ಕೌಶಲ್ಯಗಳಿಸಿ ತಾಂತ್ರಿಕತೆಯ ಸವಾಲು ಎದುರಿಸಿ


Team Udayavani, May 12, 2019, 11:36 AM IST

kolar-tdy-8..

ಕೋಲಾರದ ಸರ್ಕಾರಿ ಮಹಿಳಾ ಕಾಲೇಜಿನ ವಾರ್ಷಿಕೋತ್ಸವಕ್ಕೆ ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ.ಟಿ.ಡಿ.ಕೆಂಪರಾಜ್‌ ಚಾಲನೆ ನೀಡಿದರು. ಚಿತ್ರನಟ ಕಿಶೋರ್‌ ಇದ್ದರು.

ಕೋಲಾರ: ಗುಣಮಟ್ಟದ ಶಿಕ್ಷಣದ ಜತೆ ಮೌಲ್ಯಗಳನ್ನು ರೂಢಿಸಿಕೊಂಡು ಕೌಶಲ್ಯ ಅಭಿವೃದ್ಧಿಯ ಮೂಲಕ ಆಧುನಿಕತೆ ಮತ್ತು ತಾಂತ್ರಿಕ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ ಎಂದು ವಿದ್ಯಾರ್ಥಿನಿಯರಿಗೆ ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ.ಟಿ.ಡಿ.ಕೆಂಪರಾಜ್‌ ಸಲಹೆ ನೀಡಿದರು.

ನಗರದ ಮಹಿಳಾ ಕಾಲೇಜು ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಕ್ರೀಡಾ, ಸಾಂಸ್ಕೃತಿಕ, ಶೈಕ್ಷಣಿಕ ಸಾಧಕರನ್ನು ಪುರಸ್ಕರಿಸಿ ಮಾತನಾಡಿ, ಶಿಕ್ಷಣದಲ್ಲಿ ಆಧುನಿಕತೆ, ತಾಂತ್ರಿಕತೆ ಅಳವಡಿಕೆಯಾಗುತ್ತಿದ್ದು, ಬದಲಾದ ಕಾಲಕ್ಕೆ ತಕ್ಕಂತೆ ಮನೆಯಲ್ಲೇ ಕುಳಿತು ಪರೀಕ್ಷೆ ಬರೆಯುವ ಕಾಲವೂ ಬರಬಹುದು. ಅದಕ್ಕೂ ನೀವು ಸಿದ್ಧರಾಗಬೇಕು ಎಂದರು.

ವಿಶ್ವ ಭಾರತದ ಕಡೆ ನೋಡುತ್ತಿದೆ. 2025ರ ವೇಳೆಗೆ 18ರಿಂದ 28 ವರ್ಷ ವಯೋಮಿತಿಯುಳ್ಳ ಯುವ ಜನತೆ ಶೇ.56 ಆಗಲಿದೆ. ವಿಶ್ವದ ಯಾವ ರಾಷ್ಟ್ರದಲ್ಲೂ ಯುವ ಸಂಪತ್ತು ಈ ಪ್ರಮಾಣದಲ್ಲಿ ಇಲ್ಲ. ದೇಶದ ಯುವಸಂಪತ್ತಿಗೆ ಬಲನೀಡಲು ಗುಣಮಟ್ಟದ ಶಿಕ್ಷಣ, ಕೌಶಲ ಒದಗಿಸುವುದು ಶಾಲಾ ಕಾಲೇಜು, ವಿಶ್ವವಿದ್ಯಾಲಯಗಳ ಜವಾಬ್ದಾರಿ ಎಂದು ಹೇಳಿದರು.

ಒಳ್ಳೆಯ ತಾಯಿಯಾಗಿ: ಚಲನ ಚಿತ್ರ ನಟ ಜಿ.ಕಿಶೋರ್‌ ಕುಮಾರ್‌ ಮಾತನಾಡಿ, ಹೆಣ್ಣು ಮಕ್ಕಳು ಈ ಸಮಾಜಕ್ಕೆ ಮಾದರಿಯಾಗಿದ್ದಾರೆ. ಯಾವುದೇ ರಂಗದಲ್ಲೂ ತಾವೇ ಮುಂದು ಎಂದು ಸಾಬೀತು ಮಾಡುತ್ತಿದ್ದಾರೆ. ನಿಮ್ಮಲ್ಲಿನ ಛಲ, ಕೌಶಲ್ಯ, ಕಲಿಕಾಸಕ್ತಿಗೆ ಸಾಟಿಯಿಲ್ಲ ಎಂದ ಅವರು, ನೀವು ಜೀವನದಲ್ಲಿ ಒಳ್ಳೆಯ ತಾಯಿಯಾಗಿ ಸಮಾಜಕ್ಕೆ ಕೊಡುಗೆ ನೀಡಿ ಎಂದರು.

ಕೊಡುಗೆ ನೀಡಿ: ರಾಷ್ಟ್ರೀಯ ಬಾಸ್ಕೆಟ್ಬಾಲ್ ಪಟು ಸಿ.ಮಹಾನಂದ್‌, ಒಂದು ಮಗುವನ್ನು ಅಮ್ಮ ಮಾತ್ರ ದಾರಿಗೆ ತರಬಲ್ಲಳು, ಆ ಮಗುವಿನ ಭವಿಷ್ಯ ರೂಪಿಸಬಲ್ಲಳು, ಆಕೆ ಮಾತ್ರವೇ ದೈವವಾಗಿ ಸಮಾಜ, ದೇಶಕ್ಕೆ ಕೊಡುಗೆ ನೀಡಲು ಸಾಧ್ಯ ಎಂದರು.

ಪ್ರೊ.ರಾಜೇಂದ್ರ ಮಾತನಾಡಿ, ಸರ್ಕಾರಿ ಕಾಲೇಜು ಎಂಬ ಕೀಳರಿಮೆ ಇಲ್ಲ. ಹೋಂಡಾ ಕಂಪನಿ ನೀಡಿರುವ ಆಡಿಟೋರಿಯಂ, ಮಹೀಂದ್ರ ಕಂಪನಿ ನೀಡಿರುವ ಶೌಚಾಲಯ, ಮತ್ತಿತರ ಸೌಲಭ್ಯಗಳಿಗೆ ಧನ್ಯವಾದ ಸಲ್ಲಿಸಿದರು.

ಉತ್ತಮ ಸಹಕಾರ: ಕಾಲೇಜು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪಂಡಿತ್‌ ಮುನಿವೆಂಕಟಪ್ಪ, ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕರು, ಸಚಿವರಿಗೂ ಮನವಿ ಮಾಡಿದ್ದೇವೆ ಎಂದರು.

ಪ್ರೊ.ಅಶ್ವತ್ಥ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜು ನಾಲ್ಕೈದು ವರ್ಷಗಳಿಂದ ಸತತ ಪದವಿಯಲ್ಲಿ ರ್‍ಯಾಂಕ್‌ ಪಡೆಯುತ್ತಿದೆ. ಹಲವು ವಿದ್ಯಾರ್ಥಿಗಳು ಚಿನ್ನದ ಪದಕಕ್ಕೂ ಭಾಜನರಾಗಿದ್ದಾರೆ ಎಂದರು. ಕ್ರೀಡೆ, ಸಾಂಸ್ಕೃತಿಕ, ಶೈಕ್ಷಣಿಕವಾಗಿ ಸಾಧನೆ ಮಾಡಿದವರಿಗೆ ಬಹುಮಾನ ವಿತರಿಸಲಾಯಿತು. ಹೇಮಮಾಲಿನಿ ನಿರೂಪಿಸಿ, ಶ್ರೀವಿದ್ಯಾ, ಜೀವಿತಾ ಪ್ರಾರ್ಥಿಸಿ, ಬೃಂದಾ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಅಶೋಕ್‌, ವಿಜಯಕುಮಾರ್‌, ಸೀನಾನಾಯಕ್‌, ರವೀಂದ್ರ, ಶಿವಪ್ಪ, ಅಮರನಾರಾಯಣ, ಸುನೀಲ್, ಸೀನಪ್ಪ, ಮಂಜುನಾಥ್‌ ಉಪಸ್ಥಿತರಿದ್ದು, ಎನ್‌.ಎಲ್.ವಿಜಯ ವಂದಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.