ಕಾಡಾನೆಗಳ ದಾಳಿ, ತೋಟದ ಬೆಳೆ ನಾಶ


Team Udayavani, Nov 29, 2020, 2:46 PM IST

kolar-tdy-1

ಬಂಗಾರಪೇಟೆ: ತಾಲೂಕಿನ ಬೂದಿಕೋಟೆ ಹೋಬಳಿಯ ಹಲವು ಗ್ರಾಮಗಳಲ್ಲಿ ಕ ‌ಳೆದ ಎರಡು ದಿನಗಳಿಂದ ಕಾಡಾನೆಗಳ ‌ ಉಪಟಳ ಮುಂದುವರಿದಿದ್ದು, ಲಕ್ಷಾಂತರ ‌ ರೂ. ಮೌಲ್ಯದ ರಾಗಿ, ಟೋಮೆಟೋ, ಜೋಳ, ಕ್ಯಾರೆಟ್‌, ತೆಂಗು ಸೇರಿ ಹಲವು ಬೆಳೆಗಳನ್ನು ನಾಶ ‌ ಮಾಡಿದ್ದು, ಸುಮಾರು 30 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ.

ಬೆಳೆ ಹಾನಿ: ತಾಲೂಕಿನ ಬೂದಿಕೋಟೆ ಹೋಬಳಿಯ ಎಳೇಸಂದ್ರ, ಜುಂಜನಹಳ್ಳಿ, ಸೇರಿ ಹಲವು ಗ್ರಾಮಗಳಲ್ಲಿ 15 ಕ್ಕೂ ಹೆಚ್ಚಿನ ಗಜಪಡೆ ದಾಳಿ ಮಾಡಿದ್ದು, ಜುಂಜನಹಳ್ಳಿ ಗ್ರಾಮದ ರೈತ ವೆಂಕಟೇಶಪ್ಪರಿಗೆ ಸೇರಿದ ಎರಡು ಎಕರೆ ಟೊಮೆಟೋ ಬೆಳೆ ಮತ್ತು ತೆಂಗಿನ ಮರಗಳನ್ನು, ಹೆಬ್ಬೆರಪ್ಪ ಹಾಗೂ ವೆಂಕಟಪ್ಪರ ರಾಗಿ ಬೆಳೆ ನಾಶ ಮಾಡಿವೆ. ಎಳೇಸಂದ್ರ ಗ್ರಾಮದ ನಿವೃತ್ತ ಶಿಕ್ಷಕ ಗೋವಿಂದಪ್ಪರ ಒಂದು ಎಕರೆ ಟೊಮೆಟೋ ಬೆಳೆ ಮತ್ತು ಹನಿ ನೀರಾವರಿಯ ಪೈಪುಗಳು, ಕೊಂಡನಹಳ್ಳಿ ರಾಮಪ್ಪರವರ ಒಂದು ಎಕರೆಟೊಮೆಟೋ, ಮುನಿಯಪ್ಪ ಅವರಿಗೆ ಸೇರಿದ ಒಂದು ಎಕರೆ ಕ್ಯಾರೆಟ್‌, ಕದಿರೇನಹಳ್ಳಿ ಗ್ರಾಮದರೈತ ಎಂ.ಸುರೇಶ್‌ ಮತ್ತು ನಾಗರಾಜ್‌ರಿಗೆ ಸೇರಿದ ಟೊಮೆಟೋ ಬೆಳೆ, ಭುವನಹಳ್ಳಿ ಗ್ರಾಮದ ನಾರಾಯಣಸ್ವಾಮಿಯ ಹನಿ ನೀರಾವರಿಯ ಫಿಲ್ಟರ್‌ ಹಾಗೂ ಪೈಪುಗಳು, ತೀತುಬನಹಳ್ಳಿ ಗ್ರಾಮದ ಬಸಪ್ಪಕಟಾವು ಮಾಡಿ ಕೂಡಿ ಹಾಕಿದ್ದ ರಾಗಿ ಮೆದೆ, ಗರುಡಗಾನಹಳ್ಳಿ ಗ್ರಾಮದ ತಿಮ್ಮರಾಯಪ್ಪರ ಜೋಳ, ರಾಗಿ ಬೆಳೆ ಸೇರಿ ಹಲವು ಬೆಳೆಗಳನ್ನು ಕಾಡಾನೆಗಳು ನಾಶಪಡಿಸಿದೆ.

ನೆರೆಯ ತಮಿಳುನಾಡು ಅರಣ್ಯ ಪ್ರದೇಶದಿಂದ ಬಂದಿರುವ 15 ಕ್ಕೂ ಮೇಲ್ಪಟ್ಟ ಗಜಪಡೆಸದ್ಯಕ್ಕೆಎಳೇಸಂದ್ರಬಳಿಯಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪದ ಅರಣ್ಯ ಪ್ರದೇಶದಲ್ಲಿ ಬೀಡುಬಿಟ್ಟಿವೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಿಬ್ಬಂದಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದ್ದು, ಗಜಪಡೆ ಹಿಮ್ಮೆಟ್ಟಿಸುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಹಲವು ತಿಂಗಳುಗಳಿಂದ ನಿರಂತರವಾಗಿ ಆನೆಗಳು ಬೆಳೆಗಳನ್ನು ನಾಶ ಮಾಡುತ್ತಾ, ರೈತರನ್ನು ಬಲಿ ಪಡೆದಿರುವ ಕಾರಣ ರೈತರು ಹಾಗೂ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಬೆಳೆ ಕಳೆದುಕೊಂಡ ರೈತರಿಗೆ ಸಕಾಲಕ್ಕೆ ಪರಿಹಾರ ಸಹ ಸಿಗದೇ ಇರುವುದರಿಂದ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಸಾಲ ಮಾಡಿ 3 ಎಕರೆ ಪ್ರದೇಶದಲ್ಲಿ ಟೊಮೆಟೋ ಬೆಳೆಯಲಾಗಿದ್ದು,ಉತ್ತಮ ಬೆಲೆ ಇದೆ.ಕಾಡಾನೆಗಳ ದಾಳಿಯಿಂದ ಲಕ್ಷಾಂತರ ರೂ. ಮೌಲ್ಯದ ಬೆಳೆ ನಾಶವಾಗಿದ್ದು, ಬೆಳೆಗೆ ಮಾಡಿದ ಸಾಲ ತೀರಿಸಲುಕಷ್ಟವಾಗಿದೆ. ಸರ್ಕಾರಗಳು ಕಾಡಾನೆಗಳ ಹಾವಳಿ ತಪ್ಪಿಸಲು ವಿಶೇಷ ಯೋಜನೆ ರೂಪಿಸಬೇಕಾಗಿದೆ. ಗೋವಿಂದಪ್ಪ, ನಿವೃತ್ತ ಶಿಕ್ಷಕ ಹಾಗೂ ರೈತ ಎಳೇಸಂದ್ರ

ಇತ್ತೀಚೆಗೆಕಾಡಾನೆಗಳಕಾರ್ಯಾಚರಣೆಯಲ್ಲಿ ಸಿಬ್ಬಂದಿಯಕೆಲವರಿಗೆ ಗಾಯ ಗಳಾಗಿವೆ.ಹವಾಮಾನವೈಪರೀತ್ಯದಿಂದ ಆನೆಗಳ ಕಾರ್ಯಾಚರಣೆ ಕಷ್ಟವಾಗಿದ್ದು, ಬನ್ನೇರಘಟ್ಟದಿಂದ ನುರಿತರನ್ನು ಕರೆಸಿ ಕಾರ್ಯಾಚರಣೆಮಾಡಲಾಗುವುದು. ಬೂದಿಕೋಟೆ ಹೋಬಳಿಯಲ್ಲಿ ಕಾಡಾನೆಗಳ ದಾಳಿಯಿಂದ ರೈತರಿಗೆ ನಷ್ಟವಾಗಿರುವಬಗ್ಗೆ ಸರ್ಕಾರಕ್ಕೆ ಪರಿಹಾರ ನೀಡುವಂತೆವರದಿನೀಡಲಾಗಿದೆ. ಸುಧಾಕರ್‌ ಯಾದವ್‌, ಆರ್‌ಎಫ್ಒ, ಮಾಲೂರು

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.