5 ದಿನಗಳ ಬಳಿಕ ಮರಳಿ ಕಾಡು ಸೇರಿದ ಆನೆ ಹಿಂಡು

ಕೆರೆ, ತೋಟಗಳಲ್ಲಿ ಬಿಡುಬಿಟ್ಟು ಆತಂಕ ಸೃಷ್ಟಿಸಿದ್ದ ಕಾಡಾನೆಗಳು ಶುಕ್ರವಾರ ರಾತ್ರಿ ತಮಿಳುನಾಡು ಅರಣ್ಯಕ್ಕೆ ವಾಪಸ್‌

Team Udayavani, May 5, 2019, 10:12 AM IST

kolar-tdy-4..

ಮಾಸ್ತಿ ಹೋಬಳಿಯ ಹಳೇಹಾರೋಮಾಕನಹಳ್ಳಿಯ ಕೆರೆಯಲ್ಲಿ ಬೀಡುಬಿಟ್ಟಿದ್ದ 6 ಕಾಡಾನೆಗಳನ್ನು ಸಿಬ್ಬಂದಿ ತಮಿಳುನಾಡು ಅರಣ್ಯಕ್ಕೆ ಓಡಿಸಿದರು.

ಮಾಸ್ತಿ: ಐದು ದಿನ ಮಾಲೂರು ತಾಲೂಕಿನಲ್ಲಿ ಬೀಡುಬಿಟ್ಟಿದ್ದ 6 ಕಾಡಾನೆಗಳನ್ನು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ ಶುಕ್ರವಾರ ಸಂಜೆ ಕಾರ್ಯಾಚರಣೆ ನಡೆಸಿ, ತಮಿಳುನಾಡು ಅರಣ್ಯಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಾಲೂರು ತಾಲೂಕಿನ ಡಿ.ಎನ್‌.ದೊಡ್ಡಿ, ಬಂಟಹಳ್ಳಿ, ನಾಗಾಪುರ, ಮಾಲೂರು ಪಟ್ಟಣಕ್ಕೆ ಹೊಂದಿಕೊಂಡಿರುವ ಅರಳೇರಿ ಸೇರಿ ಹಲವು ಗ್ರಾಮಗಳ ಸುತ್ತಮುತ್ತ ಸಂಚರಿಸಿ, ಕೆಲವು ಪ್ರದೇಶಗಳಲ್ಲಿ ಬೀಡು ಬಿಡುತ್ತಿದ್ದ 6 ಆನೆಗಳ ಹಿಂಡು ಗುರುವಾರ ಟೇಕಲ್ ಹೋಬಳಿಯ ಬಲ್ಲಹಳ್ಳಿ ಗ್ರಾಮ ಸಮೀಪದ ನೀಲಗಿರಿ ತೋಪಿನಲ್ಲಿ ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿಸಿದ್ದವು. ನಂತರ ಅಂದಿನ ರಾತ್ರಿ ಹುಳದೇನಹಳ್ಳಿ, ಮಾಸ್ತಿ ಹೋಬಳಿಯ ತೊಳಸನದೊಡ್ಡಿ ಸಮೀಪ ತೋಟಗಳ ಮೂಲಕ ಆಗಮಿಸಿ, ಶುಕ್ರವಾರ ಬೆಳಗ್ಗೆ ದಿನ್ನಹಳ್ಳಿ ಗ್ರಾಪಂ ವ್ಯಾಪ್ತಿಯ ಹಳೇಹಾರೋಮಾಕನಹಳ್ಳಿ ಸಮೀಪದ ಕೆರೆಯಲ್ಲಿ ಪ್ರತ್ಯಕ್ಷವಾಗಿದ್ದವು.

ಕಾರ್ಯಾಚರಣೆ: ಗಡಿ ಭಾಗ ಹಳೇಹಾರೋಮಾಕನಹಳ್ಳಿ ಕೆರೆಯಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ವೀಕ್ಷಿಸಲು ಜನ ತಂಡೋಪ ತಂಡವಾಗಿ ಆಗಮಿಸಿ ಅಲ್ಲಲ್ಲಿ ಗುಂಪಾಗಿ ನಿಂತು ಗಲಾಟೆ ಮಾಡುತ್ತಿದ್ದರು. ಇದರಿಂದ ಆನೆಗಳು ಕದಲದೇ ಕೆರೆಯಲ್ಲಿ ಸುತ್ತಾಡುತ್ತಾ ಸಂಜೆವರೆಗೂ ಬೀಡುಬಿಟ್ಟಿದ್ದವು. ಸಂಜೆಯಾಗುತ್ತಿದ್ದಂತೆ ಆನೆಗಳು ಮುಂದಕ್ಕೆ ತೆರಳಲು ಪ್ರಾರಂಭಿಸಿದಾಗ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಪಟಾಕಿ ಸಿಡಿಸುತ್ತಾ ಕಾರ್ಯಾಚರಣೆ ಆರಂಭಿಸಿದರು.

ಆನೆಗಳು ಮುಂದಕ್ಕೆ ಹೋಗುತ್ತಿದ್ದಂತೆ ಜನತೆಯೂ ಕೂಗಾಟ, ಕಿರುಚಾಟ, ಶಿಳ್ಳೆ ಹೊಡೆಯುತ್ತಾ ಆನೆಗಳನ್ನು ಹಿಂಬಾಲಿಸುತ್ತಿದ್ದರು. ಇದರಿಂದ ಗಾಬರಿಗೊಂಡ ಆನೆಗಳು ಮತ್ತಷ್ಟು ಜೋರಾಗಿ ಓಡಲು ಪ್ರಾರಂಭಿಸಿದವು. ನಂತರ ಕಾಂಚಾಳ, ದುಡವನಹಳ್ಳಿ ಕೆರೆ ಹಾಗೂ ಗಡಿಭಾಗದ ಅರಣ್ಯದ ಮೂಲಕ ತಮಿಳುನಾಡಿನ ಅರಣ್ಯ ಪ್ರದೇಶಕ್ಕೆ ಸೇರಿದವು.

ನಿಟ್ಟಿಸಿರು ಬಿಟ್ಟ ಅರಣ್ಯ ಸಿಬ್ಬಂದಿ: ಐದು ದಿನಗಳಿಂದ ಮಾಲೂರು ತಾಲೂಕಿನ ಹಲವು ಗ್ರಾಮಗಳ ಸಮೀಪ ಸಂಚರಿಸಿ ಜನರಲ್ಲಿ ಆತಂಕ ಸೃಷ್ಟಿ ಮಾಡಿದ್ದಲ್ಲದೆ, ಅರಣ್ಯ ಇಲಾಖೆ ಸಿಬ್ಬಂದಿಗೆ ತಲೆ ನೋವಾಗಿದ್ದವು. ಹಲವು ಗ್ರಾಮಗಳಲ್ಲಿ ಮಾವು, ತರಕಾರಿ, ಬಾಳೆ ಬೆಳೆಯನ್ನು ನಾಶ ಮಾಡಿದ್ದವು. ಶುಕ್ರವಾರ ರಾತ್ರಿ ವೇಳೆಗೆ ಹಳೇಹಾರೋಮಾಕನಹಳ್ಳಿ ಕೆರೆಯ ಮೂಲಕ ತಮಿಳುನಾಡು ಅರಣ್ಯ ಪ್ರದೇಶಕ್ಕೆ ಓಡಿಸುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರುಬಿಟ್ಟಿದ್ದಾರೆ.

ಶಾಶ್ವತ ಪರಿಹಾರ ಕಲ್ಪಿಸಿ: ಮಾಸ್ತಿ ಹೋಬಳಿಯ ದಿನ್ನಹಳ್ಳಿ ಗ್ರಾಪಂ ವ್ಯಾಪ್ತಿಯ ಹಲವು ಗ್ರಾಮಗಳು ತಮಿಳುನಾಡು ಗಡಿಭಾಗಕ್ಕೆ ಹೊಂದಿಕೊಂಡಿವೆ. ಆಗಾಗ ಚಿರತೆ, ಮುಂತಾದ ಕಾಡು ಪ್ರಾಣಿಗಳು ಬರುತ್ತವೆ. ಬೇಸಿಗೆಯಲ್ಲಿ ಆಹಾರ ಸಿಗದೇ ಮತ್ತೆ ಕಾಡಾನೆಗಳು ಬರಬಹುದೆಂಬ ಆತಂಕ ಜನರನ್ನು ಕಾಡುತ್ತಿದೆ. ಹೀಗಾಗಿ ಶಾಶ್ವತ ಪರಿಹಾರ ಒದಗಿಸಿಕೊಡಬೇಕೆಂದು ರೈತರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.