ಜನಪ್ರತಿನಿಧಿಗಳಿಂದ ದಲಿತರ ಕಡೆಗಣನೆ; ಮುನಿಯಪ್ಪ

ಬೆಳ್ಳಿರಥಗಳಲ್ಲಿ ಪಲ್ಲಕ್ಕಿಗಳಲ್ಲಿ ಮೆರವಣಿಗೆ ಮಾಡುವುದರಿಂದ ಅಂಬೇಡ್ಕರ್‌ರವರಿಗೆ ನ್ಯಾಯ ಸಿಕ್ಕಂತಾಗುವುದಿಲ್ಲ

Team Udayavani, May 3, 2022, 6:14 PM IST

ಜನಪ್ರತಿನಿಧಿಗಳಿಂದ ದಲಿತರ ಕಡೆಗಣನೆ; ಮುನಿಯಪ್ಪ

ಕೋಲಾರ: ಮೀಸಲಾತಿಯಿಂದ ಬಂದಿರುವ ರಾಜಕಾರಣಿಗಳು, ಅಧಿಕಾರಿಗಳು ತಮ್ಮ ಅಧಿಕಾರ ವನ್ನು ದುರುಪಯೋಗಪಡಿಸಿಕೊಂಡು ಜನಾಂಗದ ಹಿತಾಸಕ್ತಿಯನ್ನು ಕಾಪಾಡುತ್ತಿಲ್ಲ ಎಂದು ಹಿರಿಯ ದಲಿತ ಮುಖಂಡ ಸಿ.ಎಂ. ಮುನಿಯಪ್ಪ ವಿಷಾದಿಸಿದರು.

ತಾಲೂಕಿನ ತೊರದೇವಂಡಹಳ್ಳಿಯಲ್ಲಿ ಮಹಾ ನಾಯಕ ಡಾ.ಬಿ.ಆರ್‌. ಅಂಬೇಡ್ಕರ್‌ ಹಾಗೂ ಬಾಬು ಜಗಜೀವನರಾಂರವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಸದ ಮುನಿಸ್ವಾಮಿ ಅಂಬೇಡ್ಕರ್‌ ನೀಡಿದ ಮೀಸಲಾತಿ ಭಿಕ್ಷೆಯಿಂದ ಸಂಸದರಾಗಿದ್ದರೂ, ಕನಿಷ್ಟ ಅಂಬೇಡ್ಕರ್‌ ಜಯಂತಿಯಂದು ಅಂಬೇಡ್ಕರ್‌ ಸಾಧನೆ ಮತ್ತು ಕೊಡುಗೆ ಬಗ್ಗೆ ಏನನ್ನು ಮಾತನಾಡಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ 14 ರಂದು ಸರ್ಕಾರವು ಜಿಲ್ಲಾಡಳಿತವು ನಡೆಸಿದ ವಿಜೃಂಭಣೆಯ ಕಾರ್ಯಕ್ರಮಕ್ಕಿಂತ ಇಂದು ತೊರದೇವಂಡಹಳ್ಳಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದು ಶ್ಲಾಘಿಸಿದ ಅವರು ಇಡೀ ಊರಿನ ಹಾಗೂ ಆಯೋಜಕರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕ ದಲಿತ ಸಮಾಜ ಸೇನೆಯ ರಾಜ್ಯಾಧ್ಯಕ್ಷ ಸೂಲಿಕುಂಟೆ ಆನಂದ್‌ ಮಾತನಾಡಿ, ಅಂಬೇಡ್ಕರ್‌ ಪ್ರತಿ ದಲಿತ ಮನೆಗಳಿಗೆ ತಲುಪಿದ್ದಾರೆ, ಆದರೆ ದುರದೃಷ್ಟ ಎಂದರೆ ಅವರ ಮನಗಳಲ್ಲಿ ತಲುಪಿಲ್ಲ. ಅಂಬೇಡ್ಕರ್‌ ವಿಚಾರಧಾರೆಗಳನ್ನು ಸಿದ್ಧಾಂತಗಳನ್ನು ಪ್ರತಿಯೊಬ್ಬ ದಲಿತರೂ ಅಳವಡಿಸಿಕೊಂಡಾಗ ಮಾತ್ರ ಅವರಿಗೆ ನಾವು ಗೌರವ ಸಮರ್ಪಣೆ ಮಾಡಿ ದಂತಾಗುತ್ತದೆ ಎಂದರು.

ತೊರದೇವಂಡಹಳ್ಳಿ ಗ್ರಾಪಂ ಅಧ್ಯಕ್ಷೆ ಪೂರ್ಣಿಮಾ, ಉಪಾಧ್ಯಕ್ಷ ವೆಂಕಟಾಚಲಗೌಡ, ನಗರಸಭಾ ಸದಸ್ಯ ಅಂಬರೀಶ್‌, ಎಸ್‌ಎಫ್‌ಐ, ಅಂಬರೀಶ್‌, ಕುಪ್ಪನಹಳ್ಳಿ ಭೈರಪ್ಪ, ಮಾಜಿ ಗ್ರಾಪಂ ಸದಸ್ಯ ಮುನಿವೆಂಕಟಪ್ಪ, ಕಾಂಗ್ರೆಸ್‌ ಮುಖಂಡ ನಾಗರಾಜಗೌಡ, ಅಂಬೇಡ್ಕರ್‌ ಸೇವಾ ಸಮಿತಿ ರಾಜ್ಯಾಧ್ಯಕ್ಷ ಕೆ.ಎಂ.ಸಂದೇಶ್‌, ಗ್ರಾಪಂ ಸದಸ್ಯೆ ಗಾಯತ್ರಿ ಪ್ರಭಾಕರ್‌ ಮತ್ತಿತರರು ಹಾಜರಿದ್ದರು.

ಅಂಬೇಡ್ಕರ್‌ರನ್ನು ಬೆಳ್ಳಿರಥಗಳಲ್ಲಿ ಪಲ್ಲಕ್ಕಿಗಳಲ್ಲಿ ಮೆರವಣಿಗೆ ಮಾಡುವುದರಿಂದ ಅಂಬೇಡ್ಕರ್‌ರವರಿಗೆ ನ್ಯಾಯ ಸಿಕ್ಕಂತಾಗುವುದಿಲ್ಲ. ಅವರು ಎಂದಿಗೂ ಆಡಂಬರದ ಜೀವನವನ್ನು ಅಪೇಕ್ಷೆ ಪಟ್ಟಿರಲಿಲ್ಲ. ಅಂಬೇಡ್ಕರ್‌ ವ್ಯಕ್ತಿ ಪೂಜೆಯನ್ನು ಬಯಸಿರಲಿಲ್ಲ. ಅವರು ಏನು ಹೇಳಿದ್ದಾರೆ ಅದನ್ನು ಮನೆಮನೆಗೆ ತಲುಪಿಸುವ ಕೆಲಸವಾಗಬೇಕಿದೆ.
●ಸಿ.ಎಂ.ಮುನಿಯಪ್ಪ, ಹಿರಿಯ ದಲಿತ ಮುಖಂಡ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.