ಶಿಕ್ಷಣದಿಂದ ಬಡತನ ನಿರ್ಮೂಲನೆ

ಮಾಸ್ತಿ ಕವಿತೆಗಳ ಓದು ಕಾರ್ಯಕ್ರಮದಲ್ಲಿ ಮಾವಿನಕೆರೆ ರಂಗನಾಥ್‌ ಅಭಿಮತ

Team Udayavani, May 13, 2019, 2:31 PM IST

kolar-tdy-7..

ಕೋಲಾರ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಾಸ್ತಿ ವೆಂಕಟೇಶ್‌ ಅಯ್ಯಂಗಾರ್‌ ಟ್ರಸ್ಟ್‌ನಿಂದ ಹಮ್ಮಿಕೊಂಡಿದ್ದ ಮಾಸ್ತಿ ಕವಿತೆಗಳ ಓದು ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಅಧ್ಯಕ್ಷ ಮಾವಿನಕೆರೆ ರಂಗನಾಥ್‌ ಮಾತನಾಡಿದರು.

ಕೋಲಾರ: ಶಿಕ್ಷಣ ಒಂದೇ ಸಮಾಜದಲ್ಲಿನ ಬಡತನವನ್ನು ನಿರ್ಮೂಲನೆ ಮಾಡಲು ಸಾಧ್ಯವಿದೆ ಎಂಬುದನ್ನು ಮಾಸ್ತಿ ತೋರಿಸಿಕೊಟ್ಟಿದ್ದಾರೆ ಎಂದು ವೆಂಕಟೇಶ್‌ ಅಯ್ಯಂಗಾರ್‌ ಟ್ರಸ್ಟ್‌ನ ಅಧ್ಯಕ್ಷ ಮಾವಿನಕೆರೆ ರಂಗನಾಥ್‌ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಟ್ರಸ್ಟ್‌ ಹಮ್ಮಿಕೊಂಡಿದ್ದ ಮಾಸ್ತಿ ಕವಿತೆಗಳ ಓದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಾಸ್ತಿಯವರು ಓದು ಮತ್ತು ಬುದ್ದಿವಂತಿಕೆಯಿಂದಲೇ ಉತ್ತಮ ವಿದ್ಯಾರ್ಥಿಯಾಗಿದ್ದರು. ಆದ್ದರಿಂದಲೇ ಅವರು ಸತತ ಪ್ರಯತ್ನದಿಂದ ವಿವಿಧ ಕ್ಷೇತ್ರಗಳಲ್ಲೂ ಸಾಧನೆ ಮಾಡಲು ಸಾಧ್ಯವಾಯಿತು ಎಂದು ಹೇಳಿದರು.

ಕಿರಿಯರ ಬೆಳೆಸುವ ಪ್ರಯತ್ನ: ಬೇಂದ್ರೆ, ಮಾಸ್ತಿ, ಡಿವಿಜಿ ಜಿಲ್ಲೆಯ ಮೂರು ಕಣ್ಣುಗಳು ಇದ್ದಂತೆ. ತಾಯಿನಾಡಿನ ಭಾಷೆಯಾದ ಕನ್ನಡವನ್ನು ಹೇಗೆ ಬಳಕೆ ಮಾಡಬೇಕು ಎಂಬುದನ್ನು ತೋರಿಸಿಕೊಂಡಿದ್ದಾರೆ. ಕಲೆ, ನಾಟಕ, ಪುಸ್ತಕ ರಚನೆ, ಸಂಪಾದಕೀಯದಿಂದ ತನ್ನ ಜತೆಗೆ ಕಿರಿಯರನ್ನು ಬೆಳೆಸುವ ಪ್ರಯತ್ನ ಮಾಡುತ್ತಾ ಇದ್ದರು ಎಂದು ಹೇಳಿದರು.

ಸಾಹಿತ್ಯ ರಚನೆಗೆ ಸಹಕಾರಿ: ಬರಹಗಾರರು ಹೇಗೆ ಬರೆಯಬೇಕು ಎಂದು ಮಾರ್ಗದರ್ಶನ ನೀಡುವ ಮೂಲಕ 122 ಪುಸ್ತಕ, 100 ಕತೆ ಬರೆದಿದ್ದಾರೆ. ಸಾಧಾರಣ ಮನುಷ್ಯ ಜೀವನವನ್ನು ಕತೆಯ ರೂಪದಲ್ಲಿ ರಚಿಸಿ ಜೀವನದ ಅನುಭವ ಹಂಚಿಕೊಂಡು ಕಿರಿಯರ ಸಾಹಿತ್ಯ ರಚನೆಗೆ ಸಹಕಾರಿಯಾಗಿದೆ ಎಂದು ಹೇಳಿದರು

ಮಾಸ್ತಿ ಕಲಿಯೋದು ತುಂಬಾ ಇದೆ: ಸಾಹಿತಿ ಸ.ರಘುನಾಥ್‌ ಮಾತನಾಡಿ, ಮಾಸ್ತಿ ಅವರು ಅಂತಃಕರಣದ ಚಿತ್ರಗಳನ್ನು ನಮ್ಮ ಮುಂದೆ ಇಟ್ಟಿದ್ದು, ಇದನ್ನು ಗಮನಿಸಿದರೆ ಅನ್ಯಾಯವನ್ನು ವಿರೋಧಿಸುವ ಮಾನೋಭಾವ ಪ್ರತಿಯೊಬ್ಬರೂ ಬೆಳೆಸಿಕೊಂಡಾಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಾಗುತ್ತದೆ. ಸಾಮಾಜಿಕವಾಗಿ ಮಾಸ್ತಿಯವರಿಂದ ಕಲಿಯಬೇಕಾದ ಗುಣಗಳು ಹೆಚ್ಚು ಇವೆ. ಅವರು ಪದ್ಯ, ಕತೆಗಳನ್ನು ಓದುವಾಗ ಸಹೃದಯ, ತಿಳಿ ಕನ್ನಡವನ್ನು ಕಲಿಯಬಹುದು. ಇದನ್ನು ನಾಟಕ ರೂಪದಲ್ಲಿ ಹಾಡಲು ಸಾಧ್ಯವಿದ್ದು, ಈ ಪ್ರಯತ್ನ ಮಾಡಲು ಟ್ರಸ್ಟ್‌ ಮುಂದಾಗಬೇಕು ಎಂದು ತಿಳಿಸಿದರು.

ಮಾಸ್ತಿ ಕಾವ್ಯದಲ್ಲಿ ಧ್ವನಿ ಕುಸಿಯುತ್ತದೆ. ಬೇಂದ್ರೆ ಮತ್ತು ಕುವೆಂಪು ಕಾವ್ಯದಲ್ಲಿ ಬಹಳ ದೊಡ್ಡದಾದ ಧ್ವನಿಯಿದೆ. ತಮ್ಮ ಬದುಕಿನ ಸ್ಥರದ ಕೆಳಗೆ ಬೇರೆಯವರ ಬದುಕಿನ ಸ್ತರಗಳಲ್ಲಿರುವ ಮಾನವೀಯ ಸ್ತರಗಳನ್ನು ಎತ್ತಿ ತೋರಿಸಿದರು. ಪುತೀನ ಮತ್ತು ಮಾಸ್ತಿಯವರ ಬದುಕಿನಲ್ಲಿ ಸಮನ್ವಯಗೊಂಡ ಭಾವಗಳನ್ನು ಕಾಣಬಹುದಾಗಿದೆ ಎಂದರು.

ಮಾಸ್ತಿ ಕುರಿತ ಕವಿತೆಗಳನ್ನು ಪ್ರಾಧ್ಯಾಪಕ ಸಿ.ಎ.ರಮೇಶ್‌, ಜಿ.ಶಿವಪ್ಪ ಅರಿವು, ಪ್ರೊ.ರುದ್ರೇಶ್‌ ಅದಂರಗಿ, ಹರೀಶ್‌, ಎಸ್‌.ರವೀಂದ್ರ ಓದಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಜೇಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್‌, ಹೊಲ್ಲಂಬಳ್ಳಿ ಅಮರೇಂದ್ರ ಮುಂತಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.