ಚುನಾವಣೆ ಅಸ್ಥಿರತೆ: ಅಭ್ಯರ್ಥಿಗಳಲ್ಲಿ ನಿರುತ್ಸಾಹ


Team Udayavani, Jan 28, 2019, 7:20 AM IST

chunavane.jpg

ಕೋಲಾರ: ನಗರಸಭೆ ಚುನಾವಣೆಗೆ ಎಲ್ಲಾ ರೀತಿಯ ಸಿದ್ಧತೆಗಳು ನಡೆಯತ್ತಿರುವಾಗಲೇ ಚುನಾವಣೆ ನಡೆಯುವ ಬಗ್ಗೆಯೇ ಅನುಮಾನಗಳು ವ್ಯಕ್ತವಾಗುತ್ತಿರುವುದು ಆಕಾಂಕ್ಷಿಗಳಲ್ಲಿ ನಿರುತ್ಸಾಹವನ್ನುಂಟು ಮಾಡಿದೆ.

ನಗರಸಭೆ ಸೇರಿದಂತೆ ಬಹುತೇಕ ಸ್ಥಳೀಯ ಸಂಸ್ಥೆಗಳ ಆಡಳಿತಾವಧಿಯು ಮಾರ್ಚ್‌ 9ಕ್ಕೆ ಮುಕ್ತಾಯಗೊಳ್ಳಲಿದೆ. ಯಾವುದೇ ಸ್ಥಳೀಯ ಸಂಸ್ಥೆಯ ಚುನಾವಣೆ ಆಡಳಿತಾವಧಿ ಮುಕ್ತಾಯವಾಗುವುದರೊಳಗಾಗಿ ನಡೆಸಬೇಕೆಂದು ಸುಪ್ರಿಂ ಕೋರ್ಟ್‌ ಆದೇಶಿಸಿದೆ. ಆದರೆ, ಈ ಆದೇಶ ಪಾಲನೆಯಾಗುವುದೂ ಅನುಮಾನ ಎನ್ನಲಾಗುತ್ತಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಿಗದಿತ ಅವಧಿಯೊಳಗೆ ನಡೆಸಲು ಚುನಾವಣಾ ಆಯೋಗ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸುತ್ತಿದೆ. ಈಗಾಗಲೇ ವಾರ್ಡುವಾರು ಮೀಸಲು ಪಟ್ಟಿಯನ್ನು ಕರ್ನಾಟಕ ರಾಜ್ಯ ಪತ್ರದಲ್ಲೂ ಪ್ರಕಟಿಸಲಾಗಿದೆ. ಆದರೆ, ಹೀಗೆ ಪ್ರಕಟಿಸಿರುವ ಮೀಸಲು ಪಟ್ಟಿ ಸಮರ್ಪಕವಾಗಿಲ್ಲ ಎಂಬ ದೂರುಗಳು ನ್ಯಾಯಾಲಯದ ಮೆಟ್ಟಿಲೇರಿವೆ.

ಮೀಸಲು ಪಟ್ಟಿ ಲೋಪ: ರಾಜ್ಯದ ಹದಿಮೂರಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಪಟ್ಟಂತೆ ಮೀಸಲು ಪಟ್ಟಿ ಕುರಿತು ಹಲವರು ನ್ಯಾಯಾಲಯ ಮೆಟ್ಟಿಲೇರಿದ್ದರು. ಇದನ್ನು ಪುರಸ್ಕರಿಸಿದ್ದ ನ್ಯಾಯಾಲಯವು ಹಳೆಯ ಮೀಸಲು ಪಟ್ಟಿ ದೋಷಪೂರಿತವಾಗಿದೆಯೆಂದು ರದ್ದುಪಡಿಸಿತ್ತು. ಜ.28 ರೊಳಗೆ ಚುನಾವಣಾ ಆಯೋಗಕ್ಕೆ ಆಗಿರುವ ಲೋಪಗಳನ್ನು ತಿದ್ದುಪಡಿ ಮಾಡಿ ಸರಿಯಾದ ಮೀಸಲು ಪಟ್ಟಿಯನ್ನು ನೀಡಬೇಕೆಂದು ಹೇಳಲಾಗಿತ್ತು.

ಆದರೆ, ಸರಕಾರದ ಹಂತದಲ್ಲಿ ನಡೆಯುತ್ತಿರುವ ರೆಸಾರ್ಟ್‌ ರಾಜಕಾರಣ, ಆಪರೇಷನ್‌ ಕಮಲದ ಘಟನಾವಳಿಗಳಿಂದಾಗಿ ಸರಕಾರವು ಲೋಪದೋಷ ಪಟ್ಟಿಯನ್ನು ಸರಿಪಡಿಸುವ ವಿಚಾರದಲ್ಲಿ ಇನ್ನೂ ಗಮನಹರಿಸಿದಂತೆ ಕಾಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜ.28 ಸೋಮವಾರ ಮೀಸಲು ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುವುದು ಅನುಮಾನವೇ ಆಗಿದೆ. ಇದರ ನೇರ ಪರಿಣಾಮ ರಾಜ್ಯದಲ್ಲಿ ನಡೆಯಬೇಕಾಗಿದ್ದ ಎರಡನೇ ಹಂತದ ಸ್ಥಳೀಯ ಸಂಸ್ಥೆ ಚುನಾವಣೆಗಳ ಮೇಲೆ ಬೀಳುವಂತಾಗಿದೆ.

ಮೇಲ್ಮನವಿ ಸಾಧ್ಯತೆ: ರಾಜ್ಯ ಸರಕಾರವು ದೋಷಪೂರಿತ ಮೀಸಲು ಪಟ್ಟಿಯನ್ನು ಸರಿಪಡಿಸಿ ನೀಡಬೇಕು. ಇಲ್ಲವೇ ತನ್ನ ಪಟ್ಟಿಯೇ ಸರಿಯಾಗಿದೆಯೆಂದು ವಾದಿಸಲು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶವು ಇದೆ. ಈ ಕುರಿತು ಇದುವರೆವಿಯೂ ಸರಕಾರದ ಹಂತದಲ್ಲಿ ಯಾವುದೇ ನಿರ್ಧಾರವಾದಂತಿಲ್ಲ. ಕೆಲವು ವದಂತಿಗಳ ಪ್ರಕಾರ ಸರಕಾರವು ದ್ವಿ ಸದಸ್ಯ ಪೀಠದ ಮುಂದೆ ತನ್ನ ಮೇಲ್ಮನವಿಯನ್ನು ಸಲ್ಲಿಸಲಿದೆಯೆಂದು ಹೇಳಲಾಗುತ್ತಿದೆ. ಒಂದು ವೇಳೆ ಇದು ಆದಲ್ಲಿ, ನ್ಯಾಯಾಲಯ ಹಂತದಲ್ಲಿಯೇ ಮತ್ತಷ್ಟು ಕಾಲ ಕಳೆಯಬೇಕಾಗುತ್ತದೆ. ಇದರಿಂದಲೂ ಸರಕಾರಕ್ಕೆ ಸ್ಥಳೀಯ ಸಂಸ್ಥೆಯ ಚುನಾವಣೆಗಳನ್ನು ನಡೆಸುವ ಆಸಕ್ತ ಇಲ್ಲವೆಂದೇ ಭಾವಿಸಬೇಕಾಗುತ್ತದೆ.

ಕೋಲಾರದಿಂದಲೂ ಹೊಸ ಅರ್ಜಿ ಸಲ್ಲಿಕೆ: ಕೋಲಾರ ನಗರಸಭೆಗೆ ಸಂಬಂಧಪಟ್ಟಂತೆಯೂ ತೀರಾ ಇತ್ತೀಚಿಗೆ ನಗರದ ನಿಸಾರ್‌ ಅಹಮದ್‌ ಎನ್ನುವರು ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದಾರೆ. ನಗರಸಭೆ ಚುನಾವಣೆಗೆ ಸಂಬಂಧಪಟ್ಟಂತೆ ಸರಿಯಾಗಿ ವಾರ್ಡುಗಳ ಮರು ವಿಂಗಡಣೆಯಾಗಿಲ್ಲ. ವಾರ್ಡುವಾರು ಮೀಸಲಾತಿಯೂ ಸಮರ್ಪಕವಾಗಿ ನಿಗಧಿಪಡಿಸಿಲ್ಲ, ರೋಸ್ಟರ್‌ ಪಾಲಿಸಿಲ್ಲವೆಂಬ ಆಕ್ಷೇಪವನ್ನು ಅವರು ತಮ್ಮ ಅರ್ಜಿಯ ಮೂಲಕ ಎತ್ತಿದ್ದಾರೆ.

ನಿಸಾರ್‌ ಅಹಮದ್‌ರ ಅರ್ಜಿಯನ್ನು ಪುರಸ್ಕರಿಸಿರುವ ಹೈಕೋರ್ಟ್‌ ರಾಜ್ಯ ಸರಕಾರ ಮತ್ತು ಕೋಲಾರ ನಗರಸಭೆ ಆಯುಕ್ತರಿಗೆ ನ್ಯಾಯಾಲಯದ ಮುಂದೆ ಹಾಜರಾಗಿ ವಿವರಣೆ ನೀಡುವಂತೆ ನೋಟೀಸ್‌ ಜಾರಿ ಮಾಡಿದೆ. ಕೋಲಾರ ನಗರಸಭೆಯು ನ್ಯಾಯಾಲಯದಿಂದ ಜ.24 ರಂದು ಗುರುವಾರ ನೋಟೀಸ್‌ ಸ್ಪೀಕರಿಸಿದ್ದು, ನೋಟೀಸ್‌ ಸ್ಪೀಕರಿಸಿದ ದಿನದಿಂದ ಹತ್ತು ದಿನಗಳೊಳಗೆ ನ್ಯಾಯಾಲಯದ ಮುಂದೆ ಹಾಜರಾಗಿ ವಿವರಣೆ ನೀಡುವಂತೆ ಸೂಚಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸರಕಾರ ಹಾಗೂ ನಗರಸಭೆ ಕೋಲಾರ ನಗರಸಭೆ ವಾರ್ಡು ಮರು ವಿಂಗಡನೆ ಮತ್ತು ಮೀಸಲು ನಿಗಧಿಗೆ ಸಂಬಂಧಪಟ್ಟಂತೆ ನ್ಯಾಯಾಲಯ ಮುಂದೆ ವಿವರಣೆ ನೀಡಬೇಕಾಗಿದೆ. ಜ.28 ರಂದು ಸೋಮವಾರದಿಂದ ಈ ಅರ್ಜಿಯ ವಾದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಈ ವ್ಯಾಜ್ಯ ಇತ್ಯರ್ಥವಾಗುವವರೆಗೂ ನಗರಸಭೆ ಚುನಾವಣೆ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.

ಆಕಾಂಕ್ಷಿಗಳಲ್ಲಿ ನಿರುತ್ಸಾಹ: ಕೋಲಾರ ನಗರಸಭೆ ಚುನಾವಣೆ ಮೀಸಲು ಪಟ್ಟಿ ರಾಜ್ಯ ಪತ್ರದಲ್ಲಿ ಪ್ರಕಟವಾದಾಗಿನಿಂದಲೂ ವಿವಿಧ ವಾರ್ಡುಗಳಲ್ಲಿ ಹಲವಾರು ಆಕಾಂಕ್ಷಿಗಳು ಚುನಾವಣಾ ಸಿದ್ಧತೆಯಲ್ಲಿ ತೊಡಗಿದ್ದರು. ದೀಪಾವಳಿ, ಹೊಸ ವರ್ಷಾಚರಣೆ, ಅಯ್ಯಪ್ಪಸ್ವಾಮಿ ಮತ್ತು ಓಂಶಕ್ತಿ ಯಾತ್ರೆಗಳಿಗೆ ಭಕ್ತರನ್ನು ಕಳುಹಿಸುವುದು, ಇತ್ತೀಚಿಗೆ ಸಂಕ್ರಾಂತಿಯ ಸಂದರ್ಭದಲ್ಲಿ ಮಹಿಳೆಯರಿಗೆ ಸೀರೆ, ಗೃಹೋಪಯೋಗಿ ವಸ್ತುಗಳನ್ನು ವಿತರಿಸಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ರಾಸುಗಳಿಗೆ ಮೇವು ಒದಗಿಸಿದ್ದು, ಪ್ಲಾಸ್ಟಿಕ್‌ ಬಕೆಟ್ ಇತ್ಯಾದಿಗಳನ್ನು ಕೊಡುಗೆಯಾಗಿ ನೀಡಿದ್ದು, ವಾರ್ಡುಗಳಲ್ಲಿ ಸ್ವಚ್ಚತಾ ಕಾರ್ಯ, ನೀರಿನ ಟ್ಯಾಂಕರ್‌ಗಳ ಬಿಟ್ಟಿರುವುದು, ಸಿಸಿ ಕ್ಯಾಮೆರಾಗಳನ್ನು ಅಳವಡಿಸಿರುವುದು ಇತ್ಯಾದಿ ಸೇವಾ ಕಾರ್ಯಕ್ರಮಗಳ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ.

ಸೇವಾ ಕಾರ್ಯಕ್ರಮಗಳ ಜೊತೆಗೆ ವಾರ್ಡಿನ ಯುವಕರ ಗುಂಪುಗಳಿಗೆ ಆಕಾಂಕ್ಷಿಗಳು ಸಮಯ ಸಿಕ್ಕಾಗಲೆಲ್ಲಾ ಡಾಬಾಗಳಲ್ಲಿ ಬಾಡೂಟ ಕಾರ್ಯಕ್ರಮಗಳು ಎಗ್ಗಿಲ್ಲದಂತೆ ನಡೆಯುತ್ತಿದೆ. ಆಕಾಂಕ್ಷಿಗಳು ಈಗಾಗಲೇ ಲಕ್ಷಾಂತರ ರೂಪಾಯಿಗಳ ಬಂಡವಾಳವನ್ನು ವಾರ್ಡುಗಳ ಮತದಾರರ ಮೇಲೆ ಸುರಿದಿದ್ದಾರೆ. ಇದೀಗ ಚುನಾವಣೆ ಮುಂದೂಡಲ್ಪಟ್ಟರೆ ಇದೇ ರೀತಿಯಲ್ಲಿ ಮತದಾರರನ್ನು ಸೆಳೆದಿಟ್ಟುಕೊಳ್ಳಲು ಮತ್ತಷ್ಟು ಲಕ್ಷಗಳನ್ನು ವೆಚ್ಚ ಮಾಡಬೇಕಾಗುತ್ತದೆ. ಇಲ್ಲವೇ ಸಿಕ್ಕ ಸಮಯವನ್ನು ಸದ್ಬಳಕೆ ಮಾಡಿಕೊಂಡು ಮತ್ತಷ್ಟು ಆಕಾಂಕ್ಷಿಗಳು ವಾರ್ಡುಗಳಿಗೆ ಇಳಿಯುವ ಸಾಧ್ಯತೆಗಳೂ ಇವೆ. ಇದರಿಂದ ಚುನಾವಣಾ ಮುಂದೂಡಿಕೆ ವಿಚಾರವೇ ಆಕಾಂಕ್ಷಿಗಳ ಪ್ರಚಾರದ ಉತ್ಸಾಹಕ್ಕೆ ತಣ್ಣೀರು ಎರಚುವಂತಾಗಿದೆ.

ಮೀಸಲು ಪಟ್ಟಿ ಬದಲಾವಣೆಗೆ ಪ್ರಯತ್ನ: ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಹಾಗೂ ನಿಸಾರ್‌ ಅಹಮದ್‌ ಇತರರು ಹೈಕೋರ್ಟ್‌ನಲ್ಲಿ ದಾವೆ ಹೂಡಿರುವ ಹಿನ್ನೆಲೆಯಲ್ಲಿ ಈ ಹಿಂದೆ ಪ್ರಕಟಿಸಿರುವ ಮೀಸಲು ಪಟ್ಟಿ ಪರಿಷ್ಕರಣೆಯಾಗುವ ಇಕ್ಕಟ್ಟಿಗೆ ಸಿಕ್ಕಿದೆ. ಒಂದು ವೇಳೆ ಮೀಸಲು ಪಟ್ಟಿ ಬದಲಾವಣೆಯಾದಲ್ಲಿ ತಮಗೆ ಅನುಕೂಲವಾಗುವಂತೆ ವಾರ್ಡುವಾರು ಮೀಸಲು ಪಟ್ಟಿಯನ್ನು ನಿಗದಿಪಡಿಸುವಂತೆ ಸರಕಾರದ ಹಂತದಲ್ಲಿ ಕೋಲಾರದ ಅನೇಕ ಮುಖಂಡರು ಪ್ರಯತ್ನಿಸುತ್ತಿದ್ದಾರೆ.

ಮುಖಂಡರಿಗೆ ಉತ್ಸಾಹವಿಲ್ಲ: ಲೋಕಸಭಾ ಚುನಾವಣೆಗೆ ಮುನ್ನ ನಗರಸಭೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆ ನಡೆದಲ್ಲಿ, ಲೋಕಸಭೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳು ತಮ್ಮ ಬೆಂಬಲಿತ ಅಭ್ಯರ್ಥಿಗಳಿಗೆ ಹಣಕಾಸು ಪ್ರಾಯೋಜನೆ ಮಾಡಲೇಬೇಕಾಗುತ್ತದೆ. ಏಕೆಂದರೆ, ಸ್ಥಳೀಯ ಸಂಸ್ಥೆ ಚುನಾವಣೆ ಮುಗಿಯುತ್ತಿದ್ದಂತೆಯೇ ಎದುರಾಗುವ ಲೋಕಸಭಾ ಚುನಾವಣೆಯಲ್ಲಿ ಅವರನ್ನು ತಮ್ಮ ಪರ ನಿಲ್ಲಿಸಿಕೊಳ್ಳಬೇಕಾಗುತ್ತದೆ.

ಲೋಕಸಭಾ ಚುನಾವಣೆ ನಂತರ ಸ್ಥಳೀಯ ಸಂಸ್ಥೆಯ ಚುನಾವಣೆ ನಡೆದಲ್ಲಿ ಅಭ್ಯರ್ಥಿಗಳು ಸ್ವಂತ ಶಕ್ತಿಯ ಮೇಲೆ ಮಾತ್ರವೇ ಚುನಾವಣೆ ಎದುರಿಸಬೇಕಾಗುತ್ತದೆ. ಆಗಾ ತಮ್ಮ ಚುನಾವಣೆಗಳನ್ನು ಮುಗಿಸಿಕೊಂಡ ಶಾಸಕರಾಗಲಿ, ಸಂಸದರಾಗಲಿ ಅಭ್ಯರ್ಥಿಗಳಿಗೆ ಬಿ ಫಾರಂ ನೀಡುವ ಜವಾಬ್ದಾರಿ ಬಿಟ್ಟು ಬೇರೇನನ್ನು ಹೊತ್ತುಕೊಳ್ಳುವುದಿಲ್ಲ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯುವುದು ಶಾಸಕ ಸಂಸದರಿಗೆ ಬೇಕಾಗಿಲ್ಲ.

* ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.