ಅರಣ್ಯ ಭೂ ಒತ್ತುವರಿ ತೆರವಿಗೆ ರೈತ ಸಂಘ ಆಗ್ರಹ
Team Udayavani, Jun 10, 2020, 6:59 AM IST
ಕೋಲಾರ: ಜಿಲ್ಲಾದ್ಯಂತ ಒತ್ತುವರಿ ಆಗಿರುವ ಅರಣ್ಯ ಭೂಮಿ ತೆರವುಗೊಳಿಸುವಂತೆ ಹಾಗೂ ಕಾಡು ಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಜೂ.15 ಅರಣ್ಯ ಇಲಾಖೆ ಮುತ್ತಿಗೆ ಹಾಕಲು ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾದ್ಯಂತ ಸರ್ಕಾರಿ ಗೋಮಾಳ, ಗುಂಡುತೋಪು, ಕೆರೆ, ಕುಂಟೆ ಸಂಪೂ ರ್ಣ ವಾಗಿ ಬಲಾ ಡ್ಯರು, ಕೆಲ ರಾಜಕೀಯ ಮುಖಂಡರು, ರಿಯಲ್ ಎಸ್ಟೇಟ್ ಉದ್ಯ ಮಿಗಳು ಒತ್ತು ವರಿ ಮಾಡುವ ಜೊತೆಗೆ ನಕಲಿ ದಾಖಲೆಗಳ ಸೃಷ್ಟಿಸಿಕೊಂಡಿದ್ದಾರೆ ಎಂದು ದೂರಿದರು.
ಈಗ ಅವರ ಕಣ್ಣು ಅರಣ್ಯ ಭೂಮಿ ಮೇಲೆ ಬಿದ್ದಿದೆ. ಎಲ್ಲಾ ತಾಲೂಕುಗಳಲ್ಲಿ ಸಾವಿರಾರು ಎಕರೆ ಅರಣ್ಯ ಭೂಮಿ ಕೆಲವು ಕಂದಾಯ, ಸರ್ವೇ ಹಾಗೂ ನೋಂದಣಿ ಅಧಿಕಾರಿಗಳ ಸಮ್ಮುಖದಲ್ಲಿ ಕೋಟ್ಯಂತರ ರೂ.ಗೆ ಅರಣ್ಯ ಭೂಮಿಗೆ ದಾಖಲೆ ಸೃಷ್ಟಿಸಿ, ಬ್ಯಾಂಕ್ಗಳಲ್ಲಿ ನೂರಾರು ಕೋಟಿ ರೂ. ಸಾಲ ಪಡೆದಿದ್ದಾರೆ. ಇಂತಹವರ ವಿರುದ ಕ್ರಮ ಏಕೆ ಇಲ್ಲ ಎಂದು ಅರಣ್ಯಾಧಿಕಾರಿಗಳ ವಿರುದ ಅಸಮಾಧಾನ ವ್ಯಕ್ತಪಡಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್ ಮಾತನಾಡಿದರು. ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಫಾರೂಕ್ಪಾಷ, ಈಕಂಬಳ್ಳಿ ಮಂಜುನಾಥ್, ವಕ್ಕ ಲೆರಿ ಹನುಮಯ್ಯ, ಮಂಗ ಸಂದ್ರ ತಿಮ್ಮಣ್ಣ, ವೆಂಕಟೇಶಪ್ಪ, ಅಶ್ವತ್ಥಪ್ಪ, ಜಗದೀಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್ ಮುಖಂಡರು ಗೈರು