45 ದಿನದಲ್ಲೇ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ: ವ್ಯಾಪಕ ಪ್ರಶಂಸೆ


Team Udayavani, Sep 17, 2018, 6:00 AM IST

ban17091806medn.jpg

ಕೋಲಾರ: ದೆಹಲಿಯ ನಿರ್ಭಯಾ ಪ್ರಕರಣ ಹೋಲುವಂತೆ ಮಾಲೂರಿನ ವಿದ್ಯಾರ್ಥಿನಿ ರಕ್ಷಿತಾಳನ್ನು ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕರಣ ನಡೆದು 45 ದಿನಗಳಲ್ಲೇ ಆರೋಪಿಗೆ ಕೋರ್ಟ್‌ ಗಲ್ಲು ಶಿಕ್ಷೆ ವಿಧಿಸಿರುವುದು ನ್ಯಾಯಾಲಯ ಹಾಗೂ ಪೊಲೀಸ್‌ ವ್ಯವಸ್ಥೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕೋಲಾರ ಜಿಲ್ಲೆಯ ಮಾಲೂರಿನ ರೈಲ್ವೆ ನಿಲ್ದಾಣ ಸೇತುವೆ ಬಳಿ ಆ.1 ರಂದು ರಕ್ಷಿತಾ ಕೊಲೆ ಪ್ರಕರಣ ನಡೆದಾಗ ರಾತ್ರಿ 7 ರಿಂದ 8 ಗಂಟೆಯೊಳಗೆ ತನಿಖಾಧಿಕಾರಿ ಮಾಲೂರು ಸರ್ಕಲ್‌ ಇನ್ಸ್‌ಪೆಕ್ಟರ್‌ ಸತೀಶ್‌ ನೇತೃತ್ವದ ತಂಡ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದು ಆರೋಪಿಯನ್ನು 48 ಗಂಟೆಯೊಳಗೆ ಪತ್ತೆ ಹಚ್ಚಲು ಹಾಗೂ 45 ದಿನಗಳಲ್ಲೇ ಗಲ್ಲು ಶಿಕ್ಷೆ ವಿಧಿಸಲು ಪ್ರಮುಖ ಕಾರಣವಾಗಿದೆ.

ಪ್ರಮುಖ ಸಾಕ್ಷಿಗಳು: ಘಟನೆ ನಡೆದ ಸ್ಥಳದ ಕುರಿತು ರಕ್ಷಿತಾಳ ಜತೆಯಲ್ಲಿದ್ದ ಆಕೆಯ ಗೆಳತಿ ನೀಡಿದ ಸುಳಿವು ಹಾಗೂ ಸ್ಥಳದಲ್ಲಿ ರಕ್ಷಿತಾಳ ಶಾಲಾ ಬ್ಯಾಗ್‌, ಆಕೆಯ ಹಾಗೂ ಆರೋಪಿಯ ಚಪ್ಪಲಿಗಳನ್ನು ಪೊಲೀಸರು ಸಂಗ್ರಹಿಸಿ ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸುವವರೆಗೂ ಆರೋಪಿ ಸುರೇಶ್‌ಬಾಬು ಕೊಲೆ ಕೃತ್ಯ ನಡೆಸಿದಾಗ ಹಾಕಿಕೊಂಡಿದ್ದ ಬಟ್ಟೆಗಳನ್ನೇ ಧರಿಸಿದ್ದು, ಮತ್ತು ಘಟನೆ ಸ್ಥಳದಲ್ಲಿ ದೊರೆತ ಚಪ್ಪಲಿಗಳು ತನ್ನದೇ ಎಂದು ಒಪ್ಪಿಕೊಂಡಿದ್ದು ಕೂಡ ಆರೋಪ ಸಾಬೀತಿಗೆ ಪ್ರಮುಖ ಸಾಕ್ಷಿಯಾಗಿದೆ. ಆರೋಪಿಯ ಬಟ್ಟೆಯ ಮೇಲಿದ್ದ ರಕ್ತದ ಕಲೆಗಳು ರಕ್ಷಿತಾಳ ಡಿಎನ್‌ಎಗೆ ಹೋಲಿಕೆಯಾಗಿರುವುದನ್ನು ನ್ಯಾಯಾಲಯ ಪ್ರಮುಖ ಸಾಕ್ಷಿಯಾಗಿ ಬಳಸಲ್ಪಟ್ಟಿದೆ.

3 ದಿನದಲ್ಲೇ ಪ್ರಯೋಗಾಲಯ ವರದಿ: ಯಾವುದೇ ಅಪರಾಧ ಪ್ರಕರಣದಲ್ಲಿ ಕೃತ್ಯ ನಡೆದ ಸ್ಥಳದಲ್ಲಿ ಸಂಗ್ರಹಿಸಿದ ವಸ್ತುಗಳ, ಕಲೆಗಳ ಪ್ರಯೋಗಾಲಯದ ವರದಿ ಬರಲು ನಾಲ್ಕೈದು ತಿಂಗಳುಗಳೇ ಬೇಕಾಗುತ್ತದೆ. ಆದರೆ, ಈ ಪ್ರಕರಣದಲ್ಲಿ ಆರೋಪಿ ಅಂಗಿಯ ಮೇಲಿನ ರಕ್ತದ ಕಲೆಯ ವರದಿಯು ಕೇವಲ ಮೂರೇ ದಿನಗಳೊಳಗಾಗಿ ಪೊಲೀಸರ ಕೈಸೇರಿದೆ.

22 ದಿನಗಳೊಳಗೆ ಚಾರ್ಜ್‌ಶೀಟ್‌: ಯಾವುದೇ ಅಪರಾಧ ಪ್ರಕರಣದ ಆರೋಪ ಪಟ್ಟಿ ಸಲ್ಲಿಸಲು 3-4 ತಿಂಗಳು ಅಥವಾ ಕೆಲವೊಮ್ಮೆ ವರ್ಷವನ್ನೂ ತೆಗೆದುಕೊಳ್ಳುತ್ತದೆ. ಆದರೆ, ಈ ಪ್ರಕರಣದಲ್ಲಿ 201 ಪುಟಗಳ ಆರೋಪ ಪಟ್ಟಿಯನ್ನು ತನಿಖಾಧಿಕಾರಿ 22 ದಿನಗಳೊಳಗಾಗಿ ಸಲ್ಲಿಸುವ ಮೂಲಕ ತ್ವರಿತವಾಗಿ ನ್ಯಾಯ ಸಿಗಲು ಸಾಧ್ಯವಾಗಿದೆ.

ತನಿಖಾಧಿಕಾರಿ ಸಲ್ಲಿಸಿದ ಆರೋಪ ಪಟ್ಟಿ, ಸಾಕ್ಷಿಗಳಾಗಿ ಗುರುತಿಸಿದ್ದ 46 ಮಂದಿ ಪೈಕಿ 33 ಮಂದಿಯನ್ನು ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ವಿಚಾರಣೆಗೆ ಅಂಗೀಕರಿಸಿದ್ದಲ್ಲದೇ ನ್ಯಾಯಾಧೀಶರಾದ ಬಿ.ಎಸ್‌.ರೇಖಾ ಇತರೇ ವ್ಯಾಜ್ಯಗಳ ವಿಲೇವಾರಿ ಒತ್ತಡದಲ್ಲಿಯೂ ರಕ್ಷಿತಾ ಕೊಲೆ ಪ್ರಕರಣದ 33 ಸಾಕ್ಷಿಗಳ ವಾದ ಆಲಿಸಿ ದಾಖಲಿಸಿಕೊಂಡು, ಆರೋಪಿ ಕ್ಯತ್ಯವನ್ನು ಸಾಬೀತುಪಡಿಸಿದ ನ್ಯಾಯಾಲಯ, ಘಟನೆ ನಡೆದ 45ನೇ ದಿನಕ್ಕೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದೆ.

ಈವರೆವಿಗೂ ಸುಮಾರು 45ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಧೀಶರಾದ ಬಿ.ಎಸ್‌.ರೇಖಾ ಆರೋಪಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಲೂರಿನ ರಕ್ಷಿತಾ ಹಾಗೂ ಅದೇ ದಿನ ಮಾಸ್ತಿ ಸಮೀಪ ನಡೆದ ಸಾಮೂಹಿಕ ಅತ್ಯಾಚಾರ ಘಟನೆಯ ನಾಲ್ವರು ಸೇರಿ ಒಟ್ಟು ಐವರಿಗೆ ಒಂದೇ ದಿನ ಒಬ್ಬರೇ ಗಲ್ಲು ಶಿಕ್ಷೆ ವಿಧಿಸಿರುವುದು ಜನಮೆಚ್ಚುಗೆಗೆ ಪಾತ್ರವಾಗಿದೆ.

ರಕ್ಷಿತಾ ಕೊಲೆ ಪ್ರಕರಣದಲ್ಲಿ ಆರೋಪಿಗೆ 45 ದಿನದೊಳಗೆ ಗಲ್ಲು ಶಿಕ್ಷೆಯಾಗಿರುವುದು ಪೊಲೀಸ್‌ ಇಲಾಖೆಯ ಪ್ರಯತ್ನಕ್ಕೆ ಸಿಕ್ಕ ಪ್ರತಿಫ‌ಲವಾಗಿದೆ. ಎಸ್ಪಿ ಡಾ.ರೋಹಿಣಿ ಸಫೆಟ್‌ ಕಟೋಚ್‌ರ ಮಾರ್ಗದರ್ಶನದಲ್ಲಿ ಘಟನೆಯ ಗಂಭೀರತೆಯನ್ನು ಅರ್ಥ ಮಾಡಿಕೊಂಡು ತನಿಖೆ ನಡೆಸಿ ಬೇಗ ಆರೋಪ ಪಟ್ಟಿ ಸಲ್ಲಿಸಿದ್ದರಿಂದ ತ್ವರಿತವಾಗಿ ರಕ್ಷಿತಾ ಸಾವಿಗೆ ನ್ಯಾಯ ಒದಗಿಸುವಂತಾಗಿದೆ.
– ಸತೀಶ್‌, ರಕ್ಷಿತಾ ಪ್ರಕರಣದ ತನಿಖಾಧಿಕಾರಿ

ನ್ಯಾಯಾಲಯಕ್ಕೆ ಬಂದರೆ ಗೆದ್ದವರು ಸೋತ, ಸೋತವನು ಸತ್ತ ಎನ್ನುವ ಮಾತನ್ನು ಹುಸಿ ಮಾಡುವಂತೆ ಕೋಲಾರ ನ್ಯಾಯಾಲಯ 45 ದಿನಗಳೊಳಗಾಗಿ ರಕ್ಷಿತಾ ಆರೋಪಿ ಗಲ್ಲು ಶಿಕ್ಷೆ ವಿಧಿಸಿರುವುದು ಸ್ವಾಗತಾರ್ಹ.
– ಸತೀಶ್‌ ನ್ಯಾಯವಾದಿ, ಕೋಲಾರ.

– ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.