ಖರೀದಿ ಹಾಲಿನ ದರ ಹೆಚ್ಚಿಸಲು ಆಗ್ರಹ
Team Udayavani, Aug 5, 2020, 11:37 AM IST
ಬಂಗಾರಪೇಟೆ: ಕೋವಿಡ್ ಸೋಂಕು ನಿಯಂತ್ರಣಕ್ಕೆ ಬರುವವರೆಗೂ ಪಶು ಆಹಾರದ ಬೆಲೆ ಇಳಿಕೆ ಮಾಡಿ, ರೈತರಿಂದ ಖರೀದಿ ಮಾಡುವ ಹಾಲಿನ ಬೆಲೆ 40 ರೂ.ಗೆ ನಿಗದಿ ಮಾಡಬೇಕೆಂದು ಒತ್ತಾಯಿಸಿ ರೈತ ಸಂಘ ದಿಂದ ಜಾನುವಾರುಗಳ ಸಮೇತ ಆಸ್ಪತ್ರೆ ವೃತ್ತದಲ್ಲಿ ಪ್ರತಿಭಟಿಸಲಾಯಿತು.
ಪ್ರತಿಭಟನೆ ನೇತೃತ್ವವಹಿಸಿದ್ದ ರೈತ ಸಂಘದ ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್ ಮಾತನಾಡಿ, ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಮಯದಲ್ಲಿ ಹಾಲು ಒಕ್ಕೂಟವು ಹಾಲಿನ ಬೆಲೆ ಏರಿಕೆ ಮಾಡುವುದನ್ನು ಬಿಟ್ಟು, ಉತ್ಪಾದನೆ ಹೆಚ್ಚಾ ಗಿದೆ ಎಂದು ಕಾರಣ ನೀಡಿ 4 ರೂ. ಇಳಿಕೆ ಮಾಡಿರು ವುದು ಲಕ್ಷಾಂತರ ಕುಟುಂಬಗಳ ಮರಣಶಾಸನ ಬರೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಹೈನೋದ್ಯಮವು ಗ್ರಾಮೀಣ ಪ್ರದೇಶದ ಲಕ್ಷಾಂತರ ಕುಟುಂಬಗಳ ಜೀವನಾಡಿಯಾಗಿದ್ದು, ಅದಕ್ಕೆ ಪ್ರೋತ್ಸಾಹ ನೀಡಬೇಕಾದ ಸರ್ಕಾರ ಮತ್ತು ಒಕ್ಕೂಟಗಳು ದಿನೇದಿನೆ ಹಾಲಿನ ಬೆಲೆ ಕಡಿಮೆ ಮಾಡಿ, ಹೈನೋದ್ಯಮ ನಂಬಿರುವ ಕುಟುಂಬಗಳನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡು ತ್ತಿವೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ಮಂಗಸಂದ್ರ ತಿಮ್ಮಣ್ಣ, ಐತಾಂಡಹಳ್ಳಿ ಮಂಜುನಾಥ್, ಅಂಬರೀಶ್, ಗೊಟ್ಟಹಳ್ಳಿ ಮಂಜುನಾಥ್, ಕ್ಯಾಸಂಬಳ್ಳಿ ಪ್ರತಾಪ್, ಕೃಷ್ಣಪ್ಪ, ಮೀಸೆ ವೆಂಕಟೇಶಪ್ಪ, ಹರೀಶ್, ಸುಪ್ರೀಂಚಲ, ವೆಂಕಟರಾಮಪ್ಪ, ನಾಗಪ್ಪ, ಗುಲಾಂಜಾನ್, ಶಿವು, ನಾರಾಯಣ್, ಜಗದೀಶ್ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ