ನಗರದ ರಸ್ತೆ ಸರಿಪಡಿಸಲು ಆಗ್ರಹ: ಪ್ರತಿಭಟನೆ
Team Udayavani, Sep 22, 2019, 1:19 PM IST
ಕೋಲಾರ: ನಗರದಲ್ಲಿ ರಸ್ತೆ ಕೂಡಲೇ ಸರಿಪಡಿಸುವಂತೆ ಹಾಗೂ ಬದಿಯಲ್ಲಿನ ಕಸ ತೆರವುಗೊಳಿಸುವಂತೆ ಆಗ್ರಹಿಸಿ, ಅರಹಳ್ಳಿ ಗೇಟ್ ಮಿಲ್ಲತ್ ನಗರದಲ್ಲಿ ಆರ್.ಪಿ.ಐನಿಂದ ಪ್ರತಿಭಟನೆ ನಡೆಸಿ, ನಗರಸಭೆ ಆಯುಕ್ತ ಶಿವಪ್ರಸಾದ್ಗೆ ಮನವಿ ಸಲ್ಲಿಸಲಾಯಿತು.
ಆರ್.ಪಿ.ಐ ಜಿಲ್ಲಾಧ್ಯಕ್ಷ ಬೇಟಪ್ಪ ಮಾತನಾಡಿ, ನಗರದಲ್ಲಿ ರಸ್ತೆಗಳು ಸಂಪೂ ರ್ಣವಾಗಿ ಹದಗೆಟ್ಟಿವೆ, ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರಿಗೆ ಶಾಲೆಯ ಮಕ್ಕಳಿಗೆ ಓಡಾಡಲು ತುಂಬಾ ತೊಂದರೆ ಯಾಗಿದೆ, ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿವೆ. ರಸ್ತೆ ಬದಿಗಳಲ್ಲಿ ಕಸದ ರಾಶಿಗಳು ಹೆಚ್ಚಾಗುತ್ತಿವೆ. ಇದರಿಂದ ಕೋಲಾರ ಈಗ ಹಳ್ಳಿಗಿಂತಲೂ ಹೀನಾ ಯವಾಗಿದೆ ಎಂದು ದೂರಿದರು.
ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈಗಲಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಕೂಡಲೇ ಆಗಿರುವ ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಆರ್.ಪಿ.ಐ ಉಪಾ ಧ್ಯಕ್ಷ ಕುಪೇಂದ್ರ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಯುವ ಘಟಕದ ಅಧ್ಯಕ್ಷ ಮುನೇಶ್, ಅಲ್ಪಸಂಖ್ಯಾತ ಜಿಲ್ಲಾಧ್ಯಕ್ಷ ಕೆ. ಕೆ.ಪ್ರಧಾನ ಕಾರ್ಯದರ್ಶಿ ಖದೀರ್, ತಾಲೂಕು ಅಧ್ಯಕ್ಷ ಮಕ್ಸೂದ್, ಬಂಗಾರಪೇಟೆ ತಾಲೂಕು ಅಧ್ಯಕ್ಷ ಸೈಯದ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ