ವೈದ್ಯೆ ನಿರ್ಲಕ್ಷ್ಯಕ್ಕೆ  3 ತಿಂಗಳ ಗಂಡು ಮಗು ಸಾವು


Team Udayavani, Feb 5, 2022, 2:43 PM IST

ವೈದ್ಯೆ ನಿರ್ಲಕ್ಷ್ಯಕ್ಕೆ  3 ತಿಂಗಳ ಗಂಡು ಮಗು ಸಾವು

ಶ್ರೀನಿವಾಸಪುರ: ವೈದ್ಯರ ನಿರ್ಲಕ್ಷ್ಯದಿಂದ 3 ತಿಂಗಳ ಗಂಡು ಮಗು ಮೃತಪಟ್ಟಿದೆ ಎಂದು ಆರೋಪಿಸಿ ಪೋಷಕರು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಪ್ರತಿಭಟಿಸಿದ ಘಟನೆ ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಗಡಿಭಾಗ ಸೋಮಯಾಜಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ಸೌಮ್ಯಾ ಅವರ ನಿರ್ಲಕ್ಷ್ಯ, ಪೋಷಕರ ಮಾತಿಗೆ ಕಿವಿಗೊಡದೆ ವಿಶ್ವವನ್ನೇ ನೋಡದ 3 ತಿಂಗಳಗಂಡು ಮಗು ಮೃತಪಟ್ಟಿದೆ. ಇದರಿಂದ ಪೋಷಕರು, ಗ್ರಾಮಸ್ಥರು ಈ ಘಟನೆ ಖಂಡಿಸಿ, ಆರೋಗ್ಯ ಕೇಂದ್ರದ ಮುಂದೆ ಪ್ರತಿಭಟಿಸಿದರು.

ದೂರವಾಣಿ ಕರೆ ಮಾಡಿದ್ರೂ ನಿರ್ಲಕ್ಷ್ಯ: ಗ್ರಾಮದ ಗಂಗರತ್ನ, ಸುಬ್ರಮಣಿ ಅವರ ಗಂಡು ಮಗು ಮೃತ ದುರ್ದೈವಿ. ಪೋಷಕರುಹೇಳುವಂತೆ ಗುರುವಾರ ಮಧ್ಯಾಹ್ನ ಆರೋಗ್ಯ ಸಿಬ್ಬಂದಿಅವರ ಸೂಚನೆಯಂತೆ ಪೆಂಟಾವೆಲೆಂಟ್‌ ವ್ಯಾಕ್ಸಿನ್‌ ನೀಡಲಾಗಿದೆ. ನಂತರ ಮನೆಗೆ ತೆರಳಿದ್ದು, ಮಗು ಗಟ್ಟಿಯಾಗಿ ಅಳಲಾರಂಭಿಸಿತು. ಇದರಿಂದ ವೈದ್ಯರಿಗೆ ದೂರವಾಣಿ ಕರೆ ಮಾಡಲಾಗಿದೆ. ಇದಕ್ಕೆ ವೈದ್ಯೆ ಸುಮಾ ಪರವಾಗಿಲ್ಲ ಎಂದಿದ್ದಾರೆ.

ಫೋನ್‌ ಸಂಭಾಷಣೆಯಲ್ಲಿ ತೊಡಗಿದ್ರು: ನಂತರ ರಾತ್ರಿ ಮಗು ನೋವಿನಿಂದ ಕಿರುಚಾಡಿದಾಗ ಮತ್ತೆ ವೈದ್ಯೆ ಸುಮಾ ಅವರಿಗೆ ದೂರವಾಣಿ ಕರೆ ಮಾಡಲಾಗಿದೆ. ಆದರೂ ಜವಾಬ್ದಾರಿಯುತ ವೈದ್ಯರು ಜಾರಿಕೆ ಉತ್ತರ ನೀಡಿದ್ದಾರೆ. ಮತ್ತೆ ಶುಕ್ರವಾರ ಬೆಳಗ್ಗೆ 9 ಗಂಟೆಗೆ ಮಗುವನ್ನು ಆಸ್ಪತ್ರೆಗೆ ಕರೆತರಲಾಗಿದೆ. ವಿಳಂಬ ಧೋರಣೆ ಅನುಸರಿಸಿ ಮೊಬೈಲ್‌ ಫೋನ್‌ ಸಂಭಾಷಣೆಯಲ್ಲಿ ತೊಡಗಿದ್ದಾಗ, ನಾವೇ ವೈದ್ಯರಿಗೆ ಮಗುವಿನ ಪರಿಸ್ಥಿತಿ ಬಗ್ಗೆ ಹೇಳಿದ್ದು, ಆಗಲೂ ಪರವಾಗಿಲ್ಲ ಸುಧಾರಿಸುತ್ತೆ, ಹೆಚ್ಚಿನ ಚಿಕಿತ್ಸೆಗೆ ಪಟ್ಟಣಕ್ಕೆ ಹೋಗಿ ಎಂದಾಗಕೂಡಲೇ ಪಟ್ಟಣದ ಆಸ್ಪತ್ರೆಗೆ ಕರೆತರಲಾಗಿದೆ. ಅಷ್ಟರಲ್ಲಿ ಮಗು ಮೃತಪಟ್ಟಿದೆ.

ವೈದ್ಯರಿಗೆ ತೀವ್ರ ತರಾಟೆ: ಇದರಿಂದ ಮನನೊಂದ ಪೋಷಕರು, ಗ್ರಾಮಸ್ಥರು ಸಂಬಂಧಿಕರ ಜೊತೆಗೂಡಿ ಮೃತ ಮಗುವನ್ನು ಆಸ್ಪತ್ರೆಯಲ್ಲಿಟ್ಟು ವೈದ್ಯರ ನಿರ್ಲಕ್ಷದ ಬಗ್ಗೆ ಘೋಷಣೆ ಕೂಗಿದರು.ಇದೇ ವೇಳೆ ಆರೋಗ್ಯಾಧಿಕಾರಿ ವಿಜಯಮ್ಮ ಭೇಟಿ ನೀಡಿದಸಮಯದಲ್ಲಿ ಪೋಷಕರು, ಗ್ರಾಮಸ್ಥರು ಆರೋಗ್ಯಾಧಿಕಾರಿ ವಿಜಯಮ್ಮ, ಡಾ.ಸುಮಾ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಯಾವುದೇ ಪೂರ್ವಾಪರ ವಿಚಾರಿಸದೆ, ಮಗುವಿಗೆ ವ್ಯಾಕ್ಸಿನ್‌ಕೊಟ್ಟಿದ್ದು, ಮಗುವಿನ ಸಾವಿಗೆ ಕಾರಣರಾಗಿದ್ದಾರೆ ಎಂದು ಅಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರುಹರಿಹಾಯ್ದು, ಕಳೆದ 3 ವರ್ಷಗಳಿಂದ ಡಾ.ಸೌಮ್ಯಾ ಕೆಲಸ ಮಾಡುತ್ತಿದ್ದಾರೆ. ಆದರೂ, ರೋಗಿಗಳ ಜೊತೆ ಹೊಂದಾಣಿಕೆಇಲ್ಲದೆ ಬಾಯಿಗೆ ಬಂದಂತೆ ಗದರುತ್ತಿದ್ದರು. ಇದರಿಂದ ಡಿಎಚ್‌ಒ, ಟಿಎಚ್‌ಒ, ಶಾಸಕರ ಗಮನಕ್ಕೆ ತರಲಾಗಿದೆ. ಆದರೂ, ಈ ವೈದ್ಯೆ ರೋಗಿಗಳ ಪ್ರಾಣಗಳ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.