ಅಡುಗೆಯವರ ವಿರುದ್ಧ ಮಕ್ಕಳನ್ನು ಎತ್ತಿಕಟ್ಟದಿರಿ

ಗೊಂದಲಗಳಾದರೆ ಪ್ರಾಂಶುಪಾಲರು, ಶಿಕ್ಷಕರೇ ಹೊಣೆ: ಜಿಪಂ ಸಿಇಒ ಎಚ್ಚರಿಕೆ

Team Udayavani, May 21, 2019, 9:20 AM IST

KOLAR-TDY-2

ಕೋಲಾರ: ಜಿಲ್ಲೆಯಲ್ಲಿನ ವಸತಿ ಶಾಲೆಗಳಲ್ಲಿ ಗೊಂದಲಗಳಿಲ್ಲದಂತೆ ನೋಡಿಕೊಳ್ಳಿ, ಅಡುಗೆಯವರು-ಮಕ್ಕಳ ನಡುವೆ ವಿವಾದ ಸೃಷ್ಟಿಸಿ ಇಲ್ಲಸಲ್ಲದನ್ನು ಮಾಡದಿರಿ ಎಂದು ಪ್ರಾಂಶುಪಾಲರು, ಶಿಕ್ಷಕರು, ವಾರ್ಡನ್‌ಗಳಿಗೆ ಜಿಪಂ ಸಿಇಒ ಜಿ.ಜಗದೀಶ್‌ ಎಚ್ಚರಿಕೆ ನೀಡಿದರು.

ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಾಸ್ಟೆಲ್ಗಳ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಮಕ್ಕಳನ್ನು ಅಡುಗೆಯವರ ವಿರುದ್ಧ ಎತ್ತಿಕಟ್ಟಿ ಸಮಸ್ಯೆ ಉಲ್ಬಣಿಸುವಂತೆ ಮಾಡಿದರೆ ತಕ್ಕ ಶಾಸ್ತಿ ಮಾಡುವುದಾಗಿ ತಿಳಿಸಿದರು.

ಪ್ರಾಂಶುಪಾಲರು ತಂಡದ ನಾಯಕರು: ನಿಮ್ಮ ನಡುವಿನ ಸಮಸ್ಯೆಗಳಿಂದಾಗಿ ಮಕ್ಕಳನ್ನು ಎತ್ತಿಕಟ್ಟಿದರೆ ಮುಂದೆ ಅವರ ಮೇಲೆ ಬೀರುವ ಪರಿಣಾಮ ಕೆಟ್ಟದಾಗುತ್ತದೆ. ಒಂದು ವೇಳೆ ನನ್ನ ಗಮನಕ್ಕೇನಾದರೂ ಬಂದಿದ್ದೇ ಆದಲ್ಲಿ ಕೆಟ್ಟ ಮನುಷ್ಯ ನಾಗಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಪ್ರಾಂಶುಪಾಲರು ತಂಡದ ನಾಯಕರಂತೆ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಶೋಕಾಸ್‌ ನೋಟಿಸ್‌: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದುಕೊಂಡಿರುವ ಹಾಸ್ಟೆಲ್ಗಳ ಕುರಿತು ಕಿಡಿಕಾರಿದ ಸಿಇಒ ಜಿ.ಜಗದೀಶ್‌, ಹಲವು ಹಾಸ್ಟೆಲ್ಗಳ ವಾರ್ಡನ್‌ಗಳಿಗೆ ಶೋಕಾಸ್‌ ನೋಟಿಸ್‌ ಜಾರಿಮಾಡುವಂತೆ ಸೂಚಿಸಿದ ಅವರು, ಸಮಾಜ ವಿಜ್ಞಾನ, ವಿಜ್ಞಾನ ಅಲ್ಲದೆ ಕನ್ನಡ ವಿಷಯದಲ್ಲಿಯೂ ಕೆಲವೆಡೆ ವಿದ್ಯಾರ್ಥಿಗಳು ಅನುತ್ತೀರ್ಣಗಿರುವುದನ್ನು ಕೇಳಿ ಆತಂಕ ವ್ಯಕ್ತಪಡಿಸಿದ ಸಿಇಒ, ಇಂಗ್ಲಿಷ್‌, ಗಣಿತಕ್ಕಿಂತಲೂ ಇವು ಕಷ್ಟವಾಗಿವೆಯೇ ಎಂದು ಪ್ರಶ್ನಿಸಿ, ಇದು ಕ್ಷಮಿಸಲಾರದ ಅಪರಾಧ ಎಂದು ಅಸಮಾಧಾನ ವ್ಯಕ್ತಪಡಿಸಿದರು.

4 ಮಂದಿ ಇರುವ ಹಾಸ್ಟೆಲ್ನಲ್ಲಿ 3 ಮಂದಿ ಅನುತ್ತೀರ್ಣ, ಬಾಲಕಿಯರ ಹಾಸ್ಟೆಲ್ನಲ್ಲಿ ಶೇ.60 ಫಲಿತಾಂಶ ಬಂದಿದ್ದರೂ ಸುಮ್ಮನಿರಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಈ ಮಟ್ಟಕ್ಕೆ ಇಳಿದರೆ ಅವರ ಮುಂದಿನ ಭವಿಷ್ಯವಾದರೂ ಹೇಗೆ ಎಂದು ಪ್ರಶ್ನಿಸಿ, ಕೂಡಲೇ ಸಂಬಂಧಪಟ್ಟ ತಾಲೂಕು ಅಧಿಕಾರಿಗಳು ಅನುತ್ತೀರ್ಣರಾಗಿರುವ ಮಕ್ಕಳಿಗಾಗಿ ನುರಿತ ಶಿಕ್ಷಕರಿಂದ ಮಾರ್ಗದರ್ಶನ ಕೊಡಿಸಿ ಪೂರಕ ಪರೀಕ್ಷೆಗಳಲ್ಲಿ ಪಾಸಾಗುವ ಹಂತಕ್ಕಾದರೂ ತನ್ನಿ ಎಂದು ಸೂಚಿಸಿದರು.

ಜಿಲ್ಲೆಯಲ್ಲಿರುವ ಎಲ್ಲಾ ಹಾಸ್ಟೆಲ್ಗಳು, ವಸತಿ ಶಾಲೆಗಳಲ್ಲಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದುಕೊಳ್ಳಲೇಬೇಕಿದ್ದು, ಅದಕ್ಕಾಗಿ ಈ ಕ್ಷಣದಿಂದಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಉಳಿಗಾಲವಿಲ್ಲ: ಜಿಲ್ಲೆಯ ಫಲಿತಾಂಶ ಹೆಚ್ಚಳವಾಗಬೇಕಾದರೆ ನೀವೆಲ್ಲರೂ ಸಹಕರಿಸಬೇಕು. ಕಳೆದ ಬಾರಿಗಿಂತ ಈ ಬಾರಿ ಪ್ರಮಾಣ ಹೆಚ್ಚಾಗಿದೆಯಾದರೂ ಸಮಾಧಾನಕರವಾಗಿಲ್ಲ. ಸರ್ಕಾರವು ಕೋಟ್ಯಂತರ ರೂ. ಖರ್ಚು ಮಾಡಿ, ಎಲ್ಲ ಸೌಲಭ್ಯಗಳನ್ನು ಕಲ್ಪಿಸಿದರೂ ಫಲಿತಾಂಶ ಉತ್ತಮವಾಗಿಲ್ಲ ಎಂದರೆ ಅದಕ್ಕೆ ಕಾರಣರು ನೀವೇ ಆಗಿದ್ದು, ಬದಲಾವಣೆಯಾಗದಿದ್ದರೆ ಉಳಿಗಾಲವಿಲ್ಲ ಎಂದು ಎಚ್ಚರಿಸಿದರು.

ಮುಳಬಾಗಿಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯು ಶೇ.100 ಫಲಿತಾಂಶ ಪಡೆದುಕೊಂಡಿದೆ. ಮುಂದಿನ ವರ್ಷದ ಫಲಿತಾಂಶಕ್ಕಾಗಿ ಮಕ್ಕಳ ಸ್ಥಿತಿಗತಿಗಳ ವರದಿಯನ್ನು ಸಿದ್ಧಪಡಿಸಿಕೊಳ್ಳಬೇಕು. ಹಾಸ್ಟೆಲ್ ವಾರ್ಡನ್‌ಗಳು ಮಕ್ಕಳ ಕಡೆಗೆ ಸಂಪೂರ್ಣ ಗಮನ ನೀಡುವಂತಿದ್ದರೆ ಕಾರ್ಯನಿರ್ವಹಿಸಿ, ಇಲ್ಲವೇ ಸ್ವಯಂಪ್ರೇರಿತರಾಗಿ ನೀವೇ ಕೆಲಸ ಬಿಟ್ಟು ಹೋಗಿ ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.