ಕ್ಷೇತ್ರದ ಎಲ್ಲ ರೀತಿಯ ಅಭಿವೃದ್ಧಿಗೆ ಬದ್ಧ: ನಾಗೇಶ್‌


Team Udayavani, Oct 1, 2022, 4:03 PM IST

ಕ್ಷೇತ್ರದ ಎಲ್ಲ ರೀತಿಯ ಅಭಿವೃದ್ಧಿಗೆ ಬದ್ಧ: ನಾಗೇಶ್‌

ಮುಳಬಾಗಿಲು: ಕ್ಷೇತ್ರದಲ್ಲಿ ಯಾರು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಮಾಡಿಲ್ಲ, ಆದ್ದರಿಂದ ತಮ್ಮ ಅವಧಿಯಲ್ಲಿ ಎಲ್ಲಾ ರೀತಿ ಯಲ್ಲೂ ಅಭಿವೃದ್ಧಿ ಮಾಡಲು ಮುಂದಾಗಿದ್ದೇನೆ ಎಂದು ಶಾಸಕ ಎಚ್‌.ನಾಗೇಶ್‌ ಹೇಳಿದರು.

ತಾಲೂಕಿನ ಆವಣಿ ಹೋಬಳಿ ಊ.ಮಿಟ್ಟೂರು ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ 4 ಕೋಟಿ ವೆಚ್ಚದಲ್ಲಿ ನಡೆದಿರುವ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ಪಿಚ್ಚಗುಂಟ್ಲಹಳ್ಳಿ ಗ್ರಾಮ ದಲ್ಲಿ 80 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ, ಊ.ಮಿಟ್ಟೂರು ಗ್ರಾಮದಲ್ಲಿ 1 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ, ಎಂ.ಕೊತ್ತೂರು ಗ್ರಾಮದಲ್ಲಿ 10 ಲಕ್ಷ ವೆಚ್ಚದ ಶುದ್ಧ ಕುಡಿವ ನೀರಿನ ಘಟಕ, ಬಟ್ಲಬಾವನಹಳ್ಳಿ ಗ್ರಾಮ ದಲ್ಲಿ 5 ಲಕ್ಷದಲ್ಲಿ ಹೈಮಾಸ್ಟ್‌ ದೀಪ, 10 ಲಕ್ಷ ವೆಚ್ಚದಲ್ಲಿ ಕುಡಿವ ನೀರಿನ ಘಟಕ, ಬಟ್ಲಬಾವನಹಳ್ಳಿಯಿಂದ ಮುಖ್ಯರಸ್ತೆ ವರೆಗೂ 1 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆಯನ್ನು ಮಾಡಿದರು. ಇಲ್ಲಿನ ಗ್ರಾಮಗಳು ಗಡಿ ಭಾಗಕ್ಕೆ ಹೊಂದಿಕೊಂಡಿರುವೆ, ಇಲ್ಲಿ ಯಾರು ಸಹ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಮಾಡಿಲ್ಲ, ಆದ್ದರಿಂದ ನನ್ನ ಅವಧಿಯಲ್ಲಿ ಎಲ್ಲಾ ರೀತಿಯಲ್ಲೂ ಸಹ ಅಭಿವೃದ್ಧಿ ಮಾಡಲು ಮುಂದಾಗಿದ್ದೇನೆ, ಇದು ವರೆಗೂ ತಾಪಂ ಹಾಗೂ ಲೋಕೋಪಯೋಗಿ ಇಲಾಖೆಗಳು ರಸ್ತೆಗಳನ್ನು ಸರಿ ಪಡಿಸಲು ಏಕೆ ಮುಂದಾಗಿಲ್ಲ ಎಂದು ಗರಂ ಆದರು.

ತಾಲೂಕಿನಲ್ಲಿ ಇದುವರೆಗೂ ಯಾವುದೇ ರೀತಿ ಯ ವಿದ್ಯುತ್‌ ಸಮಸ್ಯೆ ಉಂಟಾಗದಂತೆ ನೋಡಿ ಕೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಉತ್ತಮ ಮಳೆಯಾಗಿ ಕೆರೆ-ಕುಂಟೆಗಳು ತುಂಬಿ ತುಳುಕುತ್ತಿವೆ. ಅದಲ್ಲದೆ ಕೆಸಿ ವ್ಯಾಲಿ ನೀರು ಸಹ ತಾಲೂಕಿನ ಕೆರೆಗಳಿಗೆ ಬರುತ್ತಿರುವುದರಿಂದ ತಾಲೂಕಿನಲ್ಲಿ ನೀರಿನ ಸಮಸ್ಯೆ ಇಲ್ಲ ಎಂದರು.

ಎಂ.ಕೊತ್ತೂರು ಗ್ರಾಮದ ಬಳಿ ಕೆರೆ ಕೋಡಿ ಹರಿಯುತ್ತಿದೆ, ಇದರಿಂದ ವಿದ್ಯಾರ್ಥಿಗಳು ಪ್ರತಿ ದಿನ ಶಾಲೆಗೆ ಹೋಗಬೇಕಾಗಿತ್ತು, ಇದನ್ನು ನನ್ನ ಅವಧಿಯಲ್ಲಿ ಸರಿ ಪಡಿಸಲಾಗುವುದು, ಇಲ್ಲಿ ಮೋರಿ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು.

ನರೇಗಾ ಯೋಜನೆ ಅಡಿಯಲ್ಲಿ ಜೆಸಿಬಿ ಮೂಲಕ ಕೆಲಸ ನಡೆಯುತ್ತಿದೆ ಎಂಬ ಆರೋಪಗಳು ಕಡಿಮೆಯಾಗಲಿ ದೂರು ಗಳು ಬಂದರೆ ಅಂತಹ ಕಾಮಗಾರಿಗಳಿಗೆ ಯಾವುದೇ ರೀತಿಯ ಬಿಲ್ಲುಗಳು ಮಾಡದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗುವುದು ಎಂದರು.

ಕೆಲವರು ನಾನೇ ಎಂದವನು ಗ್ರಾಪಂನಲ್ಲಿ ಗೆದ್ದಿಲ್ಲ, ನಾನೇ ದೊಡ್ಡವನು ಎನ್ನವರು ಮೊದಲು ಗ್ರಾಪಂ ಸದಸ್ಯನಾಗಲಿ ಎಂದರು.

ಒಬ್ಬರು ಮತ್ತೂಬ್ಬರಿಂದ ಮತ್ತೂಬ್ಬರಿಗೆ ಚಾಡಿ ಹೇಳುವ ಅವರೊಂದಿಗೆ ವಿವಿಧ ರೀತಿಯ ಹೇಳಿಕೆಗಳನ್ನು ಪದ್ಧತಿಗಳು ಬಿಡಬೇಕು, ಮೊದಲು ಗಾಪಂ ನಲ್ಲಿ ಗೆದ್ದು ಬರಲಿ, ಅದು ಬಿಟ್ಟು ತಾಲೂಕು ಮಟ್ಟದಲ್ಲಿ ರಾಜಕೀಯಕ್ಕೆ ಬರುತ್ತಾರೆ ಯಾರೋ ಮಾತು ಕೇಳಿ ಮಾತನಾಡುವುದನ್ನು ಮೊದಲಿಗೆ ಕೈ ಬಿಡಬೇಕು ಅವರ ಸ್ವಂತ ಬುದ್ಧಿಯಿಂದ ಮಾತನಾಡುವುದನ್ನು ಕಲಿಯಬೇಕು ಎಂದರು.

ತಾಪಂ ಇಒ ಸರ್ವೇಶ್‌, ಲೋಕೋಪಯೋಗಿ ಎಇಇ ಶೇಷಾದ್ರಿ, ಗಣೇಶ್‌, ಎಂಜಿನಿಯರ್‌ ರವಿ, ಮುಖಂಡ ರಾಜೇಂದ್ರ ಪ್ರಸಾದ್‌, ಚಲಪತಿ, ಆವಣಿ ವಿಜಯಕುಮಾರ್‌, ಗೊಲ್ಲಹಳ್ಳಿ ಜಗದೀಶ್‌, ಪೆದ್ದಪ್ಪಯ್ಯ, ಬೈರಪ್ಪ, ಗಂಜಿಗುಂಟೆ ಈಶ್ವರ್‌, ಅಂಬ್ಲಿಕಲ್‌ ವೆಂಕಟಾ ಚಲಪತಿ, ಹೊಸಕೆರೆ ರಘು ಇತರರಿದ್ದರು.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.