ಜಿಲ್ಲಾದ್ಯಂತ ಅರಸು ಜನ್ಮ ದಿನಾಚರಣೆ
ದಿ.ದೇವರಾಜ ಅರಸು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಡೀಸಿ ಮಂಜುನಾಥ್, ಮಾಜಿ ಸಿಎಂ ಬಗ್ಗೆ ಗುಣಗಾನ
Team Udayavani, Aug 21, 2019, 3:51 PM IST
ಕೋಲಾರ: ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಜನ್ಮ ಜಯಂತಿ ಪ್ರಯುಕ್ತ ಎಸ್ಎನ್ಆರ್ ಜಿಲ್ಲಾ ಸ್ಪತ್ರೆಯಲ್ಲಿ ಕಾಂಗ್ರೆಸ್ನಿಂದ ಹೆರಿಗೆಯಾದ ತಾಯಂದಿರಿಗೆ ಹಣ್ಣುಹಂಪಲು ವಿತರಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಂತರ ಕಾಂಗ್ರೆಸ್ ಮುಖಂಡರು, ಜಿಲ್ಲಾಸ್ಪತ್ರೆಗೆ ತೆರಳಿ ಹೆರಿಗೆ ವಾರ್ಡ್ನಲ್ಲಿದ್ದ ಬಾಣಂತಿಯರಿಗೆ ಹಾಗೂ ತಾಯಂದಿರಿಗೆ ಬ್ರೆಡ್, ಹಣ್ಣುಹಂಪಲು ವಿತರಿಸಿದರು.
ಮಾಜಿ ಸಚಿವ ನಿಸಾರ್ ಅಹಮದ್, ಹಿಂದುಳಿದ ವರ್ಗಗಳ ಘಟಕದ ಜಿಲ್ಲಾಧ್ಯಕ್ಷ ಅಶೋಕ್, ಜಿಲ್ಲಾ ಎಸ್ಸಿ ವಿಭಾಗದ ಅಧ್ಯಕ್ಷ ಕೆ.ಜಯದೇವ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದಬಾಬು, ಕೆಪಿಸಿಸಿ ರಾಜ್ಯ ಸಂಚಾಲಕ ಎಚ್.ವಿ ಕುಮಾರ್, ಖಾದ್ರಿಪುರ ಬಾಬು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಪತೆಪ್ಪ, ಕಿಲಾರಿಪೇಟೆ ಮಣಿ, ಪ್ಯಾರೇಜಾನ್ ಇದ್ದರು.
ಅಸಮಾನತೆ ಹೋಗಲಾಡಿಸಲು ದುಡಿದ ದಿವಂಗತ ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ನೇತಾರರಾಗಿದ್ದು, ಈ ನಾಡು ಕಂಡ ಸುಸಂಸ್ಕೃತ ರಾಜಕಾರಣಿ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಬಣ್ಣಿಸಿದರು.
ನಗರದ ಅರಸು ಭವನದಲ್ಲಿ ಜಿಲ್ಲಾಡಳಿತದಿಂದ ನಡೆದ ಜನ್ಮ ದಿನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 28 ವರ್ಷ ಶಾಸಕರಾಗಿದ್ದ ಅರಸು, ಮುಖ್ಯಮಂತ್ರಿಯಾಗಿ ಸಲ್ಲಿಸಿದ ಸೇವೆ ಸ್ಮರಣೀಯ. ಅವರ ಅವಧಿಯಲ್ಲಿ ಸಾಮಾಜಿಕ ಬದಲಾವಣೆ ತರುವ ಮೂಲಕ ಬಡವರು, ಹಿಂದುಳಿದವರ ಮುನ್ನಡೆಗೆ ಶಿಕ್ಷಣ, ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಿದ್ದರು ಎಂದರು.
ಸಾಲ ಮನ್ನಾ ಮಾಡಿದ್ರು: ಉಳುವವನೆ ಭೂಮಿಯ ಒಡೆಯ, ಮೈಸೂರು ಭಾಗದಲ್ಲಿ ಜೀತ ಪದ್ಧತಿ ವಿಮುಕ್ತಿ, ಮಲಹೊರುವ ಪದ್ಧತಿಗೆ ಇತಿಶ್ರೀ ಸೇರಿ ಹಲವು ಕಾಯ್ದೆ ಜಾರಿಗೆ ತಂದಿದ್ದ ಅವರು, ಕೃಷಿ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಿ, ಅಂದಿನ ದಿನದಲ್ಲೇ ಸಾಲಮನ್ನಾ ಮಾಡಿದ್ದರು ಎಂದು ತಿಳಿಸಿದರು.
ಅರಸು ಹಾದಿಯಲ್ಲಿ ನಡೆಯಿರಿ: ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿದ 60 ಹಾಸ್ಟೆಲ್ಗಳು ಹಾಗೂ ಅಲ್ಪಸಂಖ್ಯಾತರ 6 ಹಾಸ್ಟೆಲ್ಗಳಿದ್ದು ಎಲ್ಲ ಕಡೆಯೂ ಊಟ, ವಸತಿ ವ್ಯವಸ್ಥೆ ಉತ್ತಮವಾಗಿಯೇ ಇದೆ. ಅಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದುಕೊಳ್ಳುವುದರ ಜತೆಗೆ ಅರಸು ಅವರ ಹಾದಿಯಲ್ಲಿ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.
ನೆರೆ ಹಿನ್ನೆಲೆಯಲ್ಲಿ ಸರಳ ಆಚರಣೆ: ರಾಜ್ಯದ 22 ಜಿಲ್ಲೆಗಳ 100ಕ್ಕೂ ಹೆಚ್ಚು ತಾಲೂಕುಗಳಲ್ಲಿ ನೆರೆ ಹಾವಳಿ ಹಿನ್ನೆಲೆಯಲ್ಲಿ ದಿ.ದೇವರಾಜ ಅರಸು ಜನ್ಮ ದಿನ ಸರಳವಾಗಿ ಆಚರಿಸಿ, ಅನುದಾನ ನೆರೆ ಸಂತ್ರಸ್ತರಿಗೆ ನೀಡಲು ಸಮ್ಮತಿಸಿರುವ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು, ಸ್ವಇಚ್ಛೆಯಿಂದ ತೀರ್ಮಾನ ಮಾಡಿದ್ದು ಶ್ಲಾಘನೀಯ ಎಂದು ತಿಳಿಸಿದರು.
ಇದೇ ವೇಳೆ ಅರಸು ಭವನದ ಆವರಣದಲ್ಲಿ ಜಿಲ್ಲಾಧಿಕಾರಿ ಸಸಿ ನೆಟ್ಟರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಣ್ಣ, ತಾಲೂಕು ಅಧಿಕಾರಿ ಮಂಜುಳಾ, ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರಾದ ಕಲಾವಿದ ವಿಷ್ಣು, ಫಲ್ಗುಣ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ