ದಿವಾಳಿ ಹಂತದಲ್ಲಿದ್ದ ಡಿಸಿಸಿ ಬ್ಯಾಂಕ್‌ ಈಗ ನಂ.1


Team Udayavani, Mar 10, 2022, 2:38 PM IST

Untitled-1

ಕೋಲಾರ: ಶೋಚನೀಯ ಸ್ಥಿತಿಯಲ್ಲಿದ್ದ ಡಿಸಿಸಿ ಬ್ಯಾಂಕನ್ನು ರಾಜ್ಯದಲ್ಲೇ ಅತಿ ಎತ್ತರಕ್ಕೆ ಬೆಳೆಸಿ 1800ಕೋಟಿ ರೂ. ವಹಿವಾಟು ನಡೆಸುವಂತೆ ಮಾಡುವ ಮೂಲಕ ಸಹಕಾರ ರಂಗ ಮಾತ್ರ ಅಭಿವೃದ್ಧಿಯ ಹೆಬ್ಬಾಗಿಲು ಎಂಬುದನ್ನು ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡರು ಸಾಬೀತು ಮಾಡಿದ್ದಾರೆ ಎಂದು ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷರೂ ಆದ ಶಾಸಕ ಜಿ.ಟಿ.ದೇವೇಗೌಡ ಶ್ಲಾಘಿಸಿದರು.

ನಗರದ ಸ್ಕೌಟ್‌ ಭವನದಲ್ಲಿ ಬುಧವಾರ ಕರ್ನಾಟಕರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಒಕ್ಕೂಟ, ಡಿಸಿಸಿ ಬ್ಯಾಂಕ್‌ ಹಾಗೂ ಸಹಕಾರ ಇಲಾಖೆ ಆಯೋಜಿಸಿದ್ದ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನಸಹಕಾರ ಸಂಘಗಳ ಅಧ್ಯಕ್ಷ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಒಂದು ದಿನದ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ದಿವಾಳಿಯಾಗಿದ್ದ ಡಿಸಿಸಿ ಬ್ಯಾಂಕ್‌ ಇಂದು 7 ಲಕ್ಷಮಹಿಳೆಯರಿಗೆ ಸಾಲ ಸೌಲಭ್ಯ ಒದಗಿಸಿದೆ, 1800 ಕೋಟಿರೂ. ವಹಿವಾಟು ನಡೆಸಿದೆ, ಠೇವಣಿ ಸಂಗ್ರ ಹದಲ್ಲೂಸಾಧನೆ ಮಾಡಿದೆ, ಎಟಿಎಂ ಕಾರ್ಡ್‌ ನೀಡಿ ತಂತ್ರಜ್ಞಾನಅಳವಡಿಸಿಕೊಂಡು ನಂ.1 ಬ್ಯಾಂಕ್‌ಗಿದ್ದು, ಈ ಪರಿವರ್ತನೆಗೆ ಕಾರಣರಾದ ಗೋವಿಂದಗೌಡರ ಆಡ ಳಿತ ಮಂಡಳಿಯನ್ನು ಅಭಿನಂದಿಸುತ್ತೇನೆ ಎಂದು ವಿವರಿ ಸಿದರು.

ಸಹಕಾರ ಭವನಕ್ಕೆ ಅನುದಾನದ ಭರವಸೆ: ನಗರದಲ್ಲಿಅಲಂಗೂರು ಶ್ರೀನಿವಾಸ್‌ ಸಚಿವರಾಗಿದ್ದಾಗನೀಡಿರುವ ನಿವೇಶನದಲ್ಲಿ ಸುಂದರ ಸಹಕಾರ ಭವನನಿರ್ಮಿಸಲು ಅಗತ್ಯ ಅನುದಾನವನ್ನು ಸಹಕಾರಮಹಾಮಂಡಳದಿಂದ ಒದಗಿಸುವುದಾಗಿ ಭರವಸೆನೀಡಿದ ಅವರು, ಕೃಷಿಪತ್ತಿನ ಸಹಕಾರ ಸಂಘಗಳಿಗೆಅಗತ್ಯ ತರಬೇತಿಗೆ ಸುಸಜ್ಜಿತ ಕಟ್ಟಡ ಅಗತ್ಯವಿದೆ ಎಂದು ವಿವರಿಸಿದರು.

ಸಾಲ ಸದ್ಬಳಕೆ ಮಾಡಿಕೊಳ್ಳಿ: ಕೋಲಾರ ಜಿಲ್ಲೆ ಹೈನುಗಾರಿಕೆ, ರೇಷ್ಮೆ ಹಾಗೂ ತೋಟಗಾರಿಕೆಯಲ್ಲಿರಾಜ್ಯಕ್ಕೆ ಮಾದರಿಯಾಗಿದೆ. ಕೆ.ಸಿ.ವ್ಯಾಲಿ ನೀರಿನಿಂದಅಂತರ್ಜಲ ಅಭಿವೃದ್ಧಿ ಹೊಂದಿದೆ. ಈ ಸಂದರ್ಭದಲ್ಲಿಸಹಕಾರ ಕ್ಷೇತ್ರದಿಂದ ಸಿಗುವಂತಹ ಸಾಲ ಸೌಲಭ್ಯ ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಜಾಗ ಮಂಜೂರು: ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಪ್ರಾಸ್ತಾವಿಕವಾಗಿ ಮಾತನಾಡಿ,ಮುಳಬಾಗಿಲಿನ ದಿ.ಆಲಂಗೂರು ಶ್ರೀನಿವಾಸ್‌ ಅವರುಸಚಿವರಾಗಿದ್ದ ಸಂದರ್ಭದಲ್ಲಿ ಸಹಕಾರ ಭವನಕ್ಕೆ 11ಸಾವಿರ ಚದರ ಅಡಿ ಜಾಗ ಮಂಜೂರು ಮಾಡಿದ್ದು,ಅಲ್ಲಿ ತರಬೇತಿ ಕೇಂದ್ರ, ಸಹಕಾರ ಭವನ ನಿರ್ಮಿಸಲುಅಗತ್ಯ ಅನುದಾನ ನೀಡಲು ಮನವಿ ಮಾಡಿದರು.ಕ್ರಿಯಾ ಯೋಜನೆ ಮಂಜೂರು: ಆಲಂಗೂರು ಶ್ರೀನಿವಾಸ್‌, ಶ್ರೀನಿವಾಸಗೌಡರು ಹಾಗೂದೇವೇಗೌಡರ ಸಹಕಾರ, ಯೂನಿಯನ್‌ ಅಧ್ಯಕ್ಷ ಮೂರಂಡಹಳ್ಳಿ ಗೋಪಾಲ್‌, ಯೂನಿಯನ್‌ ಕಟ್ಟಡದದುರಸ್ತಿಗೆ 24 ಲಕ್ಷ ರೂ. ಕ್ರಿಯಾ ಯೋಜನೆಯನ್ನುರೂಪಿಸಿರುವುದನ್ನು ಮಂಜೂರು ಮಾಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶ್ರೀನಿವಾಸಗೌಡರು ಫ್ಯಾಕ್ಸ್‌ಸಿಬ್ಬಂದಿಗಳಿಗೆ ವಿಮಾ ಯೋಜನೆಯಲ್ಲಿ ಪ್ರತಿ ಕುಟುಂಬಕ್ಕೆ5 ಲಕ್ಷ ರೂ.ವರೆಗೆ ಆರೋಗ್ಯ ವಿಮೆಯ ಬಾಂಡ್‌ ಅನ್ನುಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕನಿರ್ದೇಶಕ ಎಸ್‌.ಎನ್‌.ಅರುಣ್‌ಕುಮಾರ್‌ ಮಾತನಾಡಿದರು. ಡಿಸಿಸಿ ಬ್ಯಾಂಕ್‌ ಮುಖ್ಯ ಕಾರ್ಯ  ನಿರ್ವಹಣಾಧಿಕಾರಿ ಎಂ.ಆರ್‌.ಶಿವಕುಮಾರ್‌ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕರಾದ ಪೆಮ್ಮಶೆಟ್ಟಿಹಳ್ಳಿ ಸುರೇಶ್‌ ಸ್ವಾಗತಿಸಿ, ಅರುಣಮ್ಮ ಪ್ರಾರ್ಥಿಸಿದರು.

ವೇದಿಕೆಯಲ್ಲಿ ಬ್ಯಾಂಕ್‌ ನಿರ್ದೇಶಕರಾದ ನಾಗನಾಳ ಸೋಮಣ್ಣ, ಕೆ.ವಿ.ದಯಾನಂದ್‌, ಯಲವಾರ ಸೊಣ್ಣೇಗೌಡ, ಯೂನಿಯನ್‌ ನಿರ್ದೇಶಕರಾದ ಅ.ಮು.ಲಕ್ಷ್ಮೀನಾರಾಯಣ್‌, ಚೆಂಜಿಮಲೆ ರಮೇಶ್‌, ಎಸ್‌.ವಿ.ಗೋವರ್ಧನ ರೆಡ್ಡಿ, ಡಿ.ಆರ್‌. ರಾಮಚಂದ್ರೇಗೌಡ, ವಿ.ರಘುಪತಿರೆಡ್ಡಿ, ಪಿ.ಎಂ.ವೆಂಕಟೇಶ್‌, ಎನ್‌.ವೆಂಕಟೇಶ್‌, ಕೆ.ಎಂ.ವಿ.ಮಂಜುನಾಥ್‌, ಸಲಹೆಗಾರಶೇಖ್‌ ಮಹಮದ್‌, ಮುಂತಾದವರು ಹಾಜರಿದ್ದರು.ಇದಕ್ಕೂ ಮುನ್ನ ಸ್ವಸಹಾಯ ಗುಂಪುಗಳ ರಚನೆಜವಾಬ್ದಾರಿ ಮತ್ತು ಹಣಕಾಸಿನ ನೆರವು ಕುರಿತು ಅಪೆಕ್ಸ್‌ಬ್ಯಾಂಕಿನ ನಿವೃತ್ತ ಹಿರಿಯ ವ್ಯವಸ್ಥಾಪಕ ಎಚ್‌.ಎಸ್‌.ಸತೀಶ್‌, ಸರ್ಕಾರದ ವಿವಿಧ ಯೋಜನೆ ಬಡ್ಡಿ ಬಿಲ್ಲುಸಿದ್ಧಪಡೆಸುವ ಕುರಿತು ಎಸ್‌. ಜಿ.ಕುಲಕರ್ಣಿ ತರಬೇತಿ ನೀಡಿದರು.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.