ಜಿಪಂ, ತಾಪಂ ಚುನಾವಣೆ: ವರ್ತೂರು ಬೆಂಬಲಿಗರ ಸಭೆ
Team Udayavani, Jul 7, 2021, 6:56 PM IST
ಕೋಲಾರ: ರಾಜ್ಯದಲ್ಲಿ ಜಿಪಂ ಹಾಗೂತಾಪಂ ಚುನಾವಣೆಯ ಮೀಸಲಾತಿ ಪಟ್ಟಿಪ್ರಕಟವಾಗಿದ್ದು, ಇದರ ಹಿನ್ನೆಲೆಯಲ್ಲಿ ಮಾಜಿಶಾಸಕ ಆರ್.ವರ್ತೂರು ಪ್ರಕಾಶ್ ತಮ್ಮಬೆಂಬಲಿಗರ ಸಭೆಯನ್ನು ಮಂಗಳವಾರತಮ್ಮ ನಿವಾಸದಲ್ಲಿ ನಡೆಸಿದರು.
ಸಭೆಯಲ್ಲಿ ಕೋಲಾರ ವಿಧಾನಸಭಾಕ್ಷೇತ್ರದ4 ಜಿಪಂ ಹಾಗೂ 10 ತಾಪಂಕ್ಷೇತ್ರಗಳಪೈಕಿ ಅರಹಳ್ಳಿ ತಾಪಂ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲುಆಸಕ್ತಿಇರುವವರಹಾಗೂತಮ್ಮ ಕಾರ್ಯಕರ್ತರ ಅಭಿಪ್ರಾಯಗಳನ್ನುಸಂಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿಸಚಿವ ಆರ್.ವರ್ತೂರು ಪ್ರಕಾಶ್, ತಾವುಅಧಿಕಾರದಲ್ಲಿ ಇಲ್ಲದಿದ್ದರೂ ನಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರು ಒಟ್ಟಿಗೆ ತಮ್ಮಜೊತೆ ಇದ್ದಾರೆ. ನಮ್ಮ ಶಕ್ತಿ ಕುಂದಿಲ್ಲ. ನಮಗೆಯಾವುದೇ ಪಕ್ಷದ ಬೆಂಬಲ ಇಲ್ಲದಿದ್ದರೂಗೆಲ್ಲುವ ಶಕ್ತಿ ಇದೆ ಎಂದು ಹೇಳಿದರು.
ಈಗಾಗಲೇ ಗ್ರಾಪಂ ಚುನಾವಣೆಯಲ್ಲಿನಮ್ಮ ಶಕ್ತಿ ತೋರಿಸಿದ್ದೇವೆ. ಮುಂದೆ ಬರುವಜಿಪಂ ಹಾಗೂ ತಾಪಂ ಚುನಾವಣೆಯಲ್ಲಿನಮ್ಮ ಬಣದ ಅಭ್ಯರ್ಥಿಗಳನ್ನು ಗೆಲ್ಲಿಸುವಮೂಲಕ ಅಧಿಕಾರ ಹಿಡಿಯಬೇಕೆಂದರು.ನಾವು ಜಿಪಂ ಹಾಗೂ ತಾಪಂ ಚುನಾವಣೆಯಲ್ಲಿ ಶಕ್ತಿ ಪ್ರದರ್ಶನ ತೋರಿದರೆ ಮುಂದಿನ ಎಂ.ಎಲ್.ಎ ಚುನಾವಣೆಯಲ್ಲಿ ಗೆಲ್ಲಲು ಅನುಕೂಲವಾಗಲಿದ್ದು, ಅತಿ ವಿಶ್ವಾಸದಿಂದ ಕಾರ್ಯಕರ್ತರು ಮೈಮರೆಯದೆ ಕೆಲಸ ಮಾಡಿದರೆ ಜಿಲ್ಲೆಯಲ್ಲಿ 10 ಜಿಪಂ ಸ್ಥಾನಹಾಗೂ ತಾಪಂನಲ್ಲಿ ಅಧಿಕಾರ ಪಡೆಯಬಹುದೆಂದು ತಿಳಿಸಿದರು.
ಸಭೆಯಲ್ಲಿ ವರ್ತೂರು ಬಣದಮುಖಂಡರಾದ ಬೆಗ್ಲಿ ಸೂರ್ಯಪ್ರಕಾಶ್,ಜಿಪಂ ಮಾಜಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್,ಜಿಪಂ ಮಾಜಿ ಸದಸ್ಯ ಅರುಣ್ಪ್ರಸಾದ್,ತಾಪಂ ಮಾಜಿ ಅಧ್ಯಕ್ಷ ಆಂಜನಪ್ಪ, ಪುಸ್ತಿನಾರಾಯಣಸ್ವಾಮಿ, ಕೃಷ್ಣೇಗೌಡ,ಅಪ್ಪಯ್ಯಪ್ಪ, ಅರಹಳ್ಳಿ ಮಂಜುನಾಥ್,ಸುಧಾಕರ್, ಅಮ್ಮೇರಹಳ್ಳಿ ಚಲಪತಿ, ರವಿ,ಹೂವಳ್ಳಿ ಚಂದ್ರಶೇಖರ್, ಭಗವಂತಪ್ಪಹಾಗೂ ಗ್ರಾಪಂ ಅಧ್ಯಕ್ಷರು, ಸದಸ್ಯರು,ನೂರಾರುಕಾರ್ಯಕರ್ತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ