ಆನೆ ದಾಳಿ: ಗಾಯಾಳುಗಳ ಸ್ಥಿತಿ ಗಂಭೀರ
ಫೋಟೋ ತೆಗೆಯಲು ಬಂದ ಯುವಕರಿಬ್ಬರನ್ನು ಸೊಂಡಲಿನಿಂದ ಎಸೆದ ಆನೆ
Team Udayavani, May 2, 2019, 10:23 AM IST
ಮಾಲೂರು ತಾಲೂಕಿನ ಅರಳೇರಿ ಗ್ರಾಮದ ಬಳಿಯಲ್ಲಿ ಕಾಣಿಸಿಕೊಂಡಿರುವ ಕಾಡಾನೆಗಳು. ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಕಾಟೇರಿಸೊಣ್ಣಹಳ್ಳಿಯ ರಾಜಪ್ಪ
ಮಾಲೂರು: ಪಟ್ಟಣ ಸಮೀಪದಲ್ಲೇ ಎರಡು ಮೂರು ದಿನಗಳಿಂದ ಬೀಡು ಬಿಟ್ಟಿದ್ದ ಕಾಡಾನೆಗಳ ಹಿಂಡು ಬುಧವಾರ ಯುವಕರಿಬ್ಬರನ್ನು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ತಾಲೂಕಿನ ಅರಳೇರಿ ಸಮೀಪ ಸಂಭವಿಸಿದೆ. ತಾಲೂಕಿನ ಕಾಟೇರಿ ಸೊಣ್ಣಹಳ್ಳಿಯರಾಜಪ್ಪ(25) ಹಾಗೂ ರವಿ(24) ಗಾಯಾಳುಗಳು. ಇಬ್ಬರನ್ನೂ ಚಿಕಿತ್ಸೆಗಾಗಿ ಕೋಲಾರದ ಎಸ್ಎನ್ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಾರದಿಂದ ತಾಲೂಕಿನ ಗಡಿಭಾಗದಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಗಳ ಗುಂಪನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಾಡಿಗೆ ಓಡಿಸಲು ಹರಸಾಹಸ ಪಡುತ್ತಿದ್ದು, ಇದೀಗ ಪಟ್ಟಣ ಸಮೀಪಕ್ಕೆ ಆಗಮಿಸಿ, ಜನರಲ್ಲಿ ಆತಂಕ ಮೂಡಿಸಿವೆ.
ಪಟ್ಟಣದಿಂದ 8 ಕಿ.ಮೀ. ಇರುವ ಕುಡಿಯ ನೂರು ಗ್ರಾಮದ ಬಳಿ ಮಂಗಳವಾರ ಕಾಣಿಸಿಕೊಂಡಿದ್ದ ಗುಂಪು ಬುಧವಾರ ಬೆಳಗ್ಗೆ ಪಟ್ಟಣದ ಹೊಂದಿಕೊಂಡಿರುವ ಅರಳೇರಿ ಗ್ರಾಮದ ಬಳಿಯ ಮಾವಿನ ತೋಟದಲ್ಲಿ ಪ್ರತ್ಯೇಕವಾಗಿವೆ.
ಆನೆಗಳು ಬಂದಿರುವ ಸುದ್ದಿ ತಿಳಿದು ಸ್ಥಳಕ್ಕೆ ದಾವಿಸಿದ ಯುವಕರು ಮೊಬೈಲ್ನಲ್ಲಿ ಫೋಟೋ ತೆಗೆಯಲು ಮುಗಿಬಿದ್ದಿದ್ದಾರೆ. ಈ ವೇಳೆ ಆನೆ ಬಳಿಗೆ ಬಂದಿದ್ದ ಕಾಟೇರಿ ಸೊಣ್ಣಹಳ್ಳಿಯ ರಾಜಪ್ಪ ಮತ್ತು ರವಿ ಅವರನ್ನು ಸೊಂಡಲಿನಿಂದ ಬಡಿದು ಗಂಭೀರವಾಗಿ ಗಾಯಗೊಳಿಸಿವೆ.
ಪಟ್ಟಣಕ್ಕೆ ನುಗ್ಗುವ ಸಾಧ್ಯತೆ: ಎರಡು ವರ್ಷಗಳ ಹಿಂದೆ ಅರಳೇರಿ ಸುತ್ತಮತ್ತಲಿನ ಗ್ರಾಮಗಳಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಗಳ ಗುಂಪನ್ನು ಬನ್ನೇರುಘಟ್ಟದಿಂದ ಬಂದ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿ ಕಾಡಿಗೆ ಕಳುಹಿಸಿದ್ದರು. ಆದರೆ, ಈ ಬಾರಿ ವಾರವಾದ್ರೂ ಆನೆಗಳನ್ನು ಓಡಿಸಲು ಆಗಿಲ್ಲ. ಅಲ್ಲದೆ, ಗುರುವಾರ ಪಟ್ಟಣಕ್ಕೂ ನುಗ್ಗುವ ಸಾಧ್ಯತೆ ಇದೆ.
ಜನ ತಡೆಯುವುದಕ್ಕೆ ಕಷ್ಟ: ಕಾಡಾನೆಗಳು ಗ್ರಾಮಕ್ಕೆ ಬಂದಿರುವ ಸುದ್ದಿ ತಿಳಿದು ಜನ ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ. ಇದ ರಿಂದ ಆನೆ ಓಡಿಸುವ ಕಾರ್ಯಾಚರಣೆಗೆ ಅಡ್ಡಿ ಯಾಗಿದೆ. ಸಾರ್ವಜನಿಕರನ್ನು ನಿಯಂತ್ರಿಸಲು ಪೊಲೀಸರು, ಅರಣ್ಯ ಸಿಬ್ಬಂದಿ ಪ್ರಾಯಾಸ ಪಡು ತ್ತಿದ್ದು, ಸಹಕಾರ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಪರಿಸ್ಥಿತಿ ಗಂಭೀರವಾಗಿರುವ ಕಾರಣ ವಲಯ ಅರಣ್ಯಾಧಿಕಾರಿ ಧನಲಕ್ಷ್ಮೀ ಹರೀಶ್ ಸ್ಥಳದಲ್ಲಿಯೇ ಬೀಡುಬಿಟ್ಟಿದ್ದು, ಗುರುವಾರದ ಒಳಗೆ ಆನೆಗಳನ್ನು ಕಾಡಿಗೆ ಓಡಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ನೀಲಗಿರಿ ತೋಪು, ಮಾವಿನ ತೋಟಗಳಲ್ಲಿ ಇರುವ ಆನೆಗಳ ಬಳಿ ಹೋಗದಂತೆ ಜನರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ