ಮೇಲ್ವರ್ಗದ ಶೇ.10 ಮೀಸಲಾತಿ ಆರ್ಥಿಕಮಿತಿ ಕಡಿತಗೊಳಿಸಿ  


Team Udayavani, Feb 27, 2019, 6:56 AM IST

melvrgada.jpg

ಕೋಲಾರ: ಮೀಸಲಾತಿಯಲ್ಲಿ ಕೆನೆಪದರ ನೀತಿ ಜಾರಿಯಾಗಬೇಕು ಮತ್ತು ಮೇಲ್ವರ್ಗದವರಿಗೆ ನೀಡಿರುವ ಶೇ.10 ಮೀಸಲಾತಿಯ ಆರ್ಥಿಕ ಮಿತಿ ಕಡಿಮೆ ಮಾಡಬೇಕೆಂದು ಅಖೀತ ಭಾರತ ದಲಿತ ಕ್ರಿಯಾ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಡಾ.ಚಿ.ನಾ.ರಾಮು ಆಗ್ರಹಿಸಿದರು. ನಗರದ ಪತ್ರಕರ್ತರ ಭವನದಲ್ಲಿ ತಾವು ಬರೆದಿರುವ “ಬಲಿತ ದಲಿತರ ತುಳಿತ, ನನ್ನ ಜನ ಅನಾಥ’ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.

ಮೀಸಲಾತಿ ಜಾರಿಗೆ ಬಂದಾಗಿನಿಂದಲೂ ಪ್ರತಿ ಹತ್ತು ವರ್ಷಕ್ಕೊಮ್ಮೆ ವಿಸ್ತರಣೆಯಾಗುತ್ತಿದೆ. ವೋಟ್‌ ಬ್ಯಾಂಕ್‌ ರಾಜಕೀಯಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಇದನ್ನು ಮುಂದುವರೆಸುತ್ತಿವೆ. ಈ ಮೀಸಲಾತಿ ಸೌಲಭ್ಯ ಪಡೆದುಕೊಂಡವರೆ ಮತ್ತೇ ಮತ್ತೇ ಪಡೆದು ಅರ್ಹರನ್ನು ವಂಚಿಸುತ್ತಿದ್ದಾರೆಂದು ದೂರಿದರು. 

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಸತತವಾಗಿ 7 ಬಾರಿ ಸಂಸದರಾಗಿ ಕೇಂದ್ರ ಸಚಿವರೂ ಆಗಿದ್ದ ಕೆ.ಎಚ್‌.ಮುನಿಯಪ್ಪ ಜಿಪಂ ಚುನಾವಣೆ, ವಿಧಾನಸಭಾ ಚುನಾವಣೆ ಇರಲಿ ತಮ್ಮ ಪುತ್ರಿಯರನ್ನು ಮಾತ್ರವೇ ನಿಲ್ಲಿಸಲು ಪ್ರಯತ್ನಿಸುತ್ತಾರೆ. ತಮ್ಮ ಕುಟುಂಬಕ್ಕೆ ರಾಜಕೀಯ ಮೀಸಲಾತಿ ಮೀಸಲಿಟ್ಟುಕೊಂಡಿದ್ದಾರೆ. ಇದೇ ರೀತಿ ಮಲ್ಲಿಕಾರ್ಜುನ ಖರ್ಗೆ ಮೀಸಲಾತಿ ಸೌಲಭ್ಯದಡಿ ಗೆದ್ದು ತಮ್ಮ ಪುತ್ರನನ್ನು ಗೆಲ್ಲಿಸಿ ಮಂತ್ರಿಯಾಗಿಸಿದ್ದಾರೆಂದು ದೂರಿದರು.

ದಲಿತರ ಮೇಲೆ ಹಲ್ಲೆ ದೌರ್ಜನ್ಯ ನಡೆಯಲು ಮೇಲ್ವರ್ಗದವರು ಯಾರೂ ಕಾರಣರಲ್ಲ, ಸೌಲಭ್ಯ ಕಸಿದುಕೊಳ್ಳುತ್ತಿರುವ ಬಲಿತ ದಲಿತರೇ ಕಾರಣ. ಕೆಲವೇ ಕುಟುಂಬಗಳು ಮೀಸಲಾತಿ ಸೌಲಭ್ಯವನ್ನು ತಮ್ಮ ಕುಟುಂಬಕ್ಕೆ ಮಾತ್ರವೇ ಸಿಗುವಂತೆ ಅನುಭವಿಸುತ್ತಿದ್ದಾರೆಂದರು.

ಇದರಿಂದ ದಲಿತರಿಗೆ ಸೌಲಭ್ಯಗಳು ಸಿಗದೆ ಅವರು ನೂರಾರು ದಲಿತ ಸಂಘಟನೆಗಳನ್ನು ಕಟ್ಟಿಕೊಂಡು ಬದುಕುವಂತಾಗಿದೆ. ಊನಾದಲ್ಲಿ ಗೋ ಚರ್ಮ ಸುಲಿಯುವ ಘಟನೆಗಳು ನಡೆಯುತ್ತಿವೆ. ಸರಿಯಾದ ರೀತಿಯಲ್ಲಿ ಮೀಸಲಾತಿ ಕಲ್ಪಿಸಿದ್ದರೆ ಇಂತಹ ಘಟನೆಗಳು ನಡೆಯುವುದಿಲ್ಲ ಎಂದು ಪ್ರತಿಪಾದಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಮೇಲ್ವರ್ಗದವರಿಗೆ ಶೇ.10 ಮೀಸಲಾತಿ ಕಲ್ಪಿಸಿರುವುದು ಸ್ವಾಗತಾರ್ಹ. ಆದರೆ, ಮೀಸಲಾತಿ ಸೌಲಭ್ಯ ಪಡೆಯಲು ಆರ್ಥಿಕ ಮಿತಿಯನ್ನು 8 ಲಕ್ಷ ಇಟ್ಟಿರುವುದರಿಂದ ಉಳ್ಳವರು ಮೀಸಲಾತಿ ಸೌಲಭ್ಯ ಪಡೆದುಕೊಳ್ಳುತ್ತಾರೆ. ಹೀಗಾಗಿ ಆರ್ಥಿಕ ಮಿತಿ ಕಡಿಮೆ ಇಡಬೇಕೆಂದು ಒತ್ತಾಯಿಸಿದರು.

ಮೀಸಲಾತಿ ಸಮಸ್ಯೆಗಳ ಬಗ್ಗೆ ತಾವು ಪುಸ್ತಕ ಬರೆದು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಪ್ರಕಟಿಸಲು ಮುಂದಾಗಿದ್ದೇವೆ. ಈಗಾಗಲೇ ಕನ್ನಡ ಭಾಷೆಯಲ್ಲಿ ಪ್ರಕಟವಾಗಿರುವ ಪುಸ್ತಕವನ್ನು ಆಂಗ್ಲ ಭಾಷೆಗೆ ತರ್ಜುಮೆ ಮಾಡಲಾಗುತ್ತಿದೆ ಎಂದು ಹೇಳಿದರು. ಯಾವುದೇ ರಾಜಕೀಯ ಪಕ್ಷಕ್ಕೆ ಹಾಗೂ ರಾಜಕೀಯ ಲಾಭಕ್ಕಾಗಿ ತಾವು ಈ ಪುಸ್ತಕ ಬರೆದಿಲ್ಲ.

ಈ ಪುಸ್ತಕದಿಂದ ತಮಗೆ ರಾಜಕೀಯವಾಗಿ ನಷ್ಟವಾದರೂ ಚಿಂತಿಸುವುದಿಲ್ಲ. ಪುಸ್ತಕದ ವಿಚಾರಗಳನ್ನು ದೇಶಾದ್ಯಂತ ಪ್ರಚಾರಪಡಿಸುವುದಾಗಿ ಹೇಳಿದರು. ಅಖೀಲ ಭಾರತ ದಲಿತ ಕ್ರಿಯಾ ಸಮಿತಿ ರಾಜ್ಯಾಧ್ಯಕ್ಷ ಹನುಮಂತಪ್ಪ, ವೆಂಕಟಾಚಲಪತಿ, ಪುಸ್ತಕದ ನಿರ್ವಹಣೆ ಮಾಡಿದ ನೀರಕಲ್ಲು ಶಿವಕುಮಾರ್‌, ವಕೀಲ ಎನ್‌.ಡಿ.ಶ್ರೀನಿವಾಸ್‌ ಇದ್ದರು.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.