ಹೈನುಗಾರರೇ ತಂತ್ರಜ್ಞಾನದ ತರಬೇತಿ ಪಡೆದುಕೊಳ್ಳಿ


Team Udayavani, Jun 25, 2022, 4:32 PM IST

ಹೈನುಗಾರರೇ ತಂತ್ರಜ್ಞಾನದ ತರಬೇತಿ ಪಡೆದುಕೊಳ್ಳಿ

ಕೋಲಾರ: ಹೈನುಗಾರಿಕೆಯಲ್ಲಿ ಇಂದಿನ ಆಧುನಿಕ ತಂತ್ರಜ್ಞಾನ ಬೆಳೆವಣಿಗೆಗೆ ಪೂರಕವಾದ ತರಬೇತಿ ಪಡೆದು ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಗಳು ಗುಣಮಟ್ಟದ ಹಾಲು ಶೇಖರಣೆಗೆ ಗಮನಹರಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎಂ.ಎಲ್‌. ಅನಿಲ್‌ ಕುಮಾರ್‌ ಹೇಳಿದರು.

ನಗರ ಹೊರವಲಯದ ಟಮಕ ಕೈಗಾರಿಕಾ ಪ್ರಾಂಗಣದಲ್ಲಿನ ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಶಿಬಿರ ಕಚೇರಿಯಲ್ಲಿ ರಾಜ್ಯ ಸಹಕಾರ ಮಹಾಮಂಡಳ ನಿ, ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ, ಕೋಚಿಮುಲ್‌ ಒಕ್ಕೂಟ ಹಾಗೂ ಸಹಕಾರ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕೋಲಾರ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗಾಗಿ ನಡೆದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿ, ಕೋಲಾರ ತಾಲೂಕು 272 ಹಾಲು ಉತ್ಪಾದಕರ ಸಂಘ ಹೊಂದಿದೆ. ಇದರಲ್ಲಿ 27 ಮಹಿಳಾ ಸಂಘಗಳಿದ್ದು, ಕೋಲಾರವು ಹೆಚ್ಚು ಹಾಲು ಸಂಘ ಹೊಂದಿರುವ ತಾಲೂಕಾಗಿದೆ. ಜಿಲ್ಲೆಯ ಹಾಲು ಒಕ್ಕೂಟದ ಪಿತಾಮಹಾ ಎಂ.ವಿ.ಕೃಷ್ಣಪ್ಪ ಅವರಂತೆ ತಾಲೂಕಿನಲ್ಲಿ ಹೆಚ್ಚು ಹಾಲು ಉತ್ಪಾದನ ಸಂಘಗಳ ರಚನೆಗೆ ಕಾರಣರಾದ ಅಣ್ಣಿಹಳ್ಳಿ ಕೃಷ್ಣಪ್ಪ ಅವರ ಸ್ಮರಣೆ ಅಗತ್ಯ ಎಂದರು.

ಕೊರೊನಾದಲ್ಲಿ ಸಂಘಗಳ ಸಹಕಾರ: ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ನಿರ್ದೇಶಕ ಡಿ.ವಿ.ಹರೀಶ್‌ ಮಾತನಾಡಿ, ಕೋವಿಡ್‌ ನಿಂದ ಒಕ್ಕೂಟವು ಸಂಕಷ್ಟಕ್ಕೆ ಸಿಲುಕಿದ ವೇಳೆ ಹಾಲು ಉತ್ಪಾದಕರ ಸಂಘಗಳ ಸಹಕಾರವು ಅಭಿನಂದನಾರ್ಹವಾಗಿದೆ. ಕಳೆದ 3 ವರ್ಷಗಳ ಅಡಳಿತದಲ್ಲಿ ಹಾಲು ಉತ್ಪಾದಕರ ಮಕ್ಕಳ ಉನ್ನತ ಶೈಕ್ಷಣಿಕ ಅಭಿವೃದ್ಧಿಗೆ ಪ್ರೋತ್ಸಾಹ, ಸಿಬ್ಬಂದಿಗಳ ನಿವೃತ್ತಿ ಸಂದರ್ಭದಲ್ಲಿ 2 ಲಕ್ಷ ರೂ. ಗೌರವಧನ, 20 ಬಿ.ಎಂ.ಸಿ. ಕೇಂದ್ರಗಳ ಮಂಜೂರಾತಿ, ಹಾಲಿನ ಗುಣಮಟ್ಟ, ಉತ್ಪಾದನೆಯಲ್ಲಿ ಪ್ರಗತಿಯ ಸಾಧನೆ ಮಾಡಿದೆ ಎಂದರು.

ಹಾಲು ಉತ್ಪಾದಕರ ಜೀವಾಳ: ಡಿಸಿಸಿ ಬ್ಯಾಂಕಿನ ನಿರ್ದೇಶಕ ಯಲವಾರ ಸೊಣ್ಣೇಗೌಡ ಮಾತನಾಡಿ, ಸಹಕಾರ ಸಂಸ್ಥೆಗಳ ಅಭಿವೃದ್ಧಿಗೆ ಹೊಸ ಮಾಹಿತಿಗಳ ಅರಿವು ಮುಖ್ಯ, ಕೋಚಿಮುಲ್‌ ಪ್ರಗತಿಗೆ ಎಂ.ವಿ.ಕೆ ಹೆಜ್ಜೆಯ ಗುರುತುಗಳ ಮಾರ್ಗದರ್ಶನವೆ. ಇಂದು ಹಾಲು ಉತ್ಪಾದಕರ ಜೀವಾಳವಾಗಿದೆ ಎಂದು ಹೇಳಿದರು. ನಿರ್ದೇಶಕ ಚಂಜಿಮಲೆ ರಮೇಶ್‌ ಮಾತನಾಡಿ, ಹೈನುಗಾರಿಕೆ ರೈತರ ಉಪಕಸುಬು ಅಗಿರುವುದರಿಂದ ಅಪತ್ಕಾಲದಲ್ಲಿ ನೆರವಾಗುತ್ತಿದ್ದು, ರೈತರ ಆತ್ಮಹತ್ಯೆ ನಮ್ಮ ಜಿಲ್ಲೆಗಳಲ್ಲಿ ಇಲ್ಲವಾಗಿದೆ. ಸ್ವಾಭಿಮಾನಿ ಬದುಕಿಗೆ ಕಾರಣವಾಗಿದೆ ಎಂದರು.

ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಮೂರಂಡಹಳ್ಳಿ ಗೋಪಾಲಪ್ಪ ಮಾತನಾಡಿ, ಹಾಲು ಸಂಘಗಳ ಆದಾಯ ಆಧರಿಸಿ ಸಿಬ್ಬಂದಿಗೆ ವೇತನ, ನೇಮಕಾತಿ ಮಾಡಲಾಗುತ್ತಿದೆ. ಕಾರ್ಯದರ್ಶಿಗಳ ಶ್ರಮದ ಅಧಾರದ ಮೇಲೆ ಒಕ್ಕೂಟದ ಪ್ರಗತಿ ಅವಲಂಭಿಸಿದೆ. ಶಿಕ್ಷಣ ನಿಧಿ ಪಾವತಿಸುವ ಮೂಲಕ ಒಕ್ಕೂಟಕ್ಕೆ ಸಹಕಾರಿಸಬೇಕು ಎಂದು ಮನವಿ ಮಾಡಿದರು. ಒಕ್ಕೂಟದ ಉಪವ್ಯವಸ್ಥಾಪಕ ಶ್ರೀಧರಮೂರ್ತಿ ನಿವೃತ್ತರಾದ ಹಿನ್ನಲೆಯಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು. ಸಹಕಾರ ಇಲಾಖೆ ನಿವೃತ್ತ ಅಧಿ ಕಾರಿ ಸುಂದರಪ್ಪ, ವಕೀಲ ಧನರಾಜ್‌ ಮಾತನಾಡಿದರು.

ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ಕಲ್ವಮಂಜಲಿ ಟಿ.ಕೆ.ಬೈರೇಗೌಡ, ಮೀನುಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಅ.ಮು.ಲಕ್ಷ್ಮೀನಾರಾಯಣ, ಒಕ್ಕೂಟದ ನಿರ್ದೇಶಕರಾದ ಪೆಮ್ಮಶೆಟ್ಟಿಹಳ್ಳಿ ಎಸ್‌.ಸುರೇಶ್‌, ಚೆಂಜಿಮಲೆ ಬಿ.ರಮೇಶ್‌, ಅರುಣ, ವೃತ್ತಿಪರ ನಿರ್ದೇಶಕ ಕೆ.ಎಂ.ವೆಂಕಟೇಶಪ್ಪ, ಸಲಹೆಗಾರರಾದ ಕ್ಯಾಲನೂರು ಷೇಕ್‌ ಮಹಮದ್‌, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ವಿಟ್ಟಪ್ಪನಹಳ್ಳಿ ವೆಂಕಟೇಶ್‌, ಸಹಕಾರ ಶಿಕ್ಷಣಾ ಧಿಕಾರಿ ಕೆ.ಮಲ್ಲಯ್ಯ, ವಿಸ್ತರಣಾಧಿಕಾರಿ ಶ್ರೀನಿವಾಸ್‌, ಒಕ್ಕೂಟದ ಮಹೇಶ್‌, ಯೂನಿಯನ್‌ನ ರವಿ, ಲಕ್ಷ್ಮೀ ಹಾಜರಿದ್ದರು.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.