ಡಿಸಿಸಿ ಬ್ಯಾಂಕ್‌ ಪುನಶ್ಚೇತನಕ್ಕೆ ಸಿದ್ದು ಕಾರಣ


Team Udayavani, Feb 14, 2023, 1:18 PM IST

tdy-17

ಕೋಲಾರ: ನಷ್ಟದಲ್ಲಿ ಮುಳುಗಿದ್ದ ಕೋಲಾರ ಡಿಸಿಸಿ ಬ್ಯಾಂಕ್‌ ಪುನಶ್ಚೇತನಕ್ಕೆ ಕಾರಣರಾದವರು ಸಿದ್ದರಾಮಯ್ಯ, ಇದರಿಂದ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ದೊರೆಯುವಂತಾಯಿತು. ಕೋಲಾರ ಜಿಲ್ಲೆಯ 360 ಕೋಟಿ ರೂ. ರೈತರ ಸಾಲ ಮನ್ನಾ ಆಗಿದೆ. ಬ್ಯಾಂಕ್‌ನಿಂದ 6.42 ಲಕ್ಷ ಮಂದಿ ಮಹಿಳೆಯರಿಗೆ ಸಾಲ ಸಿಕ್ಕಿದೆ. ಇದರಿಂದ ಹೈನುಗಾರಿಕೆ ಸಣ್ಣ ವ್ಯವಹಾರ ಮಾಡಿ ಸ್ವಾವಲಂಬಿಗಳಾಗಿದ್ದಾರೆ. ಇದಕ್ಕಾಗಿ ಧನ್ಯವಾದ ಹೇಳುವ ಕಾರ್ಯಕ್ರಮವನ್ನು ವೇಮಗಲ್‌ನಲ್ಲಿ ಆಯೋಜಿಸಿದ್ದೇವೆ ಎಂದು ಮಾಜಿ ಸಚಿವ ಕೃಷ್ಣಬೈರೇಗೌಡ ಹೇಳಿದರು.

ತಾಲೂಕಿನ ವೇಮಗಲ್‌ ಕ್ರೀಡಾಂಗಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಆಯೋಜಿಸಲಾಗಿದ್ದ ಮಹಿಳಾ ಸಮಾವೇಶದಲ್ಲಿ ಅವರು ಮಾತನಾಡಿದರು.

ಅಡುಗೆ ಅನಿಲ 400 ರೂ ಇದ್ದಿದ್ದು, 1100 ಆಗಿದೆ, ಕೇಂದ್ರ ಸರ್ಕಾರ ಎಲ್ಲಾ ಅಹಾರ ಪದಾರ್ಥಗಳ ಮೇಲೆ ತೆರಿಗೆ ಹಾಕಿದೆ, ಅವಲಕ್ಕಿಯನ್ನು ಬಿಟ್ಟಿಲ್ಲ. ಭಾರತೀಯರೆಲ್ಲಾ ದುಡಿಯಬೇಕು, ಅಂಬಾನಿ ಆದಾನಿ ಮಾತ್ರ ಶ್ರೀಮಂತರಾಗಬೇಕು ಎನ್ನುವುದು ಕೇಂದ್ರದ ಧೋರಣೆ. ಶ್ರೀಮಂತರ ತೆರಿಗೆ ಕಡಿಮೆ ಮಾಡಲು ಬಡವರ ಮೇಲೆ ತೆರಿಗೆ ಹಾಕುತ್ತಿದ್ದಾರೆ ಎಂದರು.

ಜನರನ್ನು ಸುಲಿಗೆ ಮಾಡುತ್ತಿರುವ ಬಿಜೆಪಿ ಸರ್ಕಾರವನ್ನು ತೊಲಗಿಸಿ ಭಾಗ್ಯಗಳ ಯೋಜನೆಯನ್ನು ನೀಡುತ್ತಿರುವ ಕಾಂಗ್ರೆಸ್‌ ಸರ್ಕಾರ ಮತ್ತೂಮ್ಮೆ ಬರಬೇಕಿದೆ. ಆದಕ್ಕಾಗಿ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡ ಬೇಕು ಎಂದು ಅವರನ್ನು ಕರೆತಂದಿದ್ದೇವೆ ಎಂದರು.

ಮಾಜಿ ಮಂತ್ರಿ ಕೆ.ಎಚ್‌.ಮುನಿಯಪ್ಪ ಮಾತನಾಡಿ, ಡಿಸಿಸಿ ಬ್ಯಾಂಕ್‌ ಬ್ಯಾಲಹಳ್ಳಿ ನೇತೃತ್ವದಲ್ಲಿ ಅತ್ಯುತ್ತಮ ಕೆಲಸ ಮಾಡಿದ್ದರಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ಸ್ವಸಹಾಯ ಸಂಘಗಳನ್ನು ಆರಂಭಿಸಿದ್ದೇ ಕಾಂಗ್ರೆಸ್‌ ಸರ್ಕಾರ. ಮಹಿಳೆಯರ ಸಾಲದ ಬಡ್ಡಿಯನ್ನು ಸರ್ಕಾರ ಕಟ್ಟುತ್ತಿದೆ, ಇದನ್ನು ಆರಂಭಿಸಿದ್ದು ಸಿದ್ದರಾಮಯ್ಯ ಎನ್ನುವುದನ್ನು ಮನವರಿಕೆ ಮಾಡಿಕೊಳ್ಳಬೇಕು ಎಂದರು.

ಸಿದ್ದರಾಮಯ್ಯ ಕೋಲಾರಕ್ಕೆ ಬಂದಿರುವುದು ನಮ್ಮೆಲ್ಲರ ಅದೃಷ್ಟ, ಗೆದ್ದು ಹೋದರೆ ಬಯಲುಸೀಮೆ ಅಭಿವೃದ್ಧಿ ಸಾಧ್ಯವಾಗುತ್ತದೆ. ಅತ್ಯಧಿಕ ಬಹುಮತದಿಂದ ಸಿದ್ದರಾಮಯ್ಯರನ್ನು ಗೆಲ್ಲಿಸಲು ಸಂಪೂರ್ಣವಾಗಿ ಜತೆಯಲ್ಲಿದ್ದು ಕೆಲಸ ಮಾಡುತ್ತೇನೆ. ಸ್ಥಳೀಯ ಮುಖಂಡರಿಗೆ ಹೆಚ್ಚಿನ ಜವಾಬ್ದಾರಿಕೊಡಬೇಕು ಎಂದು ಮನವಿ ಮಾಡಿದರು.

ವಿಧಾನಪರಿಷತ್‌ ಸದಸ್ಯ ನಜೀರ್‌ ಅಹಮದ್‌ ಮಾತನಾಡಿ, ಕೋಲಾರ ವಿಧಾನಸಭಾ 62,200 ಸ್ತ್ರೀಶಕ್ತಿ ಸಂಘಗಳಿಗೆ 210 ಕೋಟಿ ಸಾಲ ನೀಡಲಾಗಿದೆ, ಶೇ.99 ಸಾಲ ಮರು ಪಾವತಿ ಆಗುತ್ತಿದೆ, 50 ಸಾವಿರ ಸಾಲದ ಮಿತಿಯನ್ನು ಒಂದು ಲಕ್ಷಕ್ಕೇರಿಸಬೇಕು, ಸಾಲದ ಬಾಕಿ ಇರುವ ಕಂತುಗಳನ್ನು ಮನ್ನಾ ಮಾಡಬೇಕು, ರೈತರಿಗೆ 3 ಲಕ್ಷ ರೂ ಶೂನ್ಯಬಡ್ಡಿ ಸಾಲವನ್ನು 5 ಲಕ್ಷಕ್ಕೇರಿಸಬೇಕು, ಕುರಿ ಹಸು ರೇಷ್ಮೆ ಮನೆ ನಿರ್ಮಾಣಕ್ಕೆ ಶೇ.3 ಬಡ್ಡಿ ಸಾಲವನ್ನು 10 ಲಕ್ಷದಿಂದ 20 ಲಕ್ಷಕ್ಕೇರಿಸಬೇಕು, ಎಪಿಎಂಸಿ ಕಾಯ್ದೆ ರದ್ದುಮಾಡಬೇಕು, ಕೋಲಾರ ಎಪಿಎಂಸಿ ಮಾರುಕಟ್ಟೆ 18 ಎಕರೆ ಜಾಗವನ್ನು 100 ಎಕರೆ ಮಾರುಕಟ್ಟೆಯಾಗಿಸಬೇಕು, ಟೊಮೆಟೋ 40 ಸಾವಿರ ಕ್ವಿಂಟಾಲ್‌ ಉತ್ಪಾದನೆಯಾಗುತ್ತದೆ, ಸಂಸ್ಕರಣಾ ಘಟಕ ಆರಂಭವಾಗಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.