ಬಿತ್ತನೆ ಆಲೂಗಡ್ಡೆಯಲ್ಲಿ ಕಲಬೆರಕೆ: ಕ್ರಮಕ್ಕೆ ಆಗ್ರಹ


Team Udayavani, Jan 18, 2022, 1:17 PM IST

ಬಿತ್ತನೆ ಆಲೂಗಡ್ಡೆಯಲ್ಲಿ ಕಲಬೆರಕೆ: ಕ್ರಮಕ್ಕೆ ಆಗ್ರಹ

ಬಂಗಾರಪೇಟೆ: ಬಿತ್ತನೆ ಆಲೂಗಡ್ಡೆಯಲ್ಲಿ ಕಲಬೆರಕೆ ಮಾಡುವ ಕೆಲವು ಖಾಸಗಿ ಮಂಡಿ ಮಾಲಿಕರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸು ದಾಖಲಿಸಿ, ಇದರ ನಿಯಂತ್ರಣಕ್ಕೆ ವಿಶೇಷ ತಂಡ ರಚನೆಮಾಡಬೇಕೆಂದು ರೈತ ಸಂಘದ ತಾಲೂಕು ಗೌರವಾಧ್ಯಕ್ಷ ಮರಗಲ್‌ ಮುನಿಯಪ್ಪ ಆಗ್ರಹಿಸಿದರು.

ರೈತ ಸಂಘದಿಂದ ಪಟ್ಟಣದ ಎಪಿಎಂಸಿಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದಅವರು, ಕಲಬೆರಕೆ ಆಲೂಗಡ್ಡೆಯನ್ನು ಮಾರಾಟಮಾಡುವ ಮಂಡಿ ಮಾಲಿಕರನ್ನು ಕೇಳಿದರೆ ಜಾತಿವ್ಯವಸ್ಥೆಯ ಕಲ್ಪನೆ, ರೈತರಿಗೆ ಎಲ್ಲಾ ಬಂಡವಾಳ ನಾವೇಕೊಟ್ಟು ಅಂಬಾನಿ ಅದಾನಿ ರೀತಿ ಕೃಷಿ ಮಾಡಿಸುತ್ತಿದ್ದೇವೆ. ನಷ್ಟವಾದರೆ ರೈತರಾಗುತ್ತಾರೆ.ನಿಮಗೇನು? ಹೆಚ್ಚಿಗೆ ಮಾತನಾಡಿದರೆ ದಲಿತರಮೇಲೆ ದೌರ್ಜನ್ಯ ಎಂಬ ಪಟ್ಟ ಕಟ್ಟಬೇಕಾಗುತ್ತದೆ ಎಂದು ಬೆದರಿಕೆ ಹಾಕುತ್ತಿದ್ದಾರೆಂದು ಹೇಳಿದರು.

ಬೆಲೆ ನಿಯಂತ್ರಣ ಮಾಡಿ: ರೈತ ಸಂಘದ ಜಿಲ್ಲಾಧ್ಯಕ್ಷಐತಾಂಡಹಳ್ಳಿ ಮಂಜುನಾಥ್‌ ಮಾತನಾಡಿ,ಲಕ್ಷಾಂತರ ರೂ. ಸಾಲ ಮಾಡಿ ಬೆಳೆ ಬೆಳೆಯಲುಮುಂದಾಗುವ ರೈತರಿಗೆ, 1 ಸಾವಿರ ರೂ.ನ ಬಿತ್ತನೆಆಲೂಗಡ್ಡೆ ಮೂಟೆಗೆ 3000 ರೂ.ನಿಂದ 4000 ರೂ.ಪಡೆಯಲಾಗುತ್ತಿದೆ. ಈ ಮೂಲಕ ಒಂದು ವಿಧದಲ್ಲಿರೈತರನ್ನು ಶೋಷಣೆ ಮಾಡುತ್ತಿದ್ದರೂ ಬೆಲೆನಿಯಂತ್ರಣ ಮಾಡಬೇಕಾದ ಅಧಿಕಾರಿಗಳು ನಾಪತ್ತೆ ಆಗಿದ್ದಾರೆ ಎಂದು ದೂರಿದರು.

ರೈತರಿಗೆ ವಂಚನೆ: ದುಬಾರಿ ಬೆಲೆ ಒಂದು ಕಡೆಯಾದರೆ ಮತ್ತೂಂದು ಕಡೆ ಪಂಜಾಬ್‌, ಹರಿಯಾಣ, ಚೆಂಬಲ್‌ ಮತ್ತಿತರ ರಾಜ್ಯಗಳ ವಿವಿಧ ಬ್ರಾಂಡ್‌ಗಳಹೆಸರಿನಲ್ಲಿ ತರಿಸುವ ಬಿತ್ತನೆ ಆಲೂಗಡ್ಡೆ ಒಂದು ಲಾರಿ ತರಿಸಿದರೆ ಅದಕ್ಕೆ ಕೆಲವು ಮಂಡಿ ಮಾಲಿಕರು ತಿನ್ನುವಆಲೂಗಡ್ಡೆ ಕಲಬೆರಕೆ ಮಾಡುವ ಮೂಲಕ ರೈತರನ್ನುವಂಚಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗಳ ಸಭೆಯಲ್ಲಿ ಬಿತ್ತನೆ ಆಲೂಗಡ್ಡೆಯಲ್ಲಿ ಕಲಬೆರಕೆ ಮಾಡಿದರೆ ಕ್ರಿಮಿನಲ್‌ಮೊಕದ್ದಮೆ ದಾಖಲಿಸುವಂತೆ ಆದೇಶ ನೀಡಿದ್ದರೂಏಕೆ ಪಾಲನೆ ಮಾಡುತ್ತಿಲ್ಲ. ಒಂದು ಕಡೆ ಬಿತ್ತನೆಆಲೂಗಡ್ಡೆ, ಮತ್ತೂಂದು ಜಾಗದಲ್ಲಿ ಕಲಬೆರಕೆ ದಂಧೆಎರಡೂ ನಡೆಯುವುದು ಮಾರುಕಟ್ಟೆ ಪ್ರಾಂಗಣದಲ್ಲೇ ಎಂಬುದು ಎಲ್ಲರಿಗೂ ತಿಳಿದಿದೆ ಎಂದರು.

ಜಾತಿ ಹೆಸರಿನಲ್ಲಿ ದೌರ್ಜನ್ಯ: ಮನವಿ ಸ್ವೀಕರಿಸಿ ಮಾತನಾಡಿದ ಎಪಿಎಂಸಿ ಅಧಿಕಾರಿ ವೈ.ನಾಗೇಶ್‌,ಆಲೂಗಡ್ಡೆ ವ್ಯಾಪಾರಸ್ಥರು ದುಬಾರಿ ಬೆಲೆ ಮತ್ತುಕಲಬೆರಕೆ ದಂಧೆಯ ಬಗ್ಗೆ ದೂರು ನೀಡಿದರೆ ಪರವಾನಗಿ ರದ್ದು ಮಾಡುತ್ತೇವೆ. ಜೊತೆಗೆ ವ್ಯಾಪಾರಮಾಡುವ ಮಾಲಿಕರು ಜಾತಿ ಹೆಸರಿನಲ್ಲಿ ದೌರ್ಜನ್ಯಮಾಡಬಾರದು. ಅಂತಹವರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಹಸಿರುಸೇನೆ ಜಿಲ್ಲಾಧ್ಯಕ್ಷ ಕಿರಣ್‌, ಕೋಲಾರ ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್‌, ಮಾಲೂರು ತಾಲೂಕು ಅಧ್ಯಕ್ಷ ಪೆಮ್ಮದೊಡ್ಡಿಯಲ್ಲಣ್ಣ, ಹರೀಶ್‌, ನಾಗಯ್ಯ, ಮುನಿರಾಜು,ವೇಣುಗೋಪಾಲ್‌, ಸುರೇಶ್‌ಬಾಬು, ಆಂಜಿನಪ್ಪ,ತಾಲೂಕು ಅಧ್ಯಕ್ಷ ಐತಾಂಡಹಳ್ಳಿ ಮುನ್ನಾ, ಚಲಪತಿ,ಚಾಂದ್‌ಪಾಷ, ಆರೀಫ್, ಬಾಬಾಜಾನ್‌, ಜಾವೀದ್‌, ಮುನಿಕೃಷ್ಣಪ್ಪ ಇತರರಿದ್ದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.