ರೇಷ್ಮೆ ಮಾರುಕಟ್ಟೆಯಲ್ಲಿ ಇ-ಪೇಮೆಂಟ್‌ ಅವ್ಯವಸ್ಥೆ  

ಉಪನಿರ್ದೇಶಕರಿಗೆ ನೂಲು ಬಿಚ್ಚಾಣಿಕೆದಾರರ ಮುತ್ತಿಗೆ! 2 ಗಂಟೆಗಳ ಕಾಲ ಇ-ಹರಾಜು ಪ್ರಕ್ರಿಯೆ ಬಹಿಷ್ಕಾರ

Team Udayavani, Feb 5, 2021, 4:27 PM IST

E payment

ಶಿಡ್ಲಘಟ್ಟ: ನಗರದ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ಇ-ಪೇಮೆಂಟ್‌ ಅವ್ಯವಸ್ಥೆಯಿಂದ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿ ರೇಷ್ಮೆ ನೂಲು ಬಿಚ್ಚಾಣಿಕೆದಾರರು ಗುರುವಾರ ಮಾರುಕಟ್ಟೆಯಲ್ಲಿ 2 ಗಂಟೆಗಳ ಕಾಲ ಇ-ಹರಾಜು ಪ್ರಕ್ರಿಯೆ ಬಹಿಷ್ಕರಿಸಿ ಉಪನಿರ್ದೇಶಕರನ್ನು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ತರಾಟೆ: ರಾಜ್ಯದಲ್ಲಿ ಅತೀ ದೊಡ್ಡ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ಇ-ಪೇಮೆಂಟ್‌ ವ್ಯವಸ್ಥೆಯನ್ನು ಜಾರಿಗೊಳಿಸುವ ಮೊದಲು ರೇಷ್ಮೆ ನೂಲು ಬಿಚ್ಚಾಣಿಕೆದಾರರು ಮತ್ತು ರೇಷ್ಮೆ ಬೆಳೆಗಾರರೊಂದಿಗೆ ಸೌಜನ್ಯಕ್ಕಾದರೂ ಸಭೆ ನಡೆಸದೆ ಮಾರುಕಟ್ಟೆಯ ಅಧಿಕಾರಿ ಗಳು ಸರ್ವಾಧಿಕಾರಿ ಧೋರಣೆ ಅನುಸರಿಸಿದ ಫಲದಿಂದಾಗಿ ಪ್ರತಿನಿತ್ಯ ಸಂಕಷ್ಟ ಎದುರಿಸುವಂತಾಗಿದೆ ಎಂದು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು.

ಮಾರುಕಟ್ಟೆ ಹೊರ ಭಾಗದಲ್ಲಿ ಮಾರಾಟ: ಇ-ಪೇಮೆಂಟ್‌ ವ್ಯವಸ್ಥೆ ಜಾರಿಗೊಳಿಸಲು ಅಭ್ಯಂತರವಿಲ್ಲ. ಆದರೆ ಈ ವ್ಯವಸ್ಥೆಯಲ್ಲಿರುವ ಲೋಪ ದೋಷಗಳನ್ನು ಸರಿಪಡಿಸಲು ಮಾರುಕಟ್ಟೆ ಅಧಿಕಾರಿಗಳು ವಿಫಲರಾಗಿದ್ದಾರೆ. ಜೊತೆಗೆ ಈ ವ್ಯವಸ್ಥೆ ಜಾರಿಯಾದ ಬಳಿಕ ಮಾರುಕಟ್ಟೆಯಲ್ಲಿ ರೇಷ್ಮೆ ಗೂಡು ಬರುವುದೇ ಕಡಿಮೆಯಾಗಿದ್ದು, ರೇಷ್ಮೆ ಬೆಳೆಗಾರರು ಮಾರುಕಟ್ಟೆಯ ಹೊರಭಾಗದಲ್ಲಿ ರೇಷ್ಮೆ  ಗೂಡು ಮಾರಾಟ ಮಾಡಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಮಾರುಕಟ್ಟೆಗೆ ಬರುವ ನೂಲು ಬಿಚ್ಚಾಣಿಕೆದಾರರು ಸಂಕಷ್ಟ  ಎದುರಿಸುವಂತಾಗಿದೆ ಎಂದು ಕಿಡಿಕಾರಿದರು.

ಬ್ಯಾಂಕ್‌ ಸ್ಥಾಪಿಸಿ: ರಾಜ್ಯದಲ್ಲಿ ಅನೇಕ ಸರ್ಕಾರಿ ರೇಷ್ಮೆ ಮಾರುಕಟ್ಟೆಗಳಲ್ಲಿ ಇ-ಪೇಮೆಂಟ್‌ ವ್ಯವಸ್ಥೆ ಜಾರಿಗೊಳಿಸಿಲ್ಲ. ಆದರೆ ಶಿಡ್ಲಘಟ್ಟದಲ್ಲಿ ಮಾತ್ರ ಯಾವುದೇ ರೀತಿಯ ಪೂರ್ವ ಸಿದ್ಧತೆಯಿಲ್ಲದೆ, ಲೋಪ ದೋಷ ಸರಿಪಡಿಸದೆ ಅಧಿಕಾರಿಗಳು ಮುಂದಾಗಿ ದ್ದಾರೆ. ಇದರಿಂದ ರೇಷ್ಮೆ ನೂಲು ಬಿಚ್ಚಾಣಿಕೆಸದಾರರು ಆರ್ಥಿಕವಾಗಿ ದಿವಾಳಿಯಾಗಲು ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿ ಮಾರುಕಟ್ಟೆಯಲ್ಲಿ ಬ್ಯಾಂಕ್‌ ಸ್ಥಾಪಿಸಿ ಇಂಟರ್‌ನೆಟ್‌ ಬ್ಯಾಂಕಿಂಗ್‌ ವ್ಯವಸ್ಥೆ ಭದ್ರಗೊಳಿಸಿ ನಂತರ ಇ-ಪೇಮೆಂಟ್‌ ವ್ಯವಸ್ಥೆಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.

 ಇದನ್ನೂ ಓದಿ :ಅತಂತ್ರ ಗ್ರಾಪಂಗಳ ಪುನಾರಚಿಸಿ ಚುನಾವಣೆ ನಡೆಸಿ

ಈ ಸಂದರ್ಭದಲ್ಲಿ ರಾಜ್ಯ ರೇಷ್ಮೆ ನೂಲು ಬಿಚ್ಚಾಣಿಕೆದಾರರ ಸಂಘದ ಕಾರ್ಯಾಧ್ಯಕ್ಷ ಮೊಹಮ್ಮದ್‌ ಅನ್ವರ್‌, ಮೇಲೂರು ಅಜೀಜ್‌,  ಸಿಲ್ಕ್ಫೆಡರೇಷನ್‌ ಮಾಜಿ ಉಪಾಧ್ಯಕ್ಷ ಜಿ. ರೆಹಮಾನ್‌, ಶಿಡ್ಲಘಟ್ಟ ತಾಲೂಕು ರೇಷ್ಮೆ ನೂಲು ಬಿಚ್ಚಾಣಿಕೆದಾರರ ಅಧ್ಯಕ್ಷ  ಅನ್ಸರ್‌ಖಾನ್‌, ಉಪಾಧ್ಯಕ್ಷ ಆನಂದ್‌, ಸಾದಿಕ್‌, ಸಿ.ಎಂ.ಬಾಬು, ಬಾಂಬೆ ನವಾಜ್‌, ನವೀದ್‌ಪಾಷ,ಮುನಿಕೃಷ್ಣ, ಮುನಿರಾಜು (ದಾಮೋದರ), ಮುಜ್ಜು ಮತ್ತಿತರರು ಉಪಸ್ಥಿತರಿದ್ದರು. ನಗರ ಪೊಲೀಸ್‌ ಠಾಣೆಯ ಪಿಎಸ್‌ಐ ಸತೀಶ್‌ ಮತ್ತು ಸಿಬ್ಬಂದಿ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದ್ದರು.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.