ಕೋಚಿಮುಲ್‌ ಹಗರಣ ಸಿಬಿಐಗೊಪ್ಪಿಸಲು ರೈತ ಸಂಘ ಆಗ್ರಹ


Team Udayavani, Feb 22, 2019, 7:25 AM IST

kochi.jpg

ಕೋಲಾರ: ಕೋಚಿಮುಲ್‌ ಭ್ರಷ್ಟಚಾರ ಹಾಗೂ ನೇಮಕಾತಿ ಹಗರಣ ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ರೈತ ಸಂಘದಿಂದ ಕಚೇರಿ ಮುಂದೆ ಪ್ರತಿಭಟಿಲಾಯಿತು. ಈ ವೇಳೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಒಂದು ಕಡೆ ಭೀಕರ ಬರಗಾಲ ಮತ್ತೂಂದು ಕಡೆ ಬೆಳೆದ ಬೆಳೆಗೆ ಬೆಲೆಯಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ರೈತರು ಸ್ವಾಭಿಮಾನದ ಬದುಕಿಗಾಗಿ ಹೈನೋದ್ಯಮವನ್ನು ಅವಲಂಬಿಸಿದ್ದಾರೆ ಎಂದು ಹೇಳಿದರು.

ಖಾಸಗಿ ಪಶು ಆಹಾರದಲ್ಲಿ ಕಲಬೆರಕೆ, ಪಶು ಇಲಾಖೆಯ ಬೇಜವಾಬ್ದಾರಿ ಮಧ್ಯೆ ಡೇರಿಗಳಲ್ಲಿನ ಹಗಲು ದರೋಡೆಯ ಮಧ್ಯದಲ್ಲಿಯೂ ಸವಾಲುಗಳ ಸಮಸ್ಯೆಗಳ ನಡುವೆ ಒದ್ದಾಡುತ್ತಿರುವ ಹೈನುಗಾರಿಕೆ ನಂಬಿರುವ ಲಕ್ಷಾಂತರ ಕುಟುಂಬಗಳ ಮೇಲೆ ಬ್ರಹ್ಮಾಸ್ತ್ರವೆಂಬಂತೆ ಹಾಲು ಒಕ್ಕೂಟದ ಆಡಳಿತ ಮಂಡಳಿ ಹಾಲಿನ ದರ ಕಡಿಮೆ ಮಾಡುವ ಜೊತೆಗೆ ಏಕಾಏಕಿ ಪಶು ಆಹಾರದ ಬೆಲೆ 180 ರೂ. ಏರಿಕೆ ಮಾಡಿರುವುದು ಬರಗಾಲದಲ್ಲಿ ರೈತರ ಮೇಲೆ ಬ್ರಹ್ಮಾಸ್ತ್ರವೆಂಬಂತಾಗಿದೆ ಎಂದು ಟೀಕಿಸಿದರು.

ರೈತರ ಶೋಷಣೆ: ಜಿಲ್ಲಾಧ್ಯಕ್ಷ ಮರಗಲ್‌ ಶ್ರೀನಿವಾಸ್‌ ಮಾತನಾಡಿ, ಲಕ್ಷಾಂತರ ಕುಟುಂಬಗಳ ಜೀವನಾಧಾರವಾದ ಒಕ್ಕೂಟ ಭ್ರಷ್ಟಾಚಾರದಲ್ಲಿ ಮುಳುಗಿದೆ. ನೇಮಕಾತಿಯಲ್ಲಿ ಕೋಟಿ ಕೋಟಿ ಹಗರಣ ಹಾಗೂ ಸಿಬ್ಬಂದಿಯ ಬೇಜವಾಬ್ದಾರಿಯಿಂದ ಚರಂಡಿ ಸೇರುತ್ತಿರುವ ಲಕ್ಷಾಂತರ ಲೀಟರ್‌ ಹಾಲು ಹಾಗೂ ಗುಣಮಟ್ಟವಿಲ್ಲದ ಪಶುಲಸಿಕೆ, ಗ್ರಾಮೀಣ ಪ್ರದೇಶದ ಹಾಲು ಒಕ್ಕೂಟಗಳಲ್ಲಿನ ಹಗಲು ದರೋಡೆಗೆ ಕಡಿವಾಣವಿಲ್ಲವಂತಾಗಿ ನೋ ಪೇಮೆಂಟ್‌, ಎಲ್‌ಎಲ್‌ಆರ್‌ ಹೆಸರಿನಲ್ಲಿ ರೈತರನ್ನು ಶೋಷಣೆ ಮಾಡುತ್ತಿದ್ದಾರೆಂದು ಅಕ್ರೋಶ ವ್ಯಕ್ತಪಡಿಸಿದರು.

ಕ್ರಮಕೈಗೊಳ್ಳುತ್ತೇನೆ: ಮನವಿ ಸ್ವೀಕರಿಸಿದ ವ್ಯವಸ್ಥಾಪಕ ನಿರ್ದೇಶಕ ಸ್ವಾಮಿ ಮಾತನಾಡಿ, ಇಲಾಖೆಯಿಂದ ಪಶು ಆಹಾರ ಮೇವು ವಿತರಣೆ ಮಾಡಲು ಸಂಬಂಧಪಟ್ಟ ಅಧ್ಯಕ್ಷರೊಡನೆ ಮಾತನಾಡುತ್ತೇನೆ. ನೇಮಕಾತಿ, ಚರಂಡಿಗೆ ಹಾಲು ಬಿಟ್ಟಿರುವ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಗುಣಮಟ್ಟದ ಕಡಿಮೆ ಇರುವ ಹಾಲಿಗೆ ನೋ ಪೇಮೆಂಟ್‌, ಎಲ್‌ಎಲ್‌ಆರ್‌ ನೀಡುತ್ತಿದ್ದೇವೆ. ಡೇರಿ ಹಗರಣಗಳ ತನಿಖೆ ಮಾಡಲು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಉಳಿದಂತೆ ಕ್ರಮಕೈಗೊಳ್ಳಲಾಗುವುದು ಎಂದರು.

ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಹುಲ್ಕೂರ್‌ ಹರೀಕುಮಾರ್‌, ವಿಜಯ್‌ಪಾಲ್‌, ಮೇಲುಗಾಣಿ ದೇವರಾಜ್‌, ಮೀಸೆ ವೆಂಕಟೇಶಪ್ಪ, ಕ್ಯಾಸಂಬಳ್ಳಿ ಪ್ರತಾಪ್‌, ವಡ್ಡಹಳ್ಳಿ ಮಂಜುನಾಥ್‌, ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್‌, ರೆಹಮಾನ್‌, ಮಂಜುನಾಥ್‌ರೆಡ್ಡಿ, ತೆರ್ನಹಳ್ಳಿ ಆಂಜಿನಪ್ಪ, ವೆಂಕಿ, ಯಲುವಳ್ಳಿ ಪ್ರಭಾಕರ್‌, ಆನಂದರೆಡ್ಡಿ, ಗಣೇಶ್‌, ಮಾಲೂರು ತಾಲೂಕು ಅಧ್ಯಕ್ಷ ವೆಂಕಟೇಶ್‌, ಮುಳಬಾಗಿಲು ತಾಲೂಕು ಅಧ್ಯಕ್ಷ ಫಾರುಕ್‌ಪಾಷ, ಬಂಗಾರಪೇಟೆ ತಾಲೂಕು ಅಧ್ಯಕ್ಷ  ಐತಾಂಡಹಳ್ಳಿ ಅಂಬರೀಶ್‌, ಆಂಚಂಪಲ್ಲಿ ಗಂಗಾಧರ್‌, ಸುಪ್ರೀಂಚಲ, ಸಾಗರ್‌, ಚಂದ್ರಪ್ಪ, ಪುತ್ತೇರಿ ರಾಜು, ಪುರುಷೋತ್ತಮ್‌, ಗೋಪಾಲ್‌, ಬಾಲು ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.