ಜಲ್ಲಿ ಕ್ರಷರ್ ಪರಿಶೀಲಿಸಿದ ಜಿಲ್ಲಾಧಿಕಾರಿ ಸತ್ಯಭಾಮ
Team Udayavani, Feb 3, 2021, 7:20 PM IST
ಮುಳಬಾಗಿಲು: ಕ್ರಷರ್ಗಳನ್ನು ನಡೆಸುವವರು ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಸಿಡಿಮದ್ದುಗಳನ್ನು ಸಿಡಿಸಬೇಕಾದರೆ ಇಲಾಖೆ ಅನುಮತಿ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಸತ್ಯಭಾಮ ಎಚ್ಚರಿಕೆ ನೀಡಿದ್ದಾರೆ.
ತಾಲೂಕಿನ ಆವಣಿ ಹೋಬಳಿ ಹೊಸಕೆರೆ ಮತ್ತು ದೇವರಾಯಸಮುದ್ರ ಸುತ್ತಮುತ್ತಲೂ ನಡೆಸುತ್ತಿರುವ ಜಲ್ಲಿ ಕ್ರಷರ್ಗಳಿಗೆ ಭೇಟಿ ನೀಡಿ ಪರವಾನಿಗೆ ಮತ್ತು ಇತರೆ ದಾಖಲೆಗಳನ್ನು ಪರಿಶೀಲಿಸಿ ಮಾತನಾಡಿ, ಇತ್ತೀಚಿಗೆ ಶಿವಮೊಗ್ಗ ಸಮೀಪ ನಡೆದಿರುವ ದುರ್ಘಟನೆ ಎಲ್ಲರಿಗೂ ಭಯಭೀತಿ ಹುಟ್ಟಿಸುವಂತಾಗಿದೆ. ಅಂತಹ ಘಟನೆಗಳು ತಾಲೂಕಿನಲ್ಲಿ ನಡೆಯದಂತೆ ಮುಂಜಾಗ್ರತೆ ತೆಗೆದುಕೊಳ್ಳಬೇಕೆಂದರು.
ಇದನ್ನೂ ಓದಿ :ಬೇಡಿಕೆ ಈಡೇರಿಕೆಗೆ ಮದ್ಯ ಮಾರಾಟಗಾರರ ಆಗ್ರಹ
ಕ್ರಷರ್ಗಳನ್ನು ನಡೆಸುವವರು ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಸಿಡಿ ಮದ್ದುಗಳನ್ನು ಸಿಡಿಸಬೇಕಾದರೆ ಕಡ್ಡಾಯವಾಗಿ ಇಲಾಖೆ ಅನುಮತಿ ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಅಕ್ರಮವಾಗಿ ಸಿಡಿ ಮದ್ದುಗಳನ್ನು ಸಿಡಿಸಿದರೆ ಅಕ್ಷಮ್ಯ ಅಪರಾಧ. ತಾಲೂಕಿನಲ್ಲಿ ಯಾರಾದರೂ ಅಕ್ರಮ ಗಣಿಗಾರಿಕೆ ನಡೆಸಿದರೆ ಕಠಿಣ ಕಾನೂನು ಕ್ರಮಗಳನ್ನು ತೆಗೆದು ಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ತಾಲೂಕಿನಲ್ಲಿ ನಡೆಯುತ್ತಿರುವ ಜಲ್ಲಿ ಕ್ರಷರ್ ಗಳೆಷ್ಟು ಎಂಬುದರ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ತಹಶೀಲ್ದಾರ್ ರಾಜಶೇಖರ್ಗೆ ಸೂಚಿಸಿದರು. ಆವಣಿ ಹೋಬಳಿ ರಾಜಸ್ವ ನಿರೀಕ್ಷಕ ಸುಬ್ರಹ್ಮಣ್ಯಂ, ಸರ್ವೇ ಇಲಾಖೆ ಶಿವಕುಮಾರ್, ಗ್ರಾಮ ಲೆಕ್ಕಿಗರಾದ ಕಿರಣ್, ಮಾನಸ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ