ಕೋಟ್ಯಂತರ ರೂ. ಆಸ್ತಿ ತೆರಿಗೆ ಬಾಕಿ: ನಗರಸಭೆ ಆಯುಕ್ತ ದಾಳಿ


Team Udayavani, Nov 22, 2019, 3:24 PM IST

kolar-tdy-1

ಕೋಲಾರ: ನಗರದಲ್ಲಿ ಆಸ್ತಿ ತೆರಿಗೆ ಪಾವತಿಸದೇ, ಬಾಕಿ ಉಳಿಸಿಕೊಂಡವರ ಅಂಗಡಿ, ಮಳಿಗೆಗಳ ವಿರುದ್ಧ ನಗರಸಭೆ ಆಯುಕ್ತ ಶ್ರೀಕಾಂತ್‌ ನೇತೃತ್ವದಲ್ಲಿ ಅಧಿಕಾರಿಗಳು ಗುರುವಾರ ಕಾರ್ಯಾಚರಣೆ ನಡೆಸಿ ಎಚ್ಚರಿಕೆ ನೀಡಿದರು.

ನಗರಸಭೆ ಆಯುಕ್ತ ಶ್ರೀಕಾಂತ್‌ ಈ ಕುರಿತು ಮಾಹಿತಿ ನೀಡಿ, ನಗರದಲ್ಲಿನ ಅನೇಕ ಅಂಗಡಿ, ಮಳಿಗೆ, ಸಂಸ್ಥೆಗಳ ನೂರಾರು ಮಾಲಿಕರು 2002-03ರಿಂದಲೂ ಆಸ್ತಿ ತೆರಿಗೆ ಪೂರ್ಣ ಪಾವತಿಸದೆ, ಬಾಕಿ ಉಳಿಸಿಕೊಂಡಿರುವ ಮಾಲಿಕರಿಗೆನ.21ರ ಸಂಜೆ ಕಡೆ ದಿನ ಎಂದು ಸ್ಪಷ್ಟಪಡಿಸಿ ನಗರಸಭೆಯಿಂದ ನೋಟಿಸ್‌ ಜಾರಿ ಮಾಡಲಾಗಿತ್ತು. ಆದರೂ, ಆಸ್ತಿ ಮಾಲಿಕರು ಸ್ವಯಂ ಪ್ರೇರಿತರಾಗಿ ತೆರಿಗೆ ಪಾವತಿಸಲು ಮುಂದಾಗದ ಹಿನ್ನೆಲೆಯಲ್ಲಿ ನಗರಸಭೆ ಕಂದಾಯ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಹೇಳಿದರು.

ಬೀಗ ಅನಿವಾರ್ಯ: ಈ ವೇಳೆ ಕೆಲವು ಆಸ್ತಿ ಮಾಲಿಕರು ಇನ್ನಷ್ಟು ಸಮಯಾವಕಾಶ, ಕಂತು ರೂಪದಲ್ಲಿ ಹಣ ಪಾವತಿಸುವುದಾಗಿ ಕೋರಿಕೆಗೆ ಉತ್ತರಿಸಿದ ಅಧಿಕಾರಿಗಳು, ಆರ್ಥಿಕ ವರ್ಷ ಆರಂಭದ ಮೂರು ತಿಂಗಳು ಕಂತಿನ ರೂಪದಲ್ಲಿಪಾವತಿಸಲು ಅವಕಾಶವಿದೆ. ನೋಟಿಸ್‌ ನೀಡಿದ ನಂತರ ಅವಕಾಶ ಇಲ್ಲ, ಬಾಕಿ ಪಾವತಿಸದಿದ್ದರೆ ಬೀಗ ಹಾಕುವುದು ಅನಿವಾರ್ಯ ಎಂದು ಎಚ್ಚರಿಸಿದರು.

ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಕಂದಾಯ ಅಧಿಕಾರಿ ಚಂದ್ರಶೇಖರ್‌, ನಗರದ ಕೋಟೆಯ ಸ್ಯಾಮ್ಯುಯೆಲ್‌ ಪುಟ್ಟರಾಜು 1.67 ಲಕ್ಷ ರೂ., ಡಾ.ಶಾರದಾ 2.30 ಲಕ್ಷ ರೂ., ಮೇರಿ ಕಮಿಟಿ ಹಾಲ್‌ನಿಂದ 5.93 ಲಕ್ಷ ರೂ., ಮಹಿಳಾ ಸಮಾಜ ಶಾಲೆ ಹಾಗೂ ಕಾಲೇಜಿನಿಂದ ಒಟ್ಟು 23 ಲಕ್ಷ ರೂ., ಎಂ.ಜಿ.ರಸ್ತೆಯಲ್ಲಿನ ಬೇಕರಿಯೊಂದರಿಂದ 16.15 ಲಕ್ಷ ರೂ. ಸೇರಿದಂತೆ ಅನೇಕ ಮಂದಿ ಆಸ್ತಿ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವುದರಿಂದ ವಸೂಲಾತಿಗೆ ಮುಂದಾಗಿದ್ದೇವೆ ಎಂದು ಹೇಳಿದರು.

ನಗರಸಭೆ ವ್ಯಾಪ್ತಿಯಲ್ಲಿ 34,000 ಆಸ್ತಿಗಳಿದ್ದು, 22,000 ಆಸ್ತಿಗಳು ಖಾತೆಯಾಗಿದೆ. 2019-20ನೇ ಸಾಲಿನಲ್ಲಿ 5 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹದಗುರಿ ಇಟ್ಟುಕೊಳ್ಳಲಾಗಿದ್ದು, ಇದುವರೆಗೆ ಶೇ.60 ಮಾತ್ರ ವಸೂಲಿ ಆಗಿದೆ. ಇನ್ನು 2 ಕೋಟಿ ರೂ.ಗೂ ಅಧಿಕ ಮೊತ್ತ ಬಾಕಿ ಇದೆ. 43 ಆಸ್ತಿ ಮಾಲಿಕರು ಪಾವತಿಸದೆ ಬಾಕಿ ಉಳಿಸಿಕೊಂಡಿರುವ 1.05 ಕೋಟಿ ರೂ. ತೆರಿಗೆ ವಸೂಲಾತಿಗಾಗಿ ನ್ಯಾಯಾಧೀಶರ ನೇತೃತ್ವದಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ ಅದಾಲತ್‌ಗೆ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಂದಾಯ ಅಧಿಕಾರಿ ವಿದ್ಯಾ, ಕಂದಾಯ ನಿರೀಕ್ಷಕ ತ್ಯಾಜರಾಜ್‌, ಬಿಲ್‌ ಕಲೆಕ್ಟರ್‌ ಅಭಿಷೇಕ್‌ ಮಾನೆ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.