100ರ ಗಡಿ ದಾಟಿದ ಈರುಳ್ಳಿ ಬೆಲೆ


Team Udayavani, Dec 10, 2019, 4:25 PM IST

kolar-tdy-2

ಟೇಕಲ್‌: ಕಳೆದ ವಾರ 60 ರಿಂದ 80 ರೂ. ಇದ್ದ ಈರುಳ್ಳಿ ಬೆಲೆ ಈಗ 1 ಕೆ.ಜಿ. 90 ರೂ.ರಿಂದ 160 ರೂ.ವರೆಗೂ ಮಾರಾಟವಾಗುತ್ತಿದ್ದು, ಗ್ರಾಮೀಣ ಜನರು ತತ್ತರಿಸಿದ್ದಾರೆ. ಈರುಳ್ಳಿ ಬೆಲೆ ಕೇಳಿ ಗ್ರಾಹಕರು ಬಾಯಿ ಮೇಲೆ ಕೈಯಿಟ್ಟು ಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಈರುಳ್ಳಿ ಸಹವಾಸವೇ ಬೇಡ ಎಂದು ಬಂದ ದಾರಿಗೆ ಸುಂಕವಿಲ್ಲದಂತೆ ಗ್ರಾಹಕರು ವಾಪಸಾಗುತ್ತಿದ್ದ ದೃಶ್ಯ ಇಲ್ಲಿನ ಸಂತೆಯಲ್ಲಿ ಕಂಡು ಬಂತು. ಕೆಲವರು ಅನಿವಾರ್ಯವಂತೆ ಪ್ರತಿ ವಾರ ಕೆ.ಜಿ.ಗಟ್ಟಲೆ ಈರುಳ್ಳಿ ಕೊಳ್ಳುತ್ತಿದ್ದವರು 1 ಕೆ.ಜಿ. ಸಾಕು ಎಂದು ಚೌಕಾಸಿ ಮಾಡುತ್ತಿದ್ದರು. ಗ್ರಾಮದ ಸಂತೆಯಲ್ಲಿ ಈರುಳ್ಳಿಯನ್ನು ಈ ಬೆಲೆಗೆ ಮಾರುತ್ತಿರುವುದು ಇತಿಹಾಸವಾಗಿದೆ.ಸಂತೆ ಎಂದರೆ ಎಲ್ಲಾ ವಿಧವಾದ ತರಕಾರಿ ದಿನಸಿಗಳು ಅಗ್ಗವಾಗಿರುತ್ತವೆ ಹಾಗೂ ಗುಣಮಟ್ಟದಿಂದ ಕೂಡಿರುತ್ತವೆ ಎಂದು ಅಕ್ಕಪಕ್ಕದ ಗ್ರಾಮಗಳ ಜನರು ಇಲ್ಲಿಗೆ ಬರುತ್ತಾರೆ. ಆದರೆ, ಈ ರೀತಿ ಬೆಲೆ ಏರಿರುವುದನ್ನುಕಂಡು, ಜೇಬಲ್ಲಿ ದುಡ್ಡು ಎಷ್ಟು ಇದೆ ಎಂದು ಮುಟ್ಟಿ ನೋಡಿಕೊಳ್ಳುವಂತಾಗಿದೆ.

ಗ್ರಾಮೀಣ ಜನರೇ ಹೆಚ್ಚು: ಟೇಕಲ್‌ ಸಂತೆಗೆ ಬರುವುದು ಬಹುತೇಕ ಗ್ರಾಮೀಣ ಜನರೇ ಆಗಿದ್ದು, ಅಕ್ಕಪಕ್ಕದ ರೈತರು ಬೆಳೆದ ಬೆಳೆಯನ್ನು ಇಲ್ಲಿಗೆ ತಂದು ಮಾರಾಟ ಮಾಡುತ್ತಾರೆ. ವಾರ ವಿಡೀ ದುಡಿದ ಕೂಲಿ ಹಣದಲ್ಲಿ ಕೂಲಿ ಕಾರ್ಮಿಕರು, ರೈತರು ಮನೆಗೆ ಬೇಕಾ ದಷ್ಟು ತಾವು ಬೆಳೆಯದೇ ಇರುವ ತರಕಾರಿ, ಅಡುಗೆ ಪದಾರ್ಥಗಳನ್ನು ಖರೀದಿ ಮಾಡುತ್ತಾರೆ.

ಬೆಲೆ ಏರಿಕೆಯಿಂದ ಖರೀದಿಯಲ್ಲಿ ಕಡಿತ: ಮೊದಲು 100 ರೂ. ತಂದರೆ ಅದಲ್ಲೇ ಈರುಳ್ಳಿ, ಬೆಳ್ಳುಳ್ಳಿ, ತರಕಾರಿ ಹೀಗೆ ಇತರೆ ಪದಾರ್ಥಗಳನ್ನು ಖರೀದಿ ಮಾಡಿಕೊಂಡು ಹೋಗುತ್ತಿದ್ದರು. ಆದರೆ, ಈಗ ಈರುಳ್ಳಿ ಬೆಲೆಯೇ 100 ರೂ.ನ ಗಡಿ ದಾಟಿರುವ ಕಾರಣ, ಗ್ರಾಹಕರು, ಪ್ರತಿಬಾರಿ ಖರೀದಿ ಮಾಡುತ್ತಿದ್ದ ಕೆಲವು ಪದಾರ್ಥಗಳನ್ನು ಕೈಬಿಟ್ಟು, ಅದರ ದುಡ್ಡನ್ನು ಈರುಳ್ಳಿ ಖರೀದಿಗೆ ಬಳಸುತ್ತಿದ್ದ ದೃಶ್ಯ ಸಂತೆಯಲ್ಲಿ ಕಂಡು ಬಂತು. ಕೆಲವರು, ಒಂದು ಕೇಜಿ ಬದಲಿಗೆ ಅರ್ಧ ಕೇಜಿ ಈರುಳ್ಳಿ ಖರೀದಿ ಮಾಡುತ್ತಿದ್ದ ದೃಶ್ಯ ಕಂಡು ಬಂತು.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.