ಅಧಿಕಾರಿಗಳ ಬೆದರಿಕೆಗೂ ಬಗ್ಗದೇ ಚುನಾವಣೆ ಬಹಿಷ್ಕಾರ

ಮಾಲೂರು ಪಟ್ಟಣಕ್ಕೆನೇರ ರಸ್ತೆಗಾಗಿ ಕಂಬೀಪುರ ಗ್ರಾಮಸ್ಥರ ಆಗ್ರಹ , ಅಧಿಕಾರಿಗಳು, ಜನಪ್ರತಿನಿಧಿಗಳ ಭರವಸೆಗೆ ಈ ಬಾರಿ ಮನ್ನಣೆ ಇಲ್ಲ

Team Udayavani, Dec 24, 2020, 2:40 PM IST

ಅಧಿಕಾರಿಗಳ ಬೆದರಿಕೆಗೂ ಬಗ್ಗದೇ ಚುನಾವಣೆ ಬಹಿಷ್ಕಾರ

ಮಾಲೂರು: 15-20 ವರ್ಷಗಳಿಂದಲೂ ಹೋರಾಟ ಮತ್ತು ಚುನಾವಣೆ ಬಹಿಷ್ಕಾರನಿರ್ಧಾರ ಪ್ರಕಟಿಸುತ್ತಿದ್ದ ಕಂಬೀಪುರ (ಬೆಳ್ಳಾಪುರ) ಗ್ರಾಮ ಸ್ಥರು, ಈ ಬಾರಿ ಅಧಿಕಾರಿಗಳ ಮನವೊಲಿಕೆಗೂ ಜಗ್ಗದೇ ಮೊದಲ ಹಂತದಲ್ಲಿ ನಡೆದ ‌ ಗ್ರಾಪಂ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ. ಈ ಮೂಲಕ ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಪೆಟ್ಟು ನೀಡಿದ್ದಾರೆ.

ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಗ್ರಾಪಂ ವ್ಯಾಪ್ತಿಯ ಕಂಬೀಪುರ ‌ ಗ್ರಾಮದಲ್ಲಿ ಸರಿ ಸುಮಾರು 150 ಮನೆಗಳಿದ್ದು ಶೇ.95ರಷ್ಟು ಮಂದಿ ಪರಿಶಿಷ್ಟ ಜಾತಿಯವರೇ ವಾಸವಾಗಿದ್ದಾರೆ. 395 ಮತದಾರರ ಪೈಕಿ ದಲಿತ ವರ್ಗವೇ ಸಿಂಹಪಾಲು.

ಗ್ರಾಮಕ್ಕೆ ಹಲವುಕಡೆಗಳಿಂದ ರಸ್ತೆ ಮಾರ್ಗವಿದ್ದು ಮಡಿವಾಳ ಮಾರ್ಗವಾಗಿ ತೊರ್ನಹಳ್ಳಿಯ ರಸ್ತೆ ಯಲ್ಲಿ ಹಾದು ಕಂಬೀಪುರ ಗ್ರಾಮವನ್ನು ಸೇರಲು 12 ಕಿ.ಮೀ. ಆಗುತ್ತದೆ. ಅಬ್ಬೇನಹಳ್ಳಿ ಮಾರ್ಗದ ರಸ್ತೆ ಯಲ್ಲಿ ತಂಬಿಹಳ್ಳಿ ಮೂಲಕ ಗ್ರಾಮಕ್ಕೆ ಬರುವುದಾದರೆ 6ರಿಂದ 8 ಕಿ.ಮೀ. ಆಗಲಿದೆ. ಇನ್ನು ಗ್ರಾಮದಿಂದ ಮಾಲೂರು ಪಟ್ಟಣಕ್ಕೆ ನೇರ ಸಂಪರ್ಕ ಕಲ್ಪಿಸುವ ಅಬ್ಬೇನಹಳ್ಳಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸಿದ್ದಲ್ಲಿ ಕೇವಲ 3.5 ಕಿ.ಮೀ. ಆಗುತ್ತದೆ. ಈಕುರಿತು ಗ್ರಾಮಸ್ಥರು,ಕಳೆದ15-20 ವರ್ಷಗಳಿಂದನೇರ ರಸ್ತೆ ನಿರ್ಮಾಣಕ್ಕಾಗಿ ಹೋರಾಟಗಳ ಜತೆಗೆ ವಿಧಾನ ಸಭೆ, ಲೋಕಸಭೆ, ಜಿಪಂ, ತಾಪಂ, ಗ್ರಾಪಂ ಚುನಾ ವಣೆ ಬಹಿಷ Rರಿಸುವ ತೀರ್ಮಾನ ಕೈಗೊಳ್ಳುತ್ತಿದ್ದರು.ಈವೇಳೆ ಅಧಿಕಾರಿಗಳು ಮನವೊಲಿಸಿ ಚುನಾವಣೆ ನಡೆಸುತ್ತಿದ್ದರು. ಗ್ರಾಪಂ ಚುನಾವಣೆ ಬಹಿಷ್ಕಾರದ ಕುರಿತು ಕಳೆದ ‌ ವಾರದಲ್ಲಿ ಶಾಸಕ ನಂಜೇಗೌಡರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸುವ ಪ್ರಯತ್ನ ನಡೆಸಿ ಖಾಸಗಿ ಭೂ ಮಾಲೀಕರೊಂದಿಗೆ ಚರ್ಚಿಸಿದ್ದರು.

ಮತದಾನಬಹಿಷ್ಕರಿಸುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಆಗಮಿಸಿದ ತಹಶೀಲ್ದಾರ್‌ ಎಂ.ಮಂಜುನಾಥ್‌, ತಾಪಂ ಇಒ ವಿ.ಕೃಷ್ಣಪ್ಪ ಗ್ರಾಮಸ್ಥರ ಮನ ವೊಲಿಸಲು ಮುಂದಾದರು. ಎಲ್ಲಾ ಪ್ರಯತ್ನ ವಿಫಲವಾಗುತ್ತಿದ್ದಂತೆ ತಹಶೀಲ್ದಾರ್‌ ಮತದಾನಕ್ಕೆ ಅಡ್ಡಿ ಮಾಡುವವರ ವಿರುದ್ಧ ಕ್ರಮ ಜರುಗಿಸುವುದಾಗಿ ತಿಳಿಸಿದರು. ಹೆದರದ ಗ್ರಾಮಸ್ಥರು, ಬಂಧಿಸುವುದಾದರೆ ಎಲ್ಲರೂ ಬಂಧಿಸುವಂತೆ ಪಟ್ಟು ಹಿಡಿದರು. ಮಧ್ಯಾಹ್ನ 1ರ ಸುಮಾರಿಗೆ ಗ್ರಾಮಕ್ಕೆ ಬಂದ ಉಪ ವಿಭಾಗಾಧಿಕಾರಿ ಸೋಮಶೇಖರ್‌, ಜಿಪಂಸಿ ಇಒ ನಾಗರಾಜು ಅವ ರಮನವೊಲಿಕೆಯೂ ಫ‌ಲ ನೀಡಲಿಲ್ಲ. ಕಂಬೀಪುರ ಗ್ರಾಮಕ್ಕೆ ನೇರ‌ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗವಿಲ್ಲ. ಸಾರಿಗೆ ಸಂಪರ್ಕವಿಲ್ಲ. ಬೈಕ್‌ ಮೂಲಕ ‌ ಮಾಲೂರು ಪಟ್ಟಣಕ್ಕೆ ಬಂದು ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಬೇಕಿದೆ. ಗರ್ಭಿಣಿಯರು, ವೃದ್ಧರು, ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆಆಗಿದೆ. ಈ ಹಿಂದೆ ಕೆಲವು ಪುಂಡರು ಕಾಲು ದಾರಿಯ ನೀಲಗಿರಿ ತೋಪುಗಳಲ್ಲಿ ಬರುವ ಹೆಣ್ಣು ಮಕ್ಕಳನ್ನು ಚುಡಾಯಿಸಿದ್ದರು.ಈಹಿಂದೆ ಮಹಿಳೆಯರು ಕಾಲೇಜು ಅಧಿಕಾರಿಗಳ ‌ ಮುಂದೆ ಅಳಲು ತೋಡಿಕೊಂಡಿದ್ದರು.

ಬದಲಾದ ಮೀಸಲಾತಿ :

ಪ್ರಸ್ತುತ ಗ್ರಾಪಂ ಚುನಾವಣೆಯಲ್ಲಿ ಸರ್ಕಾರ ಗ್ರಾಪಂ ಸದಸ್ಯ ಸ್ಥಾನದ ಮೀಸಲಾತಿಯನ್ನುಹಿಂದುಳಿದ ವರ್ಗ(ಅ) ಮಹಿಳೆಗೆ ಅವಕಾಶಕಲ್ಪಿಸಿತ್ತು. ಗ್ರಾಮದಲ್ಲಿ ಶೇ.95 ಪರಿಶಿಷ್ಟ ಜಾತಿಯವರೇ ವಾಸವಾಗಿದ್ದು ಬಿಸಿಎಂ(ಎ)ವರ್ಗದ ಎರಡು ಮನೆಗಳ ಸರಿಸುಮಾರು20ಮತದಾರರು ಮಾತ್ರ ಇದ್ದಾರೆ. ಹೀಗಾಗಿನೆರೆಯ ತಂಬಿಹಳ್ಳಿ ಮತ್ತು ಅಬ್ಬೇನಹಳ್ಳಿಯಿಂದತಲಾ ಓರ್ವ ಮಹಿಳಾ ಅಭ್ಯರ್ಥಿಗಳನ್ನುಗ್ರಾಮದಲ್ಲಿ ಕಣಕ್ಕೆ ಇಳಿಸಿರುವುದೂ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿ ಚುನಾವಣೆ ಬಹಿಷ್ಕಾರಕ್ಕೆ ಹೆಚ್ಚಿನ ಪುಷ್ಟಿ ಸಿಕ್ಕಿದೆ.

ಕಂಬೀಪುರದ ಜನರು ಗ್ರಾಪಂ ಚುನಾವಣೆಯನ್ನು ಬಹಿಷ್ಕರಿಸಿರುವುದರಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಪತ್ರ ಬರೆದು ರಸ್ತೆ ನಿರ್ಮಾಣಕ್ಕೆಕ್ರಮಕೈಗೊಳ್ಳಲಾಗುತ್ತದೆ. ಅಲ್ಲದೇ, ಚುನಾವಣಾನಿಯಮಗಳನ್ನು ಆಯೋಗದ ನಿರ್ದೇಶನದಂತೆ ಕೈಗೊಳ್ಳಲಾಗುವುದು. -ಎಂ.ಮಂಜುನಾಥ್‌, ತಹಶೀಲ್ದಾರ್‌

 

-ಎಂ.ರವಿಕುಮಾರ್‌

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.