ಜಿಲ್ಲಾ ಶಾಸಕರು ಕಾದು ನೋಡುವ ತಂತ್ರ!
ಅಭಿವೃದ್ಧಿ ವಿಷಯದಲ್ಲಿ ಅಸಮಾಧಾನವಿದ್ದರೂ ರಾಜೀನಾಮೆ ನೀಡಲ್ಲ | ಜಿಲ್ಲೆಯ 6 ಶಾಸಕರಿಂದ ಸ್ಪಷ್ಟನೆ
Team Udayavani, Jul 8, 2019, 12:39 PM IST
ಕೋಲಾರ: ಕಾಂಗ್ರೆಸ್, ಜೆಡಿಎಸ್ನ 14 ಶಾಸಕರ ರಾಜೀನಾಮೆ ನಂತರ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗುತ್ತಿದ್ದು, ಜಿಲ್ಲೆಯ ಶಾಸಕರು ಎಲ್ಲವನ್ನು ದೂರದಿಂದ ಗಮನಿಸುತ್ತಾ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದಾರೆ.
ಶನಿವಾರ ಮಧ್ಯಾಹ್ನದಿಂದಲೇ ಶಾಸಕರ ರಾಜೀನಾಮೆ ಪ್ರಹಸನ ಆರಂಭವಾಗಿದ್ದರ ಬೆನ್ನಲ್ಲೇ, ಸುದ್ದಿ ಮಾಧ್ಯಮಗಳು ಶ್ರೀನಿವಾಸಪುರ ಶಾಸಕ ಹಾಗೂ ಸ್ಪೀಕರ್ ರಮೇಶ್ಕುಮಾರ್ ಬೆನ್ನಿಗೆ ಬಿದ್ದಿದ್ದರು. ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ, ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಕೆಜಿಎಫ್ ಶಾಸಕಿ ರೂಪಕಲಾ ಹಾಗೂ ಮುಳಬಾಗಿಲು ಶಾಸಕ ಎಚ್.ನಾಗೇಶ್ರ ಪೈಕಿ ಬಹುತೇಕ ಶಾಸಕರು ರಾಜೀನಾಮೆ ನೀಡುತ್ತಾರೆಂದೇ ಸುದ್ದಿ ಪ್ರಸಾರ ಮಾಡಿದ್ದವು.
ಆದರೆ, ಇದಕ್ಕೆ ಅಷ್ಟೇ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದ ಜಿಲ್ಲೆಯ ಶಾಸಕರು ಯಾವುದೇ ಕಾರಣಕ್ಕೂ ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟನೆ ನೀಡಿ, ಸದ್ಯಕ್ಕೆ ತಮ್ಮ ಮೇಲೆ ಉಂಟಾಗಿದ್ದ ಅನುಮಾನವನ್ನು ನಿವಾರಿಸಿಕೊಂಡಿದ್ದರು.
ಅಸಮಾಧಾನ ಇದೆ: ಜಿಲ್ಲೆಯ ಶಾಸಕರು ಪ್ರಸಕ್ತ ರಾಜಕೀಯ ಬೆಳವಣಿಗೆಗಳಲ್ಲಿ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದಾಕ್ಷಣ ಜಿಲ್ಲೆಯ ಶಾಸಕರಿಗೆ ಮೈತ್ರಿ ಸರ್ಕಾರದ ಬಗ್ಗೆ ತಕರಾರುಗಳು ಇಲ್ಲವೆಂದಲ್ಲ. ಜಿಲ್ಲೆಯ ಆರು ಶಾಸಕರಿಗೂ ತಮ್ಮದೇ ಆದ ರೀತಿಯಲ್ಲಿ ಮೈತ್ರಿ ಸರ್ಕಾರದ ಬಗ್ಗೆ ತಕರಾರುಗಳಿವೆ. ತಾವು ಪ್ರತಿನಿಧಿಸುತ್ತಿರುವ ರಾಜಕೀಯ ಪಕ್ಷಗಳು ತಮ್ಮನ್ನು ನಡೆಸಿಕೊಳ್ಳುತ್ತಿರುವ ರೀತಿಗೆ ಅಸಮಾಧಾನವಿದೆ. ತಮ್ಮ ರಾಜಕೀಯ ಅನುಭವಕ್ಕೆ ತಕ್ಕಂತ ಸೂಕ್ತ ಸ್ಥಾನ ಮಾನ ಸಿಕ್ಕಿಲ್ಲವೆಂಬ ದೂರುಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್