ಕೆರೆಗಳ ಒತ್ತುವರಿ ತೆರವಿಗೆ “ಗ್ರಹಣ’


Team Udayavani, Feb 18, 2019, 7:27 AM IST

kerega.jpg

ಮುಳಬಾಗಿಲು: ತಾಲೂಕಿನ ಆವಣಿ ಹೋಬಳಿ ದೇವರಾಯಸಮುದ್ರ ಗ್ರಾಪಂ ವ್ಯಾಪ್ತಿಯ ದೇವರಾಯಸಮುದ್ರ ದೊಡ್ಡ ಕೆರೆ ಮತ್ತು ಶ್ಯಾಮಯ್ಯನೂರು ಕೆರೆ ಸುತ್ತಮುತ್ತ ಹಲವರು ಸಾಕಷ್ಟು ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದರೂ ತೆರವುಗೊಳಿಸಲು ಜಿಲ್ಲೆ ಮತ್ತು ತಾಲೂಕು ಆಡಳಿತ ನಿರ್ಲಕ್ಷ್ಯ ವಹಿಸಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಆದೇಶ: ಸರ್ಕಾರಿ ಭೂಮಿಗಳ ಒತ್ತುವರಿ ತಡೆಗಟ್ಟಲು ಎ.ಟಿ.ರಾಮಸ್ವಾಮಿ ಮತ್ತು ಬಾಲಸುಬ್ರಮಣ್ಯಂ ವರದಿಗಳ ಅನ್ವಯ ನ್ಯಾಯಾಲಯದ ಆದೇಶದಂತೆ ಸರ್ಕಾರಿ ಭೂಮಿ ಸಂರಕ್ಷಣೆ ಮತ್ತು ಒತ್ತುವರಿ ಜಮೀನು ತೆರವಿಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಿ.ಲತಾ ಕೃಷ್ಣರಾವ್‌ 2013ರ ಮೇ.27 ರಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದರು.

ಸರ್ಕಾರಿ ಭೂಮಿಗಳ ಒತ್ತುವರಿ ತಡೆಗಟ್ಟಲು ರಾಜ್ಯ ಸರ್ಕಾರ ಕರ್ನಾಟಕ ಭೂ ಕಂದಾಯ ಕಾಯ್ದೆ 1964ಕ್ಕೆ ತಿದ್ದುಪಡಿ ತಂದು 192ಎ ಅನ್ವಯ ಒತ್ತುವರಿದಾರರನ್ನು ಶಿಕ್ಷೆಗೆ ಗುರಿ ಪಡಿಸಲು ಕಾಯ್ದೆಯಲ್ಲಿ  ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಮುಳಬಾಗಿಲು ತಾಲೂಕಿನ ಮೂಲಭೂತವಾಗಿ ಕಂದಾಯ ಇಲಾಖೆ ಸರ್ಕಾರದ ಭೂಮಿ ಗುರ್ತಿಸಿ ಅದರ ವಿಸ್ತೀರ್ಣ ಅಳತೆ ಮಾಡಿ ಒತ್ತುವರಿ ತೆರವುಗೊಳಿಸಲು ಸರ್ಕಾರ ಸುತ್ತೋಲೆ ಹೊರಡಿಸಿತ್ತು. 

81 ಮಂದಿ ವಿರುದ್ಧ ಪ್ರಕರಣ: ಅದರಂತೆ ಅಂದಿನ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಅಂದಿನ ಮುಳಬಾಗಿಲು ತಹಶೀಲ್ದಾರ್‌ ಎಂ.ಗಂಗಪ್ಪ ತಾಲೂಕಿನ ಆವಣಿ, ಕಸಬಾ, ತಾಯಲೂರು, ಬೈರಕೂರು, ದುಗ್ಗಸಂದ್ರ ಸೇರಿ 5 ಹೋಬಳಿಯಲ್ಲಿನ 433 ಕೆರೆ, ಸ್ಮಶಾನ, ಗುಂಡು ತೋಪು ಒತ್ತುವರಿ ತೆರವುಗೊಳಿಸಲು ಅಧೀನ ಅಧಿಕಾರಿಗಳಿಗೆ ಸೂಚಿಸಿ ತಾವೂ ಕಾರ್ಯಪ್ರವೃತ್ತರಾಗಿದ್ದರು. ಅಲ್ಲದೇ, ತೆರವು ಕಾರ್ಯಾಚರಣೆ ಚುರುಕುಗೊಳಿಸಿದ್ದರು. ಅದರಂತೆ ಇದುವವರೆಗೂ 211 ಕೆರೆಗಳಲ್ಲಿನ 366 ಎಕರೆ  ತೆರವುಗೊಳಿಸಿ 81 ಮಂದಿ ವಿರುದ್ಧ ಕ್ರಿಮಿನಲ್‌ ಮೊಕದೊಮ್ಮೆ ದಾಖಲಿಸುವ ಮೂಲಕ ಶೇ.75 ಕಾರ್ಯಾಚರಣೆ ಮುಗಿಸಿದ್ದರು. ಉಳಿದ ಶೇ.25 ಕೆಲಸ ಬಾಕಿ ಉಳಿದಿತ್ತು.

ಅಕ್ರಮ ಮರಳು ಕೇಂದ್ರ: ನಂತರ ಜಿಲ್ಲಾಧಿಕಾರಿ ತ್ರಿಲೋಕ್‌ಚಂದ್ರ ಅವರು ಒತ್ತುವರಿ ತೆರವು ಕಾರ್ಯಾಚರಣೆ ವರದಿಯನ್ನು ಕಳೆದ ಫೆ.15ರಂದು ನ್ಯಾಯಾಲಯಕ್ಕೆ ಸಲ್ಲಿಸಬೇಕಿದ್ದರಿಂದ ಎಲ್ಲಾ ಕೆರೆ ತೆರವುಗೊಳಿಸಲು ಸೂಚಿಸಿದ್ದರು. ಅದರಂತೆ ಹಿಂದಿನ ತಹಶೀಲ್ದಾರ್‌ ಉಳಿದ 83 ಕೆರೆಗಳ ಸರ್ವೆಗೆ ಸಿಬ್ಬಂದಿಯನ್ನು ಕಾರ್ಯಾಚರಣೆಗೆ ನಿಯೋಜಿಸಿದ್ದರು.  

ಕೆಲವು ಕೆರೆಗಳನ್ನು ಸರ್ವೇ ಮಾಡಿದ್ದರೂ ತೆರವು ಕಾರ್ಯಾಚರಣೆ ಮಾಡದ ಕಾರಣ ಕೆ.ಬೈಯಪಲ್ಲಿ ಕೆರೆ, ಸಂಗಸಂದ್ರ ಕೆರೆ, ನಂಗಲಿ, ಮಿಂಡಹಳ್ಳಿ ಕೆರೆ, ಕಪ್ಪಲಮಡಗು, ಸೇರಿ ದೇವರಾಯಸಮುದ್ರ ದೊಡ್ಡ ಕೆರೆ ಹಲವಾರು ಕೆರೆಗಳ ಸಾಕಷ್ಟು ಜಮೀನು ಒತ್ತುವರಿಯಾಗಿದೆ. ಅದರಲ್ಲೂ ಶ್ಯಾಮಯ್ಯನೂರು ಕೆರೆಯಲ್ಲಂತೂ 20-30ಎಕರೆ ಜಮೀನು ಒತ್ತುವರಿಯಾಗಿ ಅಕ್ರಮ ಮರಳು ಗಣಿಗಾರಿಕೆ ಕೇಂದ್ರವಾಗಿದೆ.

ಆದರೂ ಒತ್ತುವರಿ ತೆರವು ಕಾರ್ಯಾಚರಣೆಗೆ 4 ವರ್ಷದಿಂದ ಗ್ರಹಣ ಹಿಡಿದಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಆದರೆ 2016ರ ಮಾರ್ಚ್‌ನಲ್ಲಿ ತಹಶೀಲ್ದಾರ್‌ ಎಂ.ಗಂಗಪ್ಪ ವರ್ಗಾವಣೆಯಾದ ನಂತರ ತಹಶೀಲ್ದಾರ್‌ ಆಗಿ ಬಂದ ಬಿ.ಎನ್‌.ಪ್ರವೀಣ್‌ ತಕ್ಕಮಟ್ಟಿಗೆ ಕೆಲ ಕೆರೆಗಳನ್ನು ತೆರವುಗೊಳಿಸಿ ಹೋಗಿದ್ದರು.

ಆ ನಂತರ ತಹಶೀಲ್ದಾರ್‌ ಕಾಂತವೀರಯ್ಯ ಆಗಲೀ ಅಥವಾ ಸೋಮಶೇಖರಯ್ಯ ಅವರಾಗಲೀ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಗಮನಹರಿಸಲಿಲ್ಲ. ಉಳಿದ ಕೆರೆ ಮತ್ತು ಒತ್ತುವರಿ ತೆರವು ಕಾಯಾಚರಣೆ ಸ್ಥಗಿತಗೊಂಡಿದೆ. ಇದರಿಂದ ಕೆರೆ ಮತ್ತಿತರ ಸರ್ಕಾರಿ ಜಮೀನುಗಳಲ್ಲಿ ಮತ್ತಷ್ಟು ಒತ್ತುವರಿ ನಡೆಯುತ್ತಿರುವುದರಿಂದ ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್‌  ಗಮನಹರಿಸಬೇಕಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕೆರೆಗಳ ಒತ್ತುವರಿ ತೆರವುಗೊಳಿಸಿ: ಮುಳಬಾಗಿಲು ತಾಲೂಕಿನ ಕಂದಾಯ ಇಲಾಖೆ ಅಧಿಕಾರಿಗಳು ಬಹುತೇಕ ಕೆರೆಗಳನ್ನು ಸರ್ವೇ ಮಾಡಿಸಿದ್ದರೂ ಅವುಗಳಿಗೆ ಆಗಲೇ ಕಾಲುವೆ ತೋಡಿ ಪೆನ್ಸಿಂಗ್‌ ಹಾಕದೇ ಬಿಟ್ಟಿದ್ದರು. ಅಲ್ಲದೇ, ಉಳಿದಿರುವ ಕೆರೆಗಳನ್ನು ಸರ್ವೇ ಮಾಡಿಸದೇ ಬಿಟ್ಟಿರುವ ಕಾರಣ ಬಹುತೇಕ ಕೆರೆಗಳಲ್ಲಿನ ಸಾಕಷ್ಟು ಜಮೀನು ಒತ್ತುವರಿಯಾಗಿದೆ. ತಾಲೂಕು ಆಡಳಿತ ಶೀಘ್ರ ಕೆರೆಗಳ ಒತ್ತುವರಿ ತೆರವು ಕಾರ್ಯಾಚರಣೆ ಮಾಡಬೇಕೆಂದು ಮುಖಂಡ ಗಣೇಶಪಾಳ್ಯ ಕೃಷ್ಣ ಒತ್ತಾಯಿಸಿದ್ದಾರೆ.

* ಎಂ.ನಾಗರಾಜಯ್ಯ 

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.