31ರಂದು ದೆಹಲಿಗೆ 300 ರೈತರ ಚಲೋ


Team Udayavani, Dec 27, 2020, 8:00 PM IST

31ರಂದು ದೆಹಲಿಗೆ 300 ರೈತರ ಚಲೋ

ಸಾಂದರ್ಭಿಕ ಚಿತ್ರ

ಕೋಲಾರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯಿದೆಗಳನ್ನು ವಿರೋ ಧಿಸಿ ದೆಹಲಿ ಚಲೋ ಹೊರಟಿರುವ ಪಂಜಾಬ್‌, ಹರಿಯಾಣ ರೈತರ ಹೋರಾಟ ಬೆಂಬಲಿಸಿ ಡಿ.31ರಂದು ಕೋಲಾರ ಜಿಲ್ಲೆಯಿಂದ 300 ಮಂದಿ ರೈತರು ದೆಹಲಿ ಚಲೋ ಹೊರಡಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದಲ್ಲಿ ಶನಿವಾರ ನಡೆದ ಸಭೆಯ ನೇತೃತ್ವ ವಹಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಕೇಂದ್ರ ಸರ್ಕಾರವು ಜನಾಭಿಪ್ರಾಯವಿಲ್ಲದೆ ಜಾರಿಗೆ ತಂದಿರುವ ಕಾಯಿದೆಗಳನ್ನು ವಿರೋಧಿ ಸಿ ದೆಹಲಿ ಚಲೋ ಹೊರಟಿರುವ ಪಂಜಾಬ್‌, ಹರಿಯಾಣ ರೈತರು 1 ತಿಂಗಳಿಂದ ನಿರಂತರ ಹೋರಾಟ ಮಾಡುತ್ತಿದ್ದರೂ ಕಾಯಿದೆಗಳನ್ನು ಸಮರ್ಥಿಸಿಕೊಳ್ಳುತ್ತಿ ದೆಯೇ ಹೊರತು ಈ ಬಗ್ಗೆ ಚರ್ಚೆಗೆ ಮುಂದಾಗುತ್ತಿಲ್ಲ ಎಂದು ದೂರಿದರು.

ಕೋಲಾರ ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜು ನಾಥ್‌ ಮಾತನಾಡಿ, ವಿಶೇಷ ಸಂಸತ್‌ ಅಧಿವೇಶನ ನಡೆಸದೆ ಏಕಾಏಕಿ ಕೃಷಿ ಕಾಯಿದೆಗಳನ್ನು ಜಾರಿಗೆ ತಂದಿರು ವುದನ್ನು ಖಂಡಿಸಿ ಹಾಗೂ ದೆಹಲಿ ಚಲೋ ಹೊರಟಿರುವ ರೈತರ ಹೋರಾಟ ಬೆಂಬಲಿಸಿ 31ರಂದು ಜಿಲ್ಲೆಯ 300 ರೈತರು ದೆಹಲಿ ಚಲೋ ಹೊರಡಲು ತೀರ್ಮಾನಿಸಿರುವುದಾಗಿ ತಿಳಿಸಿದರು.

ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಐತಾಂಡಹಳ್ಳಿ ಮುನ್ನಾ, ಬಂಗಾರಪೇಟೆ ತಾ.ಅಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್‌, ಸ್ವಸ್ತಿಕ್‌ ಶಿವು, ಚಾಂದ್‌ಪಾಷ, ಕಿರಣ್‌, ಶೇಖ್‌ ಬಾಬಾಜಾನ್‌, ನವಾಜ್‌ಪಾಷ, ಘೌಸ್‌ ಪಾಷ, ಜಾವೀದ್‌, ಸುಹೇಲ್‌ ಪಾಷ, ಜಮೀರ್‌ ಪಾಷ ಇದ್ದರು.

ಸಹಕಾರ ಬ್ಯಾಂಕ್‌ನಲ್ಲೇ ವಹಿವಾಟು ನಡೆಸಿ :

ಕೋಲಾರ: ಮಹಿಳೆಯರು, ರೈತರು ತಮ್ಮ ವಹಿವಾಟನ್ನು ಸಹಕಾರಿ ಬ್ಯಾಂಕ್‌ನಲ್ಲಿ ನಡೆಸುವ ಮೂಲಕ ಮತ್ತಷ್ಟು ಸಾಲ ಸೌಲಭ್ಯ ಪಡೆದುಕೊಳ್ಳಲು ಮುಂದಾಗಬೇಕು ಎಂದು ಡಿಸಿಸಿ ಬ್ಯಾಂಕ್‌ ನಿರ್ದೇಶಕ ಕೆ.ವಿ.ದಯಾನಂದ್‌ ಸಲಹೆ ನೀಡಿದರು.

ತಾಲೂಕಿನ ಕ್ಯಾಲನೂರು ರೇಷ್ಮೆ ಬೆಳೆಗಾರರ ಹಾಗೂ ರೈತ ಸೇವಾ ಸಹಕಾರ ಸಂಘದಿಂದ ನಡೆದ 2019-2020 ಸಾಲಿನ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಸೊಸೈಟಿ ಮತ್ತು ಬ್ಯಾಂಕ್‌ ನಲ್ಲಿ ಠೇವಣಿ ಮೊತ್ತ ಹೆಚ್ಚಿಸಿದಾಗ ಹೆಚ್ಚಾಗಿ ಸಾಲ ನೀಡಲು ಸಹಕಾರಿಯಾಗುತ್ತದೆ. ರೈತರು, ಮಹಿಳೆ ಯರು ಉಳಿತಾಯ ಹಣವನ್ನು ಡಿಸಿಸಿ ಬ್ಯಾಂಕ್‌ನಲ್ಲಿ ಠೇವಣಿ ಇಡಬೇಕು ಎಂದು ಕೋರಿದರು.

ಸೊಸೈಟಿಗಳ ನಿರ್ವಹಣೆ ಸಮರ್ಪಕವಾಗಿ ಇದ್ದರೆ ಸಾಲ ಪಡೆದುಕೊಂಡಿರುವ ಫಲಾನುಭವಿಗಳು ಪ್ರಾಮಾಣಿಕವಾಗಿ ಮರುಪಾವತಿ ಮಾಡುತ್ತಾರೆ ಎಂದರು. ಸಂಘದ ಅಧ್ಯಕ್ಷ ರಮಾಂಜಿನಪ್ಪ ಮಾತ ನಾಡಿ, ಪ್ರಸಕ್ತ ಸಾಲಿನಲ್ಲಿ ಸಂಘವೂ 11.50 ಲಕ್ಷಲಾಭಗಳಿ ಸಿದ್ದು, 13 ಕೋಟಿ ವಿವಿಧ ಸಾಲ ನೀಡಲಾಗಿದೆ. ಈ ಬಾರಿ 25 ಕೋಟಿ ಸಾಲ ನೀಡುವ ಗುರಿ ಹೊಂದಲಾಗಿದ್ದು, ಕ್ಯಾಲನೂರು ಗ್ರಾಮದಲ್ಲಿನ ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ನೀಡಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ಸಂಘದ ಉಪಾಧ್ಯಕ್ಷ ವೆಂಕಟರೆಡ್ಡಿ, ನಿರ್ದೇಶಕರಾದ ಈರಪ್ಪ, ರಾಜಣ್ಣ, ಮಂಜುನಾಥ್‌, ರತ್ನಮ್ಮ, ಪ್ರಕಾಶ್‌, ಆಂಜಿನಪ್ಪ, ಶಂಕರಪ್ಪ, ಗೌರಮ್ಮ, ಮಾಜಿ ಅಧ್ಯಕ್ಷ ವೆಂಕಟರೆಡ್ಡಿ, ಸಂಘದ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ನವೀನ್‌ ಹಾಜರಿದ್ದರು.

ಟಾಪ್ ನ್ಯೂಸ್

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮManipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

ಇಂದು ಗ್ಯಾರಂಟಿ? ಉಚಿತಗಳಿಗೆ ಷರತ್ತು ಖಚಿತ; ಘೋಷಣೆಯತ್ತ ಜನರ ಕುತೂಹಲ

ಇಂದು ಗ್ಯಾರಂಟಿ? ಉಚಿತಗಳಿಗೆ ಷರತ್ತು ಖಚಿತ; ಘೋಷಣೆಯತ್ತ ಜನರ ಕುತೂಹಲ

ಎಲ್‌ಕೆಜಿ ಸೇರಲು 4 ವರ್ಷ ಆಗಿರಲೇಬೇಕು! ಸರಕಾರದ ನಿಯಮಕ್ಕೆ ಬೆಚ್ಚಿಬಿದ್ದ ಪಾಲಕ, ಪೋಷಕರು

ಎಲ್‌ಕೆಜಿ ಸೇರಲು 4 ವರ್ಷ ಆಗಿರಲೇಬೇಕು! ಸರಕಾರದ ನಿಯಮಕ್ಕೆ ಬೆಚ್ಚಿಬಿದ್ದ ಪಾಲಕ, ಪೋಷಕರು

Daily Horoscope; ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ

Daily Horoscope; ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ

May ತಿಂಗಳಲ್ಲಿ 1.57 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ

May ತಿಂಗಳಲ್ಲಿ 1.57 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

ಮೂರು ತಿಂಗಳಿಂದ ಅಂಗನವಾಡಿ ಮಕ್ಕಳಿಗಿಲ್ಲ ಹಾಲು

ಮೂರು ತಿಂಗಳಿಂದ ಅಂಗನವಾಡಿ ಮಕ್ಕಳಿಗಿಲ್ಲ ಹಾಲು

tdy-15

ಮಕ್ಕಳ ಸ್ವಾಗತಕ್ಕೆ ಶಿಕ್ಷಕರಿಂದ ಸಕಲ ಸಿದ್ಧತೆ

ಮಂತ್ರಿಗಿರಿ ಸಿಗದ ಜಿಲ್ಲೆಗೆ ಉಸ್ತುವಾರಿ ಯಾರು?

ಮಂತ್ರಿಗಿರಿ ಸಿಗದ ಜಿಲ್ಲೆಗೆ ಉಸ್ತುವಾರಿ ಯಾರು?

ಮೃತ್ಯು ಕೂಪವಾಗಿ ಪರಿಣಮಿಸಿದ ಕಲ್ಲಿನ ಕ್ವಾರಿ

ಮೃತ್ಯು ಕೂಪವಾಗಿ ಪರಿಣಮಿಸಿದ ಕಲ್ಲಿನ ಕ್ವಾರಿ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮManipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

ಇಂದು ಗ್ಯಾರಂಟಿ? ಉಚಿತಗಳಿಗೆ ಷರತ್ತು ಖಚಿತ; ಘೋಷಣೆಯತ್ತ ಜನರ ಕುತೂಹಲ

ಇಂದು ಗ್ಯಾರಂಟಿ? ಉಚಿತಗಳಿಗೆ ಷರತ್ತು ಖಚಿತ; ಘೋಷಣೆಯತ್ತ ಜನರ ಕುತೂಹಲ

ಎಲ್‌ಕೆಜಿ ಸೇರಲು 4 ವರ್ಷ ಆಗಿರಲೇಬೇಕು! ಸರಕಾರದ ನಿಯಮಕ್ಕೆ ಬೆಚ್ಚಿಬಿದ್ದ ಪಾಲಕ, ಪೋಷಕರು

ಎಲ್‌ಕೆಜಿ ಸೇರಲು 4 ವರ್ಷ ಆಗಿರಲೇಬೇಕು! ಸರಕಾರದ ನಿಯಮಕ್ಕೆ ಬೆಚ್ಚಿಬಿದ್ದ ಪಾಲಕ, ಪೋಷಕರು