ಭೂ ಹಗರಣ ತನಿಖೆಗೆ ರೈತ ಸಂಘ ಆಗ್ರಹ, ಹೆದ್ದಾರಿ ತಡೆ
Team Udayavani, Feb 27, 2020, 5:07 PM IST
ಮುಳಬಾಗಿಲು: ತಾಲೂಕಿನ ದೇವರಾಯ ಸಮುದ್ರ ಕಂದಾಯ ವೃತ್ತದ ಭೂ ಹಗರಣ ತನಿಖೆ ನಡೆಸಬೇಕು, ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರೈತ ಸಂಘದ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 75 ತಡೆದು ಪ್ರತಿಭಟಿಸಿದರು.
ಈ ವೇಳೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಜನಸಾಮಾ ನ್ಯರ ಕೆಲಸ ನಿರ್ಲಕ್ಷ್ಯ ಮಾಡುವ ಕಂದಾಯ ಅಧಿಕಾರಿಗಳು ಭೂ ದಂಧೆಕೋರರಿಗೆ ರಾಷ್ಟ್ರೀಯ ಹೆದ್ದಾರಿ ಅಕ್ಕಪಕ್ಕದ ಸರ್ವೆ ನಂ.653, 180, 112ರಲ್ಲಿನ ಗೋಮಾಳ, ಗುಂಡು ತೋಪು, ಹಕ್ಕುದಾರಿ, ಕೆರೆ ಅಂಗಳವನ್ನು ನೋಂದಣಿ, ಸರ್ವೆ ಇಲಾಖೆ ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿ ಮಾಡಿ ಪರಭಾರೆ ಮಾಡುತ್ತಿದ್ದಾರೆಂದರು. ಜಮೀನು ಮಂಜೂರು: ಅದೇ ರೀತಿ ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ಆದ ಕಿರಣ್ಕುಮಾರ್ರೆಡ್ಡಿ, ಭುವೇಂದ್ರರೆಡ್ಡಿ, ತಿಪ್ಪಾರೆಡ್ಡಿ, ರಾಜೇಂದ್ರಗೌಡ ಮತ್ತಿತರ ಪ್ರಭಾವಿ ವ್ಯಕ್ತಿಗಳಿಗೆ ಬಡವರ ಹೆಸರಿನಲ್ಲಿ ಮಂಜೂರು ನೆಪದಲ್ಲಿ ರಾತ್ರೋರಾತ್ರಿ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ, ಕೋಟ್ಯಂತರ ರೂ.ಗೆ ಸರ್ಕಾರಿ ಜಮೀನು ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಮಹಿಳಾ ಜಿಲ್ಲಾದ್ಯಕ್ಷೆ ನಳಿನಿ ಮಾತನಾಡಿದರು. ಪ್ರತಿಭಟನೆ ನಡೆಸಿದ ನಂತರ ತಹಶೀಲ್ದಾರ್ ರಾಜ್ಶೇಖರ್ಗೆ ಮನವಿ ಸಲ್ಲಿಸಿದರು. ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾದ್ಯಕ್ಷ ಮರಗಲ್ ಶ್ರೀನಿವಾಸ್, ಸುಪ್ರೀಂ ಚಲ, ಜಗದೀಶ್, ವಿನೋದ್, ಸುಧಾಕರ್, ವಡ್ಡಹಳ್ಳಿ ಮಂಜುನಾಥ್, ನವೀನ್, ಮಂಗಸಂದ್ರ ತಿಮ್ಮಣ್ಣ, ವೆಂಕಟೇಶಪ್ಪ, ಐತಾಂಡ ಹಳ್ಳಿ ಮಂಜುನಾಥ್, ಹೆಬ್ಬಣಿ ಆನಂದರೆಡ್ಡಿ, ಅಂಬ್ಲಿಕಲ್ ಮಂಜುನಾಥ, ಪುತ್ತೇರಿ ರಾಜು, ಪುತ್ತೇರಿ ನಾರಾಯಣಸ್ವಾಮಿ, ಜುಬೇರ್ಪಾಷ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ