ಜಿಲ್ಲಾ ಕಾಂಗ್ರೆಸ್ನಿಂದ ನಿರಾಶ್ರಿತರಿಗೆ ಊಟ ವಿತರಣೆ
Team Udayavani, Apr 11, 2020, 3:41 PM IST
ಕೋಲಾರ: ಕೋವಿಡ್-19 ಹರಡುವಿಕೆ ತಡೆಗಾಗಿ ಸರ್ಕಾರ ಲಾಕ್ಡೌನ್ ಮಾಡಿರುವುದರಿಂದ ಸಂಕಷ್ಟದಲ್ಲಿರುವ ನಿರಾಶ್ರಿತರಿಗೆ ಊಟ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ ಸಂಘಸಂಸ್ಥೆಗಳ ಮೇಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಚಂದ್ರಾರೆಡ್ಡಿ ತಿಳಿಸಿದರು.
ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಉಚಿತ ಊಟ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಸಂದರ್ಭದಲ್ಲಿ ಸಾಕಷ್ಟು ಮಂದಿ ಒಪ್ಪತ್ತು ಊಟಕ್ಕಾಗಿ ಅಲೆದಾಡುತ್ತಿದ್ದಾರೆ. ಲಾಕ್ಡೌನ್ ಮುಗಿಯುವತನಕ ಆಯ್ದ ಜಾಗದಲ್ಲಿ ನಿರಾಶ್ರಿತರಿಗೆ ಊಟ ವಿತರಿಸಲಾಗುವುದು ಎಂದು ಹೇಳಿದರು.
ಕೋಲಾರ ನಗರ ಸೇರಿದಂತೆ ತಾಲೂಕುಗಳಲ್ಲಿನ ನಿರಾಶ್ರಿತರ ತಾಣ ಗಳನ್ನು ಗುರುತಿಸಿ ಊಟದ ಪೊಟ್ಟಣ ವಿತರಿಸಲಾಗುವುದು, ಕಾಟ್ಯ ಕರ್ತರು ಅಂತಹ ಸ್ಥಳಗಳನ್ನು ಗುರುತಿಸಿ ಆಯೋಜಕರಿಗೆ ಪಟ್ಟಿ ನೀಡಬೇಕು ಎಂದು ಸೂಚಿಸಿದರು. ಜಿಪಂ ಅಧ್ಯಕ್ಷ ಸಿ.ಎಸ್. ವೆಂಕಟೇಶ್ ಮಾತನಾಡಿ, ಲಾಕ್ಡೌನ್ ಸಮಸ್ಯೆ ಯಿಂದ ಜನ ತತ್ತರಿಸಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಬಡವರಿಗೆ ಸಹಾಯ ಮಾಡುವುದು ಶ್ಲಾಘ ನೀಯ ಎಂದರು.
ಮುಖಂಡರಾದ ಎಲ್.ಎ. ಮಂಜುನಾಥ್, ಕೆ.ಜಯ ದೇವ್, ಕುಮಾರ್, ವಿಶ್ವನಾಥ್, ರಾಮಯ್ಯ, ಎಸ್.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುರಳಿ ಗೌಡ, ಇಕ್ಬಾಲ್ ಅಹಮದ್, ಪ್ರಸಾದ್ ಬಾಬು ಮತ್ತಿತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್ ಮುಖಂಡರು ಗೈರು
MUST WATCH
ಹೊಸ ಸೇರ್ಪಡೆ
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
ದಳಪತಿ ಅಭಿಮಾನಿಗಳ ಟ್ರೋಲ್ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?
RCB: ಈ ಸಲ ಕಪ್ ನಮ್ಮದು…