ಬಳಕೆ ಮಾಡದೇ ಪಾಳು ಬಿದ್ದ ಪೊಲೀಸ್‌ ವಸತಿ ಗೃಹ

ಬೆಸ್ಕಾಂ ಟ್ರಾನ್ಸ್‌ಫಾರ್ಮರ್‌ ಹಾಕಿದ್ರೂ ಕೇಳಿಲ್ಲ, ಕಸದ ರಾಶಿಯಿಂದ ಅಶುಚಿತ್ವದ ತಾಣವಾದ ಕಟ್ಟಡ

Team Udayavani, Jul 23, 2019, 1:41 PM IST

kolar-tdy-2

ಕೆಜಿಎಫ್: ನಗರದ ರಾಬರ್ಟಸನ್‌ಪೇಟೆಯ ಹೃದಯ ಭಾಗದಲ್ಲಿರುವ ಪೊಲೀಸ್‌ ಕ್ವಾರ್ಟಸ್‌ ( ಸಬ್‌ ಇನ್ಸ್‌ಪೆಕ್ಟರ್‌) ಸಮರ್ಪಕ ನಿರ್ವಹಣೆ ಇಲ್ಲದೆ, ಪಾಳು ಬಿದ್ದಿದೆ.

ಎಂಟು ವರ್ಷಗಳಿಂದ ಯಾರೂ ಇಲ್ಲಿ ವಾಸ ಮಾಡದ ಪ್ರಯುಕ್ತ ಈ ಕಟ್ಟಡ ಈಗ ಕಾರು, ಬೈಕ್‌ಗಳ ಪಾರ್ಕಿಂಗ್‌ ಸ್ಥಳವಾಗಿ ಮಾರ್ಪಾಟಾಗಿದೆ. ಅಲ್ಲದೆ, ಅಕ್ಕಪಕ್ಕದ ನಿವಾಸಿಗಳು ಕಸವನ್ನೂ ಇಲ್ಲಿ ಹಾಕಿದ್ದು, ಈ ರಾಶಿ ಬಿದ್ದಿದ್ದು, ಯಾರೂ ಸ್ವಚ್ಛ ಮಾಡದ ಕಾರಣ ಕಸ ವಿಲೇವಾರಿ ಘಟಕವಾಗಿಯೂ ಪರಿವರ್ತನೆಯಾಗಿದೆ.

ಈ ಹಿಂದೆ ಪುಟ್ಟಮಾದಯ್ಯ ಎಂಬ ಇನ್ಸ್‌ಪೆಕ್ಟರ್‌ ಇದೇ ಮನೆಯಲ್ಲಿ ಹತ್ತು ವರ್ಷ ವಾಸವಾಗಿದ್ದರು. ನಂತರ ಅವರು ಡಿವೈಎಸ್ಪಿಯಾಗಿ ಪದೋನ್ನತಿ ಪಡೆದು ಕೊಳ್ಳೆಗಾಲಕ್ಕೆ ವರ್ಗಾವಣೆಯಾದ ನಂತರ ಈ ಮನೆ ಪಾಳು ಬಿದ್ದಿದೆ. ಮೊದಲು ಪೊಲೀಸರು ಬಟ್ಟೆ ಬದಲಾಯಿಸಿಕೊಳ್ಳಲು ಉಪಯೋಗಿಸುತ್ತಿದ್ದ ಈ ಮನೆ, ನಂತರದ ದಿನಗಳಲ್ಲಿ ಯಾರೂ ಬಾರದ ಕಟ್ಟಡವಾಗಿ ಪರಿವರ್ತಿತವಾಗಿದೆ.

ಪಾರ್ಕಿಂಗ್‌ ಜಾಗ: ಇಂದು ಕಟ್ಟಡದ ಸುತ್ತಲೂ ಖಾಲಿ ಮದ್ಯದ ಬಾಟಲಿಗಳು, ಇಸ್ಪೀಟ್ ಎಲೆಗಳು ಮುಂತಾದವುಗಳು ರಾಶಿಯಾಗಿ ಬಿದ್ದಿದೆ. ಪಕ್ಕದಲ್ಲಿಯೇ ಪೊಲೀಸ್‌ ಠಾಣೆ ಇದ್ದರೂ, ಇಂತಹ ಕೃತ್ಯಗ‌ಳು ಇಲ್ಲಿ ಹೇಗೆ ನಡೆಯುತ್ತದೆ ಎಂಬುದೂ ಆಶ್ವರ್ಯವಾಗಿದೆ. ಕಟ್ಟಡದ ಮುಂಭಾಗದ ಜಾಗದಲ್ಲಿ ಸಾಕಷ್ಟು ಜಾಗವಿದೆ. ಅದನ್ನು ಈಗ ಸಾರ್ವಜನಿಕರು ಬೈಕ್‌ ಪಾರ್ಕಿಂಗ್‌ ಜಾಗವಾಗಿ ಮಾರ್ಪಾಟು ಮಾಡಿಕೊಂಡಿದ್ದಾರೆ. ಗೀತಾ ರಸ್ತೆಯಲ್ಲಿರುವ ಟ್ರಾಫಿಕ್‌ ಸಮಸ್ಯೆ ಇರುವುದರಿಂದ ಇದು ಸಾರ್ವಜನಿಕರಿಗೆ ಅನುಕೂಲವಾಗಿದೆ.

ಟ್ರಾನ್ಸ್‌ ಫಾರ್ಮರ್‌ ಹಾಕಿದ್ರು ಕೇಳಿಲ್ಲ: ಈಚೆಗೆ ಫ‌ುಟ್ಪಾತ್‌ನಲ್ಲಿದ್ದ ಟ್ರಾನ್ಸ್‌ ಫಾರ್ಮರ್‌ ಅನ್ನು ಬೆಸ್ಕಾಂ ವರ್ಗಾವಣೆ ಮಾಡಿತು. ಸಾರ್ವಜನಿಕ ಜಾಗದಲ್ಲಿ ಹಾಕುವ ಬದಲು ಪೊಲೀಸ್‌ ಠಾಣೆಯ ವಸತಿ ಗೃಹದೊಳಗೆ ಹಾಕಿತು.

ಅದನ್ನು ವಿರೋಧಿಸುವ ಇಲ್ಲವೇ, ತನ್ನ ಜಾಗದಲ್ಲಿ ಹಾಕಲು ಅನುಮತಿ ಪಡೆಯುಬೇಕೆನ್ನುವ ಷರತ್ತನ್ನೂ ಪೊಲೀಸ್‌ ಇಲಾಖೆ ವಿಧಿಸಲಿಲ್ಲ. ಇದು ತನ್ನ ಕಟ್ಟಡದ ಮೇಲೆ ಎಷ್ಟು ನಿಗಾವಹಿಸಿದೆ ಎಂಬುದನ್ನು ತೋರಿಸುತ್ತಿದೆ.

ಕಟ್ಟಡ ಬಳಸಿಕೊಳ್ಳಿ: ಹೃದಯದ ಮಧ್ಯಭಾಗದಲ್ಲಿರುವ ಈ ಕಟ್ಟಡವನ್ನು ನವೀಕರಿಸಿ, ಇಲ್ಲವೇ ಹೊಸದಾಗಿ ಕಟ್ಟಿ, ಸಿಇಎನ್‌ ಪೊಲೀಸರಿಗೆ ಇಲ್ಲವೇ ಮಹಿಳಾ ಪೊಲೀಸ್‌ ಠಾಣೆ ಅಥವಾ ಟ್ರಾಫಿಕ್‌ ಪೊಲೀಸ್‌ ಠಾಣೆಗೆ ನೀಡುವ ಕೆಲಸ ಮಾಡಬಹುದಿತ್ತು ಎಂದು ಕೆಲ ಪೊಲೀಸ್‌ ಸಿಬ್ಬಂದಿಗಳ ಅಭಿಪ್ರಾಯವಾಗಿದೆ.

ನೂತನ ಎಸ್ಪಿ ಈಚೆಗೆ ನಗರ ಸಂಚಾರ ಸಂದರ್ಭದಲ್ಲಿ ಈ ಕಟ್ಟಡವನ್ನು ಸಹ ನೋಡಿ ವಿಚಾರಿಸಿದ್ದರು. ಆದರೆ, ಅದರ ಬಗ್ಗೆ ಯಾವ ರೀತಿಯ ಕ್ರಮ ಕೈಗೊಂಡಿದ್ದಾರೆ ಎಂಬುದು ತಿಳಿಯಬೇಕಾಗಿದೆ.

 

● ಬಿ.ಆರ್‌.ಗೋಪಿನಾಥ್‌

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.