ಯುವಕರ ಸದೃಢ ಆರೋಗ್ಯಕ್ಕಾಗಿ ನಿರ್ಮಿಸಿದ್ದ ವ್ಯಾಯಾಮ ಶಾಲೆ ಪಾಳು


Team Udayavani, Apr 13, 2019, 5:21 PM IST

Udayavani Kannada Newspaper
ಮುಳಬಾಗಿಲು: ಜನರ ಅನುಕೂಲಕ್ಕಾಗಿ ಸರ್ಕಾರ ಜಾರಿ ಮಾಡುವ ಯೋಜನೆಗಳು ಅಧಿಕಾರಿಗಳ ಕಾರ್ಯವೈಖರಿಯಿಂದ ಎಷ್ಟರ ಮಟ್ಟಿಗೆ ಜನಕ್ಕೆ ಅನುಕೂಲವಾಗುತ್ತಿವೆ ಎಂಬುದಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸೇರಿದ ವ್ಯಾಯಾಮ ಶಾಲೆಯೇ ಸಾಕ್ಷಿ.
ಸರ್ಕಾರ ಬಡ ಯುವ ಜನತೆಗೆ ಅನುಕೂಲವಾಗಲಿ, ಉತ್ತಮ ಆರೋಗ್ಯ ರೂಪಿಸುವ ನಿಟ್ಟಿನಲ್ಲಿ 2006-2007ರಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೂಲಕ ನಗರದಲ್ಲಿ 8 ಲಕ್ಷ ರೂ. ಅನುದಾನದಲ್ಲಿ ವ್ಯಾಯಮ ಶಾಲೆ ನಿರ್ಮಿಸಲಾಗಿದೆ. ಭೂ ಸೇನಾ ನಿಗಮ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಹಲವು ವರ್ಷಗಳೇ ಕಳೆದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ವಶಕ್ಕೆ ಪಡೆದು ಉದ್ಘಾಟನೆ ಮಾಡಿಲ್ಲ. ಅಗತ್ಯ ಸಲಕರಣೆಗಳು ಸರ್ಕಾರದಿಂದ ಮಂಜೂರಾಗಿದ್ದರೂ ಹಿಂದಿನ ಜಿಲ್ಲಾ ಯುವಜನ ಸೇವಾ ಕ್ರೀಡಾಧಿಕಾರಿಗಳು ಅವುಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
ಅನೈತಿಕ ಚಟುವಟಿಕೆ ತಾಣ: ಕಟ್ಟಡ ಬಳಕೆಯಾಗದಿದ್ದರೂ ನಿರ್ವಹಣೆ ಮಾಡದಿರುವ ಕಾರಣ ಪಾಳು ಬಿದ್ದಿದೆ. ಕಟ್ಟಡದ ಸುತ್ತಲು ಗಿಡಗಂಟಿ ಬೆಳೆದು ಅವ್ಯವಸ್ಥೆಗಳ ಆಗರವಾಗಿದೆ. ಕಟ್ಟಡದ ಕಿಟಕಿಗಳ ಗಾಜು ಒಡೆದು, ವಸ್ತುಗಳು ಕಳ್ಳರ ಪಾಲಾಗಿವೆ, ಮಲಮೂತ್ರ ವಿಸರ್ಜನೆಯ ತಾಣವಾಗಿದೆ. ರಾತ್ರಿ ವೇಳೆ ಮದ್ಯ ಸೇವಿಸುವವರಿಗೆ ಸ್ಥಳಾವಕಾಶ ಕಲ್ಪಿಸಿಕೊಟ್ಟಿದೆ. ನೇತಾಜಿ ಕ್ರೀಡಾಂಗಣದ ಹಿಂಭಾಗದಲ್ಲಿ ನಿರ್ಮಿಸಿರುವ ಕೊಠಡಿಗಳು ಸೂಕ್ತವಾಗಿ ನಿರ್ವಹಣೆಯಿಲ್ಲದ ಕಾರಣ ಪಾಳು ಬದ್ದಿವೆ.
ಒಂದು ಕೊಠಡಿಯ ಬಾಗಿಲು ಕಿತ್ತುಹೋಗಿ ಎಷ್ಟೋ ವರ್ಷಗಳಾಗಿವೆ. ಮಲಮೂತ್ರಗಳ ವಿಸರ್ಜನೆ ಬಳಕೆಯಾಗುತ್ತಿದೆ. ಕೊಠಡಿಯ ತುಂಬಾ ನೀರು ನಿಂತಿದೆ. ಈ ಕುರಿತು ಸಾರ್ವಜನಿಕರು ಹಲವು ಬಾರಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯವಹಿಸಿದ್ದಾರೆಂಬ ಕೂಗು ತಾಲೂಕಾದ್ಯಂತ ವ್ಯಾಪಕವಾಗಿ ಕೇಳಿ ಬರುತ್ತಿದೆ.
ಬಡ ಯುವಕರು ಸದೃಢ ದೇಹ ಹೊಂದಲಿ ಎಂಬ ಕಾರಣಕ್ಕೆ ಸರ್ಕಾರ ನಿರ್ಮಿಸಿರುವ ವ್ಯಾಯಾಮ ಶಾಲೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಾಳುಕೊಂಪೆಯಂತಾಗಿದೆ. ಕೂಡಲೇ ದುರಸ್ತಿಗೊಳಿಸಿ ಸಲಕರಣೆ ನೀಡಿ ಕಟ್ಟಡ ಉದ್ಘಾಟನೆ ಮಾಡಬೇಕು.
 ●ಶಿವಪ್ಪ, ಎಸ್‌ಎಫ್ಐ ಜಿಲ್ಲಾ ಕಾರ್ಯದರ್ಶಿ. 
ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುದಾನ ಮಾಡಿಸಿ ಅಗತ್ಯ ಸಲಕರಣೆಗಳನ್ನು ಖರೀದಿಸಿ ನಂತರ ಕಟ್ಟಡ ಉದ್ಘಾಟಿನೆ ಮಾಡಿಸಲಾಗುವುದು.
 ●ಗೀತಾ, ಜಿಲ್ಲಾ ಕ್ರೀಡಾ ಇಲಾಖೆ ಅಧಿಕಾರಿ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.