ಬಡವರು ಸಾಲವನ್ನು ಮರುಪಾವತಿ ಮಾಡುವ ನಿಷ್ಠೆಯುಳ್ಳವರು


Team Udayavani, Apr 9, 2022, 3:39 PM IST

Untitled-1

ಬೇತಮಂಗಲ/ಕೆಜಿಎಫ್: ಕಷ್ಟಪಟ್ಟು ಜೀವನ ನಡೆಸುವ ಬಡವರು ಎಂದಿಗೂ ಮೋಸಗಾರರಲ್ಲ. ಬ್ಯಾಂಕ್‌ನಿಂದ ಪಡೆದ ಶೂನ್ಯ ಬಡ್ಡಿ ದರದ ಸಾಲವನ್ನು ಮರುಪಾವತಿ ಮಾಡುವ ನಿಷ್ಠೆಯುಳ್ಳವರು ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿಗೋವಿಂದೆಗೌಡ ಹೇಳಿದರು.

ಪಟ್ಟಣದ ದೊಡ್ಡಗಾಂಡ್ಲಹಳ್ಳಿ ಸೇವಾ ಸಹಕಾರ ಸಂಘದಿಂದ ಜಕ್ಕರಸಕುಪ್ಪ ಗ್ರಾಪಂ ವ್ಯಾಪ್ತಿ ಸಾಯಿಬಾಬಾ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಸ್ತ್ರೀ ಶಕ್ತಿ ಸಂಘ ಹಾಗೂ ರೈತರಿಗೆ ಸಾಲ ವಿತರಣಾ ಕಾರ್ಯಕ್ರಮದಲ್ಲಿ 11 ಸ್ತ್ರೀ ಶಕ್ತಿ ಸಂಘಕ್ಕೆ, 91 ರೈತರಿಗೆ ಸಾಲದ ಚೆಕ್‌ ವಿತರಿಸಿ ಮಾತನಾಡಿದರು.

ಇದೀಗ ನೀಡಲಾಗುತ್ತಿರುವ ಸಾಲ ನನಗೆ ಸಮಾಧಾನ ತಂದಿಲ್ಲ. ಇನ್ನು ಹೆಚ್ಚಿನ ರೈತರು ಹಾಗೂ ಸ್ತ್ರೀ ಶಕ್ತಿ ಸಂಘಗಳ ಪ್ರತಿನಿಧಿಗಳಿಗೆ ನೀಡುವ ವ್ಯವಸ್ಥೆ ಯನ್ನು ಕಲ್ಪಿಸಬೇಕು. ಡಿಸಿಸಿ ಬ್ಯಾಂಕ್‌ ಎಂದಿಗೂ ರಾಜಕೀಯ ಬೆರಸುವುದಿಲ್ಲ. ರಾಜಕೀಯ ಹೊರತು ಪಡಿಸಿದ ಕ್ಷೇತ್ರ ಆಗಿರುವುದರಿಂದ ಎಲ್ಲ ರಾಜಕೀಯ ಪಕ್ಷಗಳ ಬೆಂಬಲಿಗರಿಗೆ ಹಾಗೂ ಬಡ ಕುಟುಂಬಗಳ ಮನೆ ಬಾಗಿಲಿಗೆ ಸಾಲವನ್ನು ತಲುಪಿಸುವ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದರು.

1 ಲಕ್ಷ ರೂ.ಗೆ ಸಾಲ ಏರಿಕೆ: ಪ್ರಮಾಣಿಕವಾಗಿ ಬ್ಯಾಂಕ್‌ಗೆ ಮರು ಪಾವತಿ ಮಾಡಿರುವ ಸ್ತ್ರೀ ಶಕ್ತಿ ಸಂಘಗಳಿಗೆ ಇನ್ನು ಮುಂದೆ 1 ಲಕ್ಷ ರೂ.ವನ್ನು ನೀಡಲಾಗುವುದು. ನಿಮ್ಮ ಗ್ರಾಮಗಳಲ್ಲಿರುವ ಬಡ ಕುಟುಂಬಗಳ ಮಹಿಳೆಯರನ್ನು ಗುರುತಿಸಿ ಅವರಿಗೆ ಸಾಲ ನೀಡಲು ಅನುವು ಮಾಡಿಕೊಡಿ ಎಂದು ಮನವಿ ಮಾಡಿ ಮುಖಂಡರು ಎನ್ನಿಸಿಕೊಂಡವರು ತಮ್ಮ ಗ್ರಾಮಗಳಲ್ಲಿರುವ ಬಡ ಮಹಿಳೆಯರನ್ನು ಗುರುತಿಸಿ ಅವರಿಗೆ ಸಾಲ ನೀಡುವಂತ ವ್ಯವಸ್ಥೆ ಮಾಡಬೇಕು. ಅವರಲ್ಲಿ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕಿದೆ ಎಂದು ಹೇಳಿದರು.

ಡಿಸಿಸಿ ಬ್ಯಾಂಕ್‌ನ ನಿರ್ದೇಶಕಿಯಾಗಿ ಪ್ರಮಾಣಿಕ ವಾಗಿ ಸ್ತ್ರೀ ಶಕ್ತಿ ಸಂಘಗಳಿಗೆ ಸಾಲವನ್ನು ಶಾಸಕಿ ರೂಪಕಲಾ ಶಶಿಧರ್‌ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ನೀವು ಆರ್ಶೀವಾದಿಸಬೇಕು ಎಂದು ಮನವಿ ಮಾಡಿದರು.

ಪ್ರಾಮಾಣಿಕವಾಗಿ ಮರು ಪಾವತಿ: ಶಾಸಕಿ ರೂಪಕಲಾ ಮಾತನಾಡಿ, ನಾನು ಶಾಸಕಿಯಾದ ನಂತರ ಹಾಗೂ ಶಾಸಕಿಯಾಗುವ ಮುನ್ನ ದಿನಗಳಿಂದ ಡಿಸಿಸಿ ಬ್ಯಾಂಕ್‌ ನ ನಿರ್ದೇಶಕಿಯಾಗಿ ಕೆಜಿಎಫ್ ವಿಧಾನಸಭೆ ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೆ ತೆರಳಿ ಮನೆ ಬಾಗಿಲಿನಲ್ಲಿ ನಿಂತು ಶೂನ್ಯ ಬಡ್ಡಿ ದರದ ಸಾಲವನ್ನು ವಿತರಿಸಿದ್ದೇನೆ. ಮಹಿಳೆಯರು ಸಹ ಬ್ಯಾಂಕ್‌ಗೆ ಮೋಸ ಮಾಡದೆ, ಪ್ರಾಮಾಣಿಕವಾಗಿ ಮರು ಪಾವತಿ ಮಾಡಿ 2-3 ಬಾರಿ ಸಾಲವನ್ನು ಪಡೆದಿದ್ದಾರೆ. ಕ್ಷೇತ್ರದ ಜನರ ನೋವನ್ನು ನಿವಾರಣೆ ಮಾಡುವುದೆ ನನ್ನ ಆದ್ಯ ಕರ್ತವ್ಯವಾಗಿ ಸ್ವೀಕರಿಸಿ ದುಡಿಯುತ್ತಿದ್ದೇನೆ ಎಂದು ಹೇಳಿದರು.

ಜಕ್ಕರಸಕುಪ್ಪ ಗ್ರಾಪಂ ಅಧ್ಯಕ್ಷ ಚಂದ್ರಪ್ಪ, ಮುಖಂಡ ಬಾಲ ಕೃಷ್ಣ, ಕಂಗಾಡ್ಲಹಳ್ಳಿ ವೆಂಕಟ್‌ ರಾಮ್‌, ಬೇತ ಮಂಗಲ ಸುರೇಂದ್ರಗೌಡ, ಎಪಿಎಂಸಿ ಮಾಜಿ ನಿರ್ದೇ ಶಕ ರಾಮ ಚಂದ್ರ, ಎನ್‌ಟಿಆರ್‌, ಒಬಿಸಿ ಮುನಿಸ್ವಾಮಿ, ದೊಡ್ಡ ಗಾಂ ಡ್ಲಹಳ್ಳಿ ಸೇವಾ ಸಹಕಾರ ಸಂಘದ ಕಾರ್ಯ ದರ್ಶಿ ಮುನಿ ರಾಜ್‌, ವೆಂಕಟರಮಣಪ್ಪ, ರಾಮ ಚಂದ್ರ ರೆಡ್ಡಿ, ಅಶ್ವಥ್‌ ರೆಡ್ಡಿ, ರಂಗಪ್ಪ, ಕೇಶವ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.