ನ್ಯಾಯಯುತ ಪರಿಹಾರಕ್ಕೆ ಆಗ್ರಹ – ಸಿದ್ದರಾಮಯ್ಯ ಭೇಟಿ


Team Udayavani, Nov 25, 2021, 12:22 PM IST

ಸಿದ್ದರಾಮಯ್ಯ ಬೆಳೆ ಸಮೀಕ್ಷೆ

ಕೋಲಾರ: ಮಳೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಣೆ ಮಾಡಲು ಕೋಲಾರ ಜಿಲ್ಲೆಗೆ ಆಗಮಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಪ್ರೊ.ನಂಜುಂಡಸ್ವಾಮಿ ಸ್ಥಾಪಿತ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸ್ವಾಗತ ಕೋರಿತು. ಸಂಘದ ರಾಜ್ಯ ಯುವ ಘಟಕ ಅಧ್ಯಕ್ಷ ಕಲ್ವಮಂಜಲಿ ರಾಮುಶಿವಣ್ಣ ಮಾತನಾಡಿ, ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಬೆಳೆ ಹಾನಿ ಆಗಿದ್ದು, ಮಳೆ ಆಶ್ರಿತ ಬೆಳೆಗೆ ಪ್ರತಿ ಎಕರೆಗೆ ಎರಡು ಲಕ್ಷ ರೂ., ನೀರಾವರಿ ಆಶ್ರಿತ ತೋಟಗಾರಿಕಾ ಬೆಳೆಗೆ ಎಕರೆ 4 ರಿಂದ 8 ಲಕ್ಷ ರೂ. ಪರಿಹಾರ ನೀಡುವಂತೆ ಒತ್ತಾಯಿಸಿ ಸಿಎಂಗೆ ಮನವಿ ನೀಡಲಾಗಿತ್ತು.

ಆದರೆ, ಸಿಎಂ ರೈತರಿಗೆ ಮಳೆ ಆಶ್ರಿತ ಬೆಳೆ ಗಳ ಗುಂಟೆಗೆ 70 ರೂ. ಅಂದರೆ 1 ಎಕರೆಗೆ 2800 ರೂ. ಮತ್ತೆ ನೀರಾವರಿ ಆಶ್ರಿತ ತೋಟಗಾರಿಕಾ ಬೆಳೆಗೆ 150 ರೂ. ಅಂದ್ರೆ 1 ಎಕರೆಗೆ 6000 ರೂ. ಆಗುತ್ತದೆ ಎಂದು ಹೇಳಿದರು. ಇದು ರೈತರಿಗೆ ನೀಡುವ ಬೆಳೆ ಪರಿಹಾರವಂತು ಅಲ್ಲವೇ ಅಲ್ಲ.

ಇದನ್ನೂ ಓದಿ:- ಅಂಗನವಾಡಿಗಳ ಅಭಿವೃದ್ದಿಗೆ ಶ್ರಮ: ಮೀನಾಕ್ಷಮ್ಮ

ರೈತರಿಗೆ ಅಗೌರವದ ರೀತಿ ಭಿಕ್ಷೆ ರೂಪದಲ್ಲಿ ನೀಡುವುದನ್ನು ಬಿಡಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾಡಿದ ರೈತ ಮುಖಂಡರು, ವಿರೋಧ ಪಕ್ಷದ ನಾಯಕರಾದ ತಾವು ರೈತರಿಗೆ ಸೂಕ್ತ ಪರಿಹಾರ ನೀಡಲು ಸರ್ಕಾರವನ್ನು ಒತ್ತಾಯಿಸುವಂತೆ ಆಗ್ರಹಿಸಿದರು. ಜಿಲ್ಲೆಯ ಬಹುತೇಕ ಶಾಲಾ ಕಾಲೇಜುಗಳು, ಅಂಗನವಾಡಿ ಕಟ್ಟಡಗಳು ಮಳೆಯಿಂದ ಕುಸಿದಿದೆ. ತಿಪ್ಪೇನಹಳ್ಳಿ ಗ್ರಾಮದಲ್ಲಿ ಅಂಗನವಾಡಿ, ಶಾಲಾ ಕೊಠಡಿ ಮತ್ತು ಕ್ಯಾಲನೂರು ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆ ಕೊಠಡಿಗಳು ಕುಸಿದಿವೆ. ವೇಮಗಲ್‌ ಸರ್ಕಾರಿ ಪ್ರೌಢಶಾಲೆ ಕಾಂಪೌಂಡ್‌ ಕೂಡ ಕುಸಿದಿದೆ.

ಜೊತೆಗೆ ವೇಮಗಲ್‌ ಸರ್ಕಾರಿ ಪ್ರೌಢ ಶಾಲೆ ಇಂದು ಅಥವಾ ನಾಳೆ ಬೀಳುವ ಹಂತದಲ್ಲಿದೆ ಎಂದು ವಿವರಿಸಿದರು. ವೇಮಗಲ್‌ ಸರ್ಕಾರಿ ಪ್ರೌಢಶಾಲೆ ಸಂಪೂರ್ಣ ಶಿಥಿಲಗೊಂಡಿದೆ. ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯ ಒದಗಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿ, ಅಧಿವೇಶನದಲ್ಲಿ ಅಂಗನವಾಡಿ ಶಾಲಾ, ಕಾಲೇಜುಗಳ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡಿಸಬೇಕು ಎಂದು ರಾಜ್ಯ ಉಪಾಧ್ಯಕ್ಷ ನಾರಾಯಣಗೌಡ ಮನವಿ ನೀಡಿದರು.

ಸಂಘದ ರಾಜ್ಯ ಉಪಾಧ್ಯಕ್ಷ ನಾರಾಯಣಗೌಡ, ಪ್ರಧಾನ ಕಾರ್ಯದರ್ಶಿ ಜಿ.ನಾರಾಯಣಸ್ವಾಮಿ, ಈಕಂಬಳ್ಳಿ ಮಂಜು, ಜಗನ್ನಾಥ್‌ರೆಡ್ಡಿ, ಪುತ್ತೆರಿ ರಾಜು, ವೇಮಗಲ್‌ ಬಹದ್ದೂರ್‌ಖಾನ್‌, ವೇಮಗಲ್‌ ಗಂಗರಾಜು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.