ಮಾಡುತ್ತಿರುವುದಕ್ಕೆ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜತಗೆ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಅವರಿಗೆ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ, ಸಹಕಾರ ಇಲಾಖೆ ಜಂಟಿ ಉಪನಿಬಂಧಕರಿಗೆ ಲಿಖೀತ ದೂರು ನೀಡಿದ್ದಾರೆ.

ಟಿಎಪಿಸಿಎಂಎಸ್‌ ಆಡಳಿತ ಮಂಡಳಿ, ಅಕ್ರಮ ಕಟ್ಟಡ ನಿರ್ಮಾಣ ಮಾಡಲು ಕೆಜಿಎಫ್ ನಗರಾಭಿವೃದ್ಧಿ ಇಲಾಖೆಯಿಂದ ಅನುಮೋದನೆ ಪಡೆದಿಲ್ಲ. ಬೇನಾಮಿಯಾಗಿ ಹಾಗೂ ಅತುರವಾಗಿ ನಿರ್ಮಾಣ ಮಾಡಲಾಗುತ್ತಿದೆ. ಖಾಸಗಿ ಎಂಜಿನಿಯರ್‌ರೊಬ್ಬರನ್ನು ನೇಮಿಸಿಕೊಂಡು ಒಂದು ಕೋಟಿ ಹಣಕ್ಕೆ ವಿವಿಧ ಹಂತಗಳ ನಿರ್ಮಾಣಕ್ಕೆ 25 ಲಕ್ಷಕ್ಕೆ ಒಂದರಂತೆ ನಾಲ್ಕು ಅಂದಾಜು ಪಟ್ಟಿ ಸಿದ್ಧಪಡಿಸಿಕೊಂಡು, ಈಗಾಗಲೇ 75 ಲಕ್ಷ ರೂ. ಸ್ವಂತವಾಗಿ ಹಣ ಡ್ರಾ ಮಾಡಲಾಗಿದೆ. ಕಟ್ಟಡ ನಿರ್ಮಾಣದ ಸಾಮಾಗ್ರಿಗಳಿಗೂ ಹಣ ಡ್ರಾ ಮಾಡಿ ಹಂಚಲಾಗಿದೆ ಎನ್ನಲಾಗಿದೆ.

ಲೋಕೋಪಯೋಗಿ ದರ ದಾಖಲಿಸದೇ ತಮ್ಮ ಇಷ್ಟಾನುಸಾರವಾಗಿ ಅಂದಾಜುಪಟ್ಟಿ ಮಾಡಿಕೊಂಡು ಒಂದು ಕೋಟಿ ಹಗರಣ ಮಾಡಿರುವ ಟಿಎಪಿಸಿಎಂಎಸ್‌ ಅಧ್ಯಕ್ಷರು, ಸಿಇಒ ವಿರುದ್ಧ ಕ್ರಿಮಿನಲ್‌ ದೂರು ದಾಖಲಿಸಿ ಸಮಿತಿಯನ್ನು ಸೂಪರ್‌ಸೀಡ್‌ ಮಾಡಬೇಕು. ಈ ಹಗರಣದ ತನಿಖೆ ಮುಗಿಯುವವರೆಗೂ ಟಿಎಪಿಸಿಎಂಎಸ್‌ನಲ್ಲಿ ಹಣಕಾಸಿನ ವ್ಯವಹಾರ ನಡೆಸದಂತೆ ಕ್ರಮಕೈಗೊಳ್ಳುವಂತೆ ಸಹಕಾರ ಇಲಾಖೆಗೆ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ದೂರು ನೀಡಿದ್ದಾರೆ.

ಟಿಎಪಿಸಿಎಂಎಸ್‌ನ ಆಡಳಿತ ಮಂಡಳಿ, ಸಹಕಾರ ಇಲಾಖೆ ಹಾಗೂ ಸರ್ಕಾರದ ಅನುಮೋದನೆ ಪಡೆಯದೇ ವಾಣಿಜ್ಯ ಸಂಕೀರ್ಣ ನಿರ್ಮಾಣದಲ್ಲಿ ಸಾಕಷ್ಟು ಭ್ರಷಾಚಾರ, ಅಕ್ರಮ ನಡೆದಿದೆ. ಕೂಡಲೇ ಸೂಪರ್‌ಸೀಡ್‌ ಮಾಡಿ, ಅಗತ್ಯ ಕ್ರಮಕೈಗೊಳ್ಳಬೇಕು.
-ಎಸ್‌.ಎನ್‌.ನಾರಾಯಣಸ್ವಾಮಿ, ಶಾಸಕ

ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಸಹಕಾರ ಇಲಾಖೆ ಉಪನಿಬಂಧಕರಿಂದ ಅನುಮೋದನೆ ಪಡೆಯಲಾಗಿದೆ. ದುಂದುವೆಚ್ಚ ಹಾಗೂ ಗುಣಮಟ್ಟದ ಕಾರಣಕ್ಕಾಗಿ ಟೆಂಡರ್‌ ಕರೆದಿಲ್ಲ.
-ಮಾರ್ಕಂಡೇಯಗೌಡ, ಅಧ್ಯಕ್ಷ, ಟಿಎಪಿಸಿಎಂಎಸ್‌, ಬಂಗಾರಪೇಟೆ

* ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.