ಪೊಲೀಸರು ಪ್ರಕರಣ ದಾಖಲಿಸಿದ್ರೂ ಹೆದರಬೇಕಿಲ್ಲ

ದೂರು ದಾಖಲು ಹಿಂದಿರುವ ರಾಜಕೀಯ ಮುಖಂಡರಿಗೆ ಮುಂದಿನ ದಿನಗಳಲ್ಲಿ ತಕ್ಕಪಾಠ: ಒಕ್ಕಲಿಗ ಮುಖಂಡ ಶಂಕರಪ್ಪ

Team Udayavani, Aug 18, 2019, 4:05 PM IST

kolar-tdy-2

ಬಂಗಾರಪೇಟೆ ತಾಲೂಕಿನ ಒಕ್ಕಲಿಗರ ಭವನದಲ್ಲಿ ಪೊಲೀಸ್‌ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಹಿರಿಯ ವಕೀಲ ಕೆ.ವಿ.ಶಂಕರಪ್ಪ ಮಾತನಾಡಿದರು.

ಬಂಗಾರಪೇಟೆ: ಗಾಂಧಿ ಜೀವನ ಆದರ್ಶ ಪಾಲಿಸುತ್ತಿರುವ ಒಕ್ಕಲಿಗ ಸಮಾಜವು, ನಮ್ಮ ಹಕ್ಕು ಕಸಿದುಕೊಳ್ಳಲು ಮುಂದಾದರೆ ಸುಭಾಷ್‌ಚಂದ್ರ ಬೋಸ್‌ರಂತೆ ಹೋರಾಟ ಮಾಡುವುದಕ್ಕೆ ಸಿದ್ಧವಿದೆ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಹಿರಿಯ ಮುಖಂಡ, ವಕೀಲ ಕೆ.ವಿ.ಶಂಕರಪ್ಪ ಹೇಳಿದರು.

ಇತ್ತೀಚೆಗೆ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಷರತ್ತು ಉಲ್ಲಂಘಿಸಿದ್ದಾರೆ ಎಂದು ಸಮಾಜದ ಕೆಲವು ಮುಖಂಡರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿರುವ ಕ್ರಮ ಖಂಡಿಸಿ ಪಟ್ಟಣದ ಒಕ್ಕಲಿಗರ ಭವನದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಸಮುದಾಯದಲ್ಲಿ ಗೊಂದಲ ಉಂಟಾದಾಗ ಅವುಗಳನ್ನು ಸಾಮೂಹಿಕವಾಗಿ ಬಗೆಹರಿಸುವುದು ಒಕ್ಕಲಿಗರೇ ಆಗಿದ್ದಾರೆ ಎಂದರು.

ಕೇಸಾಕಿದ್ರೂ ಹೆದರಬೇಕಿಲ್ಲ: ಬಹುತೇಕ ಒಕ್ಕಲಿಗರು ಬಲಿಷ್ಠವಾಗಿದ್ದರೂ ಎಲ್ಲಾ ವರ್ಗದ ಜನರ ಪ್ರಗತಿಗೆ ಶ್ರಮಿಸುತ್ತಿದೆ. ಇತ್ತೀಚೆಗೆ ಬಂಗಾರಪೇಟೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಮಾಡಲು ಪೊಲೀಸ್‌ ಇಲಾಖೆ ಅನುಮತಿ ನೀಡಿದ್ದರೂ ಕೆಲವು ರಾಜಕೀಯ ದುರುದ್ದೇಶಗಳಿಂದ ಮುಖಂಡರ ವಿರುದ್ಧ ದೂರು ದಾಖಲಿಸಿರುವುದು ದುರ್ದೈವ. ತಾಲೂಕಿನಲ್ಲಿ ಒಕ್ಕಲಿಗ ಸಮುದಾಯ ಬಲಿಷ್ಠವಾಗುವುದನ್ನು ಸಹಿಸದ ಕೆಲವರು, ಪೊಲೀಸರ ಮೂಲಕ ದೂರು ದಾಖಲಿಸಿದರೂ ಹೆದರಬೇಕಾಗಿಲ್ಲ ಎಂದರು.

ಯಾವುದೇ ಹೋರಾಟ ಮಾಡಬೇಕಾಗಿದ್ದರೂ ಒಕ್ಕಲಿಗ ಸಮಾಜವು ಸಂಘರ್ಷಕ್ಕೆ ಎಡೆಮಾಡಿಕೊಡು ವುದಿಲ್ಲ. ಪ್ರತಿ ವರ್ಷವೂ ಜಯಂತಿ ಕಾರ್ಯಕ್ರಮಗಳು ನಡೆಯುತ್ತಿವೆ. ಎಂದೂ ಇಂತಹ ಪ್ರಕರಣ ಕಂಡು ಬಂದಿಲ್ಲ. ಒಕ್ಕಲಿಗ ಸಮಾಜ ಏನೆಂಬುದನ್ನು ಮುಂದಿನ ದಿನಗಳಲ್ಲಿ ತೋರುತ್ತೇವೆ. ಸಮಾಜದ ಮೇಲೆ ನಡೆಸುತ್ತಿರುವ ಜಿದ್ದಾಜಿದ್ದಿನ ಪ್ರಹಾರಕ್ಕೆ ತಕ್ಕ ಪಾಠ ಅನುಭವಿಸಬೇಕಾಗುತ್ತದೆ ಎಂದು ಎದುರಾಳಿಗಳಿಗೆ ಎಚ್ಚರಿಕೆ ನೀಡಿದರು.

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ವಕ್ಕಲೇರಿ ರಾಮು, ಯಲುವಹಳ್ಳಿ ರಮೇಶ್‌, ತಾಲೂಕು ಅಧ್ಯಕ್ಷೆ ಯಳಮ್ಮ, ಡಿವೈಎಸ್‌ಪಿ ಶಿವಕುಮಾರ್‌, ಕಾರ್ಯಾಧ್ಯಕ್ಷ ಪ್ರಕಾಶ್‌, ಜ್ಯೋತೇನಹಳ್ಳಿ ರಾಮಪ್ಪ, ಚಿಕ್ಕಹೊಸಹಳ್ಳಿ ಮಂಜುನಾಥ್‌, ಮಾರ್ಕಂಡೇ ಯಗೌಡ, ಕಣಿಂಬೆಲೆ ಶ್ರೀನಿವಾಸ್‌, ಕೊಂಡಹಳ್ಳಿ ನಾರಾಯಣಸ್ವಾಮಿ, ಹುನ್ಕುಂದ ವೆಂಕಟೇಶ್‌, ಜುಂಜನಹಳ್ಳಿ ನಾರಾಯಣಸ್ವಾಮಿ, ಬೆಮಲ್ ಆಂಜನೇಯರೆಡ್ಡಿ ಇದ್ದರು.

ಜಿದ್ದಾಜಿದ್ದ ಹೋರಾಟ: ಇತ್ತೀಚಿಗೆ ಪಟ್ಟಣದಲ್ಲಿ ಡಿವೈಎಸ್‌ಪಿ ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಕೆಂಪೇಗೌಡರ ಜಯಂತಿ ಕಾರ್ಯಕ್ರಮ, ಶಾಸಕ ನಾರಾಯಣಸ್ವಾಮಿ ಬೆಂಬಲಿತ ಒಕ್ಕಲಿಗರ ಗುಂಪುಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ ಹೆಚ್ಚುವಂತೆ ಮಾಡಿದೆ. ಮುಖಂಡರ ಮೇಲೆ ಕೇಸು ದಾಖಲಿಸಿದ ಪೊಲೀಸ್‌ ಇಲಾಖೆ ವಿರುದ್ಧ ಶನಿವಾರ ಬೃಹತ್‌ ಪ್ರತಿಭಟನೆ ನಡೆಸುವ ಬಗ್ಗೆ ಜಿಲ್ಲೆಯಲ್ಲಿ ಭಾರೀ ಪ್ರಚಾರವೇ ನಡೆದಿತ್ತು. ಶನಿವಾರ ಮಧ್ಯರಾತ್ರಿಯಿಂದಲೇ ಆರಂಭವಾದ ಮಳೆ ಮಧ್ಯಾಹ್ನವಾದರೂ ನಿಲ್ಲಲಿಲ್ಲ. ಹೀಗಾಗಿ ಪೊಲೀಸ್‌ ವಿರುದ್ಧ ಪ್ರತಿಭಟನೆ ಮಾಡುವುದನ್ನು ಹಿಂಪಡೆದ ಒಕ್ಕಲಿಗರ ಸಂಘವು ತಹಶೀಲ್ದಾರ್‌ಗೆ ಪೊಲೀಸ್‌ ಇಲಾಖೆಯ ವಿರುದ್ಧ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.