8000 ಮಂದಿಗೆ ಆಹಾರದ ಕಿಟ್ ವಿತರಣೆ
Team Udayavani, Jun 7, 2021, 7:47 PM IST
ಕೆಜಿಎಫ್: ಕೋವಿಡ್ 2ನೇ ಅಲೆಸಂದರ್ಭದಲ್ಲಿ ಸಮುದಾಯದ 8000ಮಂದಿಗೆ ಆಹಾರ ಕಿಟ್ ವಿತರಣೆ ಮಾಡಲಾಗಿದೆ ಎಂದು ಕರ್ನಾಟಕ ಬ್ರಾಹ್ಮಣಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ಹೇಳಿದರು.
ಬೆಮಲ್ ನಗರದ ಗಾಯತ್ರಿ ಮಂದಿರದಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಬ್ರಾಹ್ಮಣರಿಗೆ ಆಹಾರ ಕಿಟ್ ವಿತರಣೆ ಮಾಡಿ ಮಾತನಾಡಿ, ಕೊರೊನಾ ಸಮಯದಲ್ಲಿ ತೀವ್ರಸಂಕಷ್ಟದಲ್ಲಿರುವ ಬ್ರಾಹ್ಮಣ ಸಮುದಾಯದವರಿಗೆ ಸಹಾಯ ಮಾಡಲು ಇತರೆವರ್ಗದವರು, ರಾಜಕೀಯ ಮುಖಂಡರುಮುಂದೆ ಬಂದಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿರುವ ಬ್ರಾಹ್ಮಣರು ತಮ್ಮ ಸಹಜವೃತ್ತಿಯನ್ನು ನಡೆಸಲಾಗದೆ ಕಷ್ಟ ಪಡುತ್ತಿದ್ದರು.ಅವರಿಗೆ ಅಭಿವೃದ್ಧಿ ಮಂಡಳಿಯಿಂದಆಹಾರ ಕಿಟ್ ನೀಡುವುದು ಬೇಡ ಎಂದುಸರ್ಕಾರದ ಅಧಿಕಾರಿಗಳು ಸೂಚಿಸಿದ್ದರಿಂದ,ದಾನಿ ಗಳಿಂದ ಪಡೆಯಲಾಗುತ್ತಿದೆಎಂದರು. ಬೈರತಿ ಬಸವರಾಜ್,ಗೋಪಾಲಯ್ಯ ಮೊದಲಾದ ಸಚಿವರುಉದಾರವಾಗಿ ಸಹಕಾರ ನೀಡಿದ್ದಾರೆ.
ಇತರೆಸಮುದಾಯದವರು ಕೂಡ ಸೌಲಭ್ಯಕೊಟ್ಟಿದ್ದಾರೆ. ಮಂಡಳಿಯಿಂದ 8000ವಿದ್ಯಾರ್ಥಿಗಳಿಗೆ ವೇತನ, ನವದೆಹಲಿಯಲ್ಲಿಐಎಎಸ್ ತರಬೇತಿ ಶಿಬಿರ ನಡೆಸಲಾಗುತ್ತಿದ್ದು,ಈ ಬಾರಿ ಕನಿಷ್ಠ 35 ಮಂದಿ ಐಎಎಸ್ಅಧಿಕಾರಿಗಳಾಗುವ ವಿಶ್ವಾಸ ಇದೆ.ಬಡವರಿಗೆ 1000 ಮನೆ ನೀಡಲು ಅರ್ಜಿಆಹ್ವಾನಿಸಲಾಗುತ್ತಿದೆ ಎಂದು ಹೇಳಿದರು.ಮಂಡಳಿಯ ನಿರ್ದೇಶಕಿ ವತ್ಸಲಾ,ಬೆಮಲ್ ಬ್ರಾಹ್ಮಣ ಸಂಘದ ಅಧ್ಯಕ್ಷಶೇಷಗಿರಿರಾವ್ ಮಾತನಾಡಿದರು.ವೆಂಕಟೇಶಮೂರ್ತಿ ಸ್ವಾಗತಿಸಿದರು.ಕೆ.ಪಿ.ಸುರೇಶ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ