ತೋಟಗಾರಿಕೆ ಸೌಲಭ್ಯ ರೈತರಿಗೆ ಸಿಗುತ್ತಿಲ್ಲ
Team Udayavani, Dec 6, 2019, 3:39 PM IST
ಕೋಲಾರ: ಆಲೂಗಡ್ಡೆ ಬೆಳೆಯುವ ರೈತರಿಗೆ ಸಹಾಯಧನ, ಕಡಿಮೆ ದರದಲ್ಲಿ ಕೀಟ, ರೋಗನಾಶಕ ಔಷಧಿ ಹಾಗೂ ವಿಮೆ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡರ ನೇತೃತ್ವದಲ್ಲಿ ತೆರಳಿದ್ದ ರೈತರ ನಿಯೋಗ ಜಿಪಂ ಸಿಇಒ ಎಚ್.ವಿ.ದರ್ಶನ್ಗೆ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಮಾತನಾಡಿ, ಡಿಸೆಂಬರ್ ತಿಂಗಳಲ್ಲಿ ರೈತರು ಆಲೂಗಡ್ಡೆ ಬಿಟ್ಟರೆ ಬೇರೆ ಪರ್ಯಾಯ ಬೆಳೆ ಬಿತ್ತನೆ ಮಾಡಲು ಮುಂದಾಗುವುದಿಲ್ಲ, ಎಲ್ಲ ರೈತರು ಆಲೂಗಡ್ಡೆ ಬೆಳೆದರೂ ತೋಟಗಾರಿಕಾ ಇಲಾಖೆಯಿಂದ ಯಾವುದೇ ಸಹಕಾರ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಎಚ್ಚರ ವಹಿಸಿ: ರೈತರೆ ಹೊರ ರಾಜ್ಯ, ಜಿಲ್ಲೆಗಳಿಂದ ಬಿತ್ತನೆ ಗಡ್ಡೆ ಖರೀದಿ ಮಾಡಿಕೊಳ್ಳುತ್ತಾರೆ, ಎಕರೆಗೆ ಇಲಾಖೆಯಿಂದ ದೊರೆಯುವಸಹಾಯಧನ ಕಳ್ಳರ ಕೈ ಸೇರುತ್ತಿದೆ, ಕಚೇರಿಯಲ್ಲಿ ಕೆಲಸ ಮಾಡುವ ವ್ಯಕ್ತಿಗಳೇ ಅಧಿಕಾರಿಗಳನ್ನು ಕತ್ತಲಲ್ಲಿಟ್ಟು, ರೈತರಲ್ಲದವರಿಂದ ಅರ್ಜಿ ಹಾಕಿಸಿ ಹಣ ಮಂಜೂರು ಮಾಡುತ್ತಾರೆ. ಇದು ಮುಂದುವರಿಯದಂತೆ ಎಚ್ಚರವಹಿಸಬೇಕು ಎಂದು ತಾಕೀತು ಮಾಡಿದರು.
ವ್ಯಾಪಕ ಪ್ರಚಾರ: ಜಿಪಂ ಸಿಇಒ ಎಚ್.ವಿ.ದರ್ಶನ್ ಮಾತನಾಡಿ, ಆಲೂಗಡ್ಡೆ ಬೆಳೆಯುವ ರೈತರಿಂದ ವಿಮೆ ಪಾವತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ, ನಿರೀಕ್ಷಿತ ಮಟ್ಟದಲ್ಲಿ ರೈತರು ವಿಮಾ ಕಂತು ಪಾವತಿ ಮಾಡಿಲ್ಲ, ಬೆಳೆ ನಷ್ಟವಾದಾಗ ತೊಂದರೆ ಅನುಭವಿಸುತ್ತಾರೆ. ಮುಂಗಾರು ಮತ್ತು ಹಿಂಗಾರು ಮಳೆ ಸಮಯದಲ್ಲಿ ರೈತರು ಬಿತ್ತನೆ ಮಾಡುವ ಪ್ರಮುಖ ಬೆಳೆಗಳಿಗೆ ಪರಿಹಾರ ಕಲ್ಪಿಸಲು ವಿಮೆ ಸೌಕರ್ಯ ಜಾರಿಗೆ ತರಲಾಗಿದೆ. ಈ ಕುರಿತು ಇಲಾಖೆಗಳಿಂದಲೂ ವ್ಯಾಪಕ ಪ್ರಚಾರ ನಡೆಸಲಾಗುತ್ತಿದೆ ಎಂದು ಹೇಳಿದರು. ಬೆಳೆ ನಷ್ಟ ಪರಿಹಾರ ಕಲ್ಪಿಸುವುದು ಜಿಲ್ಲಾಧಿಕಾರಿ ಆಧೀನದಲ್ಲಿ ಬರುತ್ತದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳ ಲಾಗುವುದು ಎಂದು ರೈತರ ನಿಯೋಗಕ್ಕೆ ಭರವಸೆ ನೀಡಿದರು.
ಔಷಧಿ ಬಗ್ಗೆ ತಿಳಿಸಿ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ. ಗೋವಿಂಡಗೌಡ ಮಾತನಾಡಿ, ಮಂಜಿನಿಂದ ಆಲೂಗಡ್ಡೆ ಬೆಳೆಯ ಇಳುವರಿ ಕಡಿಮೆಯಾಗುತ್ತದೆ. ಬದಲಾಗುತ್ತಿರುವ ವಾತಾವರಣದಿಂದ ಚುಕ್ಕೆರೋಗ, ಎಲೆ ಕೊಳೆಯುವ ರೋಗ, ಕೀಟ ಬಾಧೆ ಎದುರಾಗುತ್ತಿದೆ. ಸಿಬ್ಬಂದಿ ತೋಟಕ್ಕೆ ಆಗಾಗ ಭೇಟಿ ನೀಡಿ ರೋಗ ನಿಯಂತ್ರಣಕ್ಕೆ ಸಿಂಪಂಡಿಸಬೇಕಾದ ಔಷಧಿಗಳ ಕುರಿತು ರೈತರಿಗೆ ಅರಿವು ಮೂಡಿಸಬೇಕು. ಅಗತ್ಯ ಔಷಧಿ ರೈತ ಸಂಪರ್ಕ ಕೇಂದ್ರ, ಹಾಪ್ಕಾಮ್ಸ್ಗಳಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ವಿಮಾ ಕಂಪನಿ ಜೊತೆ ಚರ್ಚಿಸಿ: ಈಗಾಗಲೇ ಕೆಲ ರೈತರು ಬೆಳೆ ವಿಮೆ ಪಾವತಿ ಮಾಡಿದ್ದಾರೆ. ಹಿಂದೆ ಯಾರಿಗೂ ಸರಿಯಾಗಿ ವಿಮೆ ಪರಿಹಾರ ಬರಲಿಲ್ಲ, ರೈತರು ನಿಗದಿತ ಬ್ಯಾಂಕ್ನಲ್ಲಿ ವಿಮೆ ಪಾವತಿ ಮಾಡುತ್ತಾರೆ. ಬೆಳೆ ನಷ್ಟ ಆದಾಗ ಯಾರನ್ನು ಕೇಳಬೇಕು ಎಂಬುದು ತಿಳಿಯುತ್ತಿಲ್ಲ, ಇದರಿಂದ ಅಧಿಕಾರಿಗಳು ವಿಮಾ ಕಂಪನಿಯೊಂದಿಗೆ ಚರ್ಚಿಸಿ ಪರಿಹಾರ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಸರ್ಕಾರದ ಗಮನಕ್ಕೆ ತರುತ್ತೇನೆ: ಇದಕ್ಕೆ ಪ್ರತಿಕ್ರಿಯಿಸಿದ ಜಿಪಂ ಸಿಇಒ ಎಚ್.ವಿ.ದರ್ಶನ್, ಈ ಕುರಿತು ಸರ್ಕಾರದ ಗಮನಕ್ಕೂ ತರಲಾಗುವುದು, ಶೀಘ್ರದಲ್ಲೇ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿಸಮಸ್ಯೆ ನಿವಾರಣೆಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ನಿಯೋಗದಲ್ಲಿ ಆಲೂಗಡ್ಡೆ ಬೆಳೆಗಾರರಾದ ಹೆಬ್ಬಟ ನಾರಾಯಣಗೌಡ, ಛತ್ರಕೋಡಿಹಳ್ಳಿ ಶ್ರೀರಾಮರೆಡ್ಡಿ, ವಾನರಾಶಿ ಮುನಿವೆಂಕಟಪ್ಪ, ಶಿವಕುಮಾರ್, ಕೃಷ್ಣೇಗೌಡ, ಶ್ರೀನಿವಾಸ್, ನರೇಶ್ ಮತ್ತಿತರ ರೈತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ