ಮನೆಬಾಗಿಲಿಗೆ ಡಿಸಿಸಿ ಬ್ಯಾಂಕ್‌ ಸಾಲ


Team Udayavani, Sep 11, 2019, 11:53 AM IST

kolar-tdy-1

ಕೋಲಾರದ ಜಯನಗರದ ಸಫಲಮ್ಮ ದೇವಾಲಯದ ಆವರಣದಲ್ಲಿ ಡಿಸಿಸಿ ಬ್ಯಾಂಕಿನಿಂದ 14 ಮಹೀಳಾ ಸಂಘಗಳಿಗೆ 56 ಲಕ್ಷ ರೂಗಳ ಸಾಲದ ಚೆಕ್‌ಗಳನ್ನು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ವಿತರಿಸಿದರು.

ಕೋಲಾರ: ಡಿಸಿಸಿ ಬ್ಯಾಂಕಿನಿಂದ ಪ್ರತಿ ಮನೆಗೂ ಸಾಲ ತಲುಪಿಸಿ ಮೀಟರ್‌ ಬಡ್ಡಿ ದಂಧೆ ವಿರುದ್ಧ ಬೃಹತ್‌ ಆಂದೋಲನ ಕೈಗೊಳ್ಳುವ ಅಗತ್ಯವಿದೆ ಎಂದು ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.

ಜಯನಗರದ ಸಫಲಮ್ಮ ದೇವಾಲಯದ ಆವರಣದಲ್ಲಿ ಮಂಗಳವಾರ ಬ್ಯಾಂಕಿನಿಂದ 14 ಮಹಿಳಾ ಸಂಘಗಳಿಗೆ 56 ಲಕ್ಷ ರೂ.ಗಳ ಸಾಲದ ಚೆಕ್ಕನ್ನು ಅರಿಶಿನ, ಕುಂಕುಮ, ಹೂ, ತಾಂಬೂಲದೊಂದಿಗೆ ವಿತರಿಸಿ ಮಾತನಾಡಿದರು.

ಆರ್ಥಿಕ ವ್ಯವಸ್ಥೆ ಸುಧಾರಿಸಿ, ಸಾಲ ವಿತರಣೆ: ತಮ್ಮ ಆಡಳಿತ ಮಂಡಳಿ ಅಧಿಕಾರಕ್ಕೆ ಬಂದ ನಂತರ ಪಾತಾಳ ತಲುಪಿದ್ದ ಬ್ಯಾಂಕಿನ ಆರ್ಥಿಕ ವ್ಯವಸ್ಥೆ ಸುಧಾರಿಸಿ, ಸಾವಿರ ಕೋಟಿ ರೂ. ಸಾಲವನ್ನು ರೈತರು, ಮಹಿಳೆಯರಿಗೆ ನೀಡಲಾಗಿದೆ. ಆದರೆ ಕೆಲವರು ನನ್ನ ವಿರುದ್ಧ ಮಾತನಾಡುತ್ತಲೇ ಇದ್ದಾರೆ. ನನ್ನ ವಿರುದ್ಧ ಟೀಕೆ ಮಾಡುವವರ ಬಗ್ಗೆ ಮಾತನಾಡುವುದಿಲ್ಲ. ದೇವರು ಹಾಗೂ ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡಿ, ಬ್ಯಾಂಕನ್ನು ಉಳಿಸಿರುವ ಬಡವರು, ತಾಯಂದಿರನ್ನು ನಂಬಿದ್ದೇನೆ ಎಂದರು.

ಪಕ್ಷ, ಜಾತಿ, ಧರ್ಮ ನೋಡಿಲ್ಲ, ತಾಯಂದಿರನ್ನು ನಂಬಿ ಸಾಲ ನೀಡುತ್ತಿದ್ದೇವೆ. ಈ ಬ್ಯಾಂಕನ್ನು ಕಟ್ಟಿದವರು ಹೆಣ್ಣು ಮಕ್ಕಳೇ, ನೀವು ನಿಮ್ಮ ಉಳಿತಾಯದ ಹಣವನ್ನು ಡಿಸಿಸಿ ಬ್ಯಾಂಕಿನಲ್ಲೇ ಠೇವಣಿ ಮಾಡಿ ಮತ್ತಷ್ಟು ತಾಯಂದಿರಿಗೆ ಸಾಲ ಸಿಗಲು ನೆರವಾಗಬೇಕು. ತಾಯಂದಿರು ದಲ್ಲಾಳಿಗಳ ವಂಚನೆಗೆ ಬಲಿಯಾಗಬಾರದು ಎಂಬ ಉದ್ದೇಶದಿಂದ ಸಾಲವನ್ನು ಬಹಿರಂಗವಾಗಿ ನೀಡಲಾಗುತ್ತಿದೆ. ನೀವು ಯಾರಿಗೂ ಲಂಚ, ಕಮಿಷನ್‌ ಕೊಡಬೇಡಿ. ನೇರವಾಗಿ ಬ್ಯಾಂಕಿನೊಂದಿಗೆ ವ್ಯವಹರಿಸಿ. ಲಂಚ ನೀಡಿದ್ದರೆ ಕೂಡಲೇ ನನ್ನ ಗಮನಕ್ಕೆ ತನ್ನಿ ಎಂದು ಮನವಿ ಮಾಡಿದರು.

ಬ್ಯಾಂಕಿನ ಇತಿಹಾಸ ಅರಿತು ಮಾತಾಡಲಿ: ಡಿಸಿಸಿ ಬ್ಯಾಂಕ್‌ ನಿರ್ದೇಶಕ ಎಂ.ಎಲ್.ಅನಿಲ್ಕುಮಾರ್‌ ಮಾತನಾಡಿ, ಆಡಳಿತ ಮಂಡಳಿ ವಿರುದ್ಧ ಮಾತನಾಡುವವರು ಬ್ಯಾಂಕ್‌ ಇತಿಹಾಸ ಅರಿತುಕೊಳ್ಳಬೇಕು. ಏಳು ವರ್ಷಗಳ ಹಿಂದೆ ಬ್ಯಾಂಕ್‌ ದಿವಾಳಿಯಾಗಿ ಬೆಂಗಳೂರು ಡಿಸಿಸಿ ಬ್ಯಾಂಕಿನೊಂದಿಗೆ ವಿಲೀನವಾಗುವ ಸ್ಥಿತಿ ಎದುರಾಗಿತ್ತು. ದಿವಾಳಿಯಾಗಿ ಠೇವಣಿ ಹಣವನ್ನು ವಾಪಸ್ಸು ಮಾಡಲು ಸಾಧ್ಯವಾಗದ ಸ್ಥಿತಿಯಲ್ಲಿದ್ದ ಬ್ಯಾಂಕ್‌ ಈಗ ಸಾವಿರ ಕೋಟಿ ಸಾಲ ನೀಡುವಷ್ಟರ ಉನ್ನತಿಗೇರಲು ಬ್ಯಾಲಹಳ್ಳಿ ಗೋವಿಂದಗೌಡರ ನೇತೃತ್ವದ ಆಡಳಿತ ಮಂಡಳಿಯೇ ಕಾರಣ ಎಂಬ ಸತ್ಯ ಅರಿತು ಮಾತನಾಡಬೇಕು ಎಂದು ಬ್ಯಾಂಕ್‌ ವಿರುದ್ಧ ಮಾತನಾಡುವವರಿಗೆ ಟಾಂಗ್‌ ನೀಡಿದರು.

ನಿರ್ದೇಶಕ ನಾಗನಾಳ ಸೋಮಣ್ಣ ಮಾತನಾಡಿ, ಕಳೆದ ಐದು ವರ್ಷ ಗಳಿಂದ ಮನೆ ಬಾಗಿಲಿಗೆ ಸಾಲ ತಲುಪಿಸಿದ್ದೇವೆ. ಮಹಿಳೆಯರಿಗೆ ಇಡೀ ದೇಶದಲ್ಲೇ ಅತಿ ಹೆಚ್ಚು 800 ಕೋಟಿ ಸಾಲ ನೀಡಿದ ಹೆಗ್ಗಳಿಕೆ ನಮ್ಮದು. ತಾಯಂದಿರು ದಲ್ಲಾಳಿಗಳ ಹಾವಳಿಗೆ ತುತ್ತಾಗದಿರಿ ಎಂದರು.

ನಿರ್ದೇಶಕ ಯಲವಾರ ಸೊಣ್ಣೇಗೌಡ ಮಾತನಾಡಿ, ವಾಣಿಜ್ಯ ಬ್ಯಾಕುಗಳಲ್ಲಿ ಠೇವಣಿಯಿಟ್ಟ ನಿಮ್ಮ ಹಣ ಪಡೆಯಲು ಗಂಟೆಗಟ್ಟಲೇ ಕಾಯಬೇಕು. ಡಿಸಿಸಿ ಬ್ಯಾಂಕ್‌ ಮನೆಬಾಗಿಲಿಗೆ ಬಂದು ನಿಮ್ಮನ್ನು ಕೂರಿಸಿ ಸಾಲ ನೀಡುತ್ತದೆ. ಡಿಸಿಸಿ ಬ್ಯಾಂಕ್‌ ನಮ್ಮ ಕುಟುಂಬ ಎಂದು ಭಾವಿಸಿ ಪಡೆದ ಸಾಲ ಸದ್ಬಳಕೆ ಮಾಡಿಕೊಳ್ಳಿ, ಸಮರ್ಪಕವಾಗಿ ಮರುಪಾವತಿಸಿ ಎಂದು ಸಲಹೆ ನೀಡಿದರು.

ನಿರ್ದೇಶಕ ಕೆ.ವಿ.ದಯಾನಂದ್‌ ಮಾತನಾಡಿ, ನಬಾರ್ಡ್‌ ನೆರವು ಕೇವಲ 71 ಕೋಟಿ ರೂ. ಉಳಿದದ್ದನ್ನು ಬ್ಯಾಂಕ್‌ ಠೇವಣಿ ಹಣದಲ್ಲೇ ಸಾಲ ನೀಡುತ್ತಿರುವುದು. ನಬಾರ್ಡ್‌ಗೆ ನಾವು ಬಡ್ಡಿ ಕಟ್ಟುತ್ತೇವೆ. ನಿಮಗೆ ನೀಡುವ ಸಾಲದ ಬಡ್ಡಿಯನ್ನು ಸರ್ಕಾರ ತುಂಬುತ್ತಿದೆ ಎಂದರು. ನಗರಸಭೆ ಮಾಜಿ ಸದಸ್ಯ ಮುರಳಿಗೌಡ ಮಾತನಾಡಿ, ಆರ್ಥಿಕವಾಗಿ ಸತ್ತುಹೋಗಿದ್ದ ಬ್ಯಾಂಕಿಗೆ ಬ್ಯಾಲಹಳ್ಳಿ ಗೋವಿಂದ ಗೌಡರು ಜೀವ ತುಂಬಿದ್ದಾರೆ. ಇಂತಹ ಒಳ್ಳೆಯ ಕೆಲಸವನ್ನು ಪಕ್ಷಾತೀತವಾಗಿ ಬೆಂಬಲಿಸಬೇಕು. ತಾಯಂದಿರು, ರೈತರಿಗೆ ನೆರವಾಗುತ್ತಿರುವ ಬ್ಯಾಂಕ್‌ ವಿರುದ್ಧ ರಾಜಕೀಯ ಟೀಕೆ ಸರಿಯಲ್ಲ ಎಂದರು.

ನಗರ ಹಾಗೂ ಸುತ್ತಮುತ್ತಲ ಗ್ರಾಮಗಳ ಮಹಿಳಾ ಸಂಘಗಳ ಸದಸ್ಯರು ಹಾಜರಿದ್ದು ಸಾಲದ ಚೆಕ್‌ ಸ್ವೀಕರಿಸಿದರು.

ಟಿಎಪಿಸಿಎಂಎಸ್‌ ನಿರ್ದೇಶಕ ಮೂರಾಂಡಹಳ್ಳಿ ಗೋಪಾಲ್, ಛತ್ರಕೋಡಿಹಳ್ಳಿ ಗ್ರಾ.ಪಂ ಸದಸ್ಯ ಕುಮಾರ್‌, ಬಿಜೆಪಿ ಮುಖಂಡ ಸತ್ಯನಾರಾಯಣರಾವ್‌, ಬ್ಯಾಂಕಿನ ವ್ಯವಸ್ಥಾಪಕ ಅಂಬರೀಷ್‌, ಸೂಪರ್‌ ವೈಸರ್‌ ಅಮಿನಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ

Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ

11

Drinking water: ಜಾತ್ರೆಗೆ ಬಂದ ರಾಸುಗಳಿಗೆ ಕುಡಿಯಲು ನೀರಿಲ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.