ಎತ್ತಿನಹೊಳೆ ನೀರು ಕುಲುಷಿತ ತಡೆಗೆ ರೈತಸಂಘ ಆಗ್ರಹ


Team Udayavani, Mar 14, 2020, 4:24 PM IST

kolar-tdy-1

ಸಾಂದರ್ಭಿಕ ಚಿತ್ರ

ಕೋಲಾರ: ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯ ಕಸವನ್ನು ದೊಡ್ಡಬಳ್ಳಾಪುರ ತಾಲೂಕು ಗುಂಡ್ಲಹಳ್ಳಿ ಟರ್ರಾ ಫಾರಂ ಬಳಿಯ ಕಸ ವಿಲೇವಾರಿ ಘಟಕ ಮತ್ತು ಚಿಗ ರೇನಹಳ್ಳಿಯ ಎಂಎಸ್‌ಜಿಪಿ ಕಸ ವಿಲೇವಾರಿ ಘಟಕಗಳಿಗೆ ಹಾಕುತ್ತಿರುವುದರಿಂದ ಈ ಭಾಗದಲ್ಲಿ ಹರಿಯುವ ಎತ್ತಿನಹೊಳೆ ಕುಡಿಯುವ ನೀರು ಕಲುಷಿತವಾಗುವುದನ್ನು ತಡೆಯಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಜಿಲ್ಲಾಧಿಕಾರಿ ಸಿ. ಸತ್ಯಭಾಮಾರಿಗೆ ಮನವಿ ಸಲ್ಲಿಸಲಾಯಿತು.

ಬಿಬಿಎಂಪಿ ಕಸ ವಿಲೇವಾರಿಯಿಂದ ನೀರು ಕಲುಷಿತ: ರಾಜ್ಯ ಕಾರ್ಯದರ್ಶಿ ಅಬ್ಬಣಿ ಶಿವಪ್ಪ ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯ ಕಸವನ್ನು ದೊಡ್ಡಬಳ್ಳಾಪುರ ತಾಲೂಕು ಗುಂಡ್ಲಹಳಿ ಟರ್ರಾಫಾರಂ ಬಳಿ ಕಸ ವಿಲೇವಾರಿ ಘಟಕ ಮತ್ತು ಚಿಗರೇನಹಳ್ಳಿಯ ಎಂಎಸ್‌ ಜಿಪಿ ಕಸ ವಿಲೇವಾರಿ ಘಟಕಗಳಿಗೆ ಸುರಿಸುತ್ತಿದ್ದಾರೆ. ಎತ್ತಿನ ಹೊಳೆ ನೀರು ಸಂಗ್ರಹಿಸಲು ನಿರ್ಮಿಸಲಾಗುತ್ತಿರುವ ಭೈರ ಗೊಂಡ್ಲು ಜಲಾಶಯವೂ ಇದೇ ಪ್ರದೇಶದಲ್ಲಿ ಇರುತ್ತದೆ. ಮಳೆ ಗಾಲದಲ್ಲಿ ನೀರು ಹರಿದು ಹೋಗುವ ಜಲಾ ನಯನ ಪ್ರದೇಶದ ಬಹುತೇಖ ಭಾಗ ಇರುವುದೇ ಎಂಎಸ್‌ಜಿಪಿ ಮತ್ತು ಟರ್ರಾಫಾರಂ ಘಟಕಗಳ ವ್ಯಾಪ್ತಿ ಯಲ್ಲಿ ಕಸ ವಿಲೇವಾರಿ ಘಟಕಗಳಿಗೆ

ಸುತ್ತಲಿನ ಕೆರೆಗಳ ಮುಖ್ಯ ಜಲಾನಯನ ಪ್ರದೇಶ ಇರುವುದರಿಂದ ನೀರು ಸಂಗ್ರಹಿಸುವ ಭೈರಗೊಂಡ್ಲು ಜಲಾಶಯಕ್ಕೆ ಸೇರುತ್ತದೆ. ಕಸ, ತ್ಯಾಜ್ಯದಲ್ಲಿ ಪ್ಲಾಸ್ಟಿಕ್‌ ಹಾಗೂ ವಿಷಯುಕ್ತ ರಾಸಾ ಯನಿಕಗಳು ಇರುವುದರಿಂದ ಇವು ನೀರಿನಲ್ಲಿ ಬೆರೆತು, ಆ ನೀರನ್ನು ಕುಡಿಯುವುದರಿಂದ ನೇರವಾಗಿ ಮನುಷ್ಯನ ಹಾಗೂ ಜಾನುವಾರು, ಪ್ರಾಣಿಪಕ್ಷಿಗಳ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಇದರಿಂದ ರೋಗರುಜಿನು ಉಂಟಾಗಿ ಪ್ರಾಣಾಪಾಯ ಸಂಭವಿಸ ಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷ ಟಿ.ಎನ್‌ ರಾಮೇಗೌಡ ಮಾತನಾಡಿ, ಕಸ ವಿಲೇವಾರಿ ಮಾಡದಂತೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ತಾತ್ಕಾಲಿಕವಾಗಿ ಕಸ ತರುವುದನ್ನು ನಿಲ್ಲಿಸಲಾಗಿತ್ತು. ಈಗ ಮತ್ತೆ ಕಸ ತಂದು ಈ ಘಟಕಗಳಿಗೆ ಸುರಿಯುತ್ತಿದ್ದಾರೆ. ಈ ವಿಚಾರವನ್ನು ಸ್ಥಳೀಯರು ಕೇಳಿದಕ್ಕೆ ಇದು ಬಿಬಿಎಂಪಿ ಆಯುಕ್ತರ ಆದೇಶ ನಾವು ಪಾಲಿ ಸುತ್ತಿದ್ದೇವೆ. ನಾವು ಏನು ಮಾಡಲಾಗುವುದಿಲ್ಲ ಎಂದು ಕಸ ವಿಲೇವಾರಿ ಗುತ್ತಿಗೆ ಪಡೆದಿರುವವರು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.

ಹೀಗಾಗಿ ತಾವುಗಳು ಕೂಡಲೇ ಎತ್ತಿನಹೊಳೆ ನೀರು ಸಂಗ್ರಹಗೊಳ್ಳುವ ಜಲಾನಯನ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಬೆಂಗಳೂರು ಕಸ ವಿಲೇವಾರಿ ಮಾಡದಂತೆ ಬಿಬಿಎಂಪಿ ಆಯುಕ್ತರಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿ ತಡೆಯಬೇಕು. ಮತ್ತೆ ವಿಲೇವಾರಿಗೆ ಯತ್ನಿಸಿದರೆ ಮುಂದಾದರೆ ಸ್ಥಳೀಯರು ಹಾಗೂ ಬಯಲು ಸೀಮೆಯ ಜಿಲ್ಲೆಯ ರೈತರು ಮತ್ತು ಸಾರ್ವಜನಿಕರು ತೀವ್ರ ಸ್ವರೂಪದ ಪ್ರತಿಭಟನೆ ಹಮ್ಮಿಕೊಳ್ಳ  ಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ನಿಯೋಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಉಪಾಧ್ಯಕ್ಷರಾದ ಚಂದ್ರಪ್ಪ, ಲಕ್ಷ್ಮಣ, ಮಾಲೂರು ತಾಲೂಕು ಅಧ್ಯಕ್ಷ ಕೆ.ನರಸಿಂಹಯ್ಯ, ಮುನೇಗೌಡ, ಗೋಪಾಲಯ್ಯ ಕೆ.ಆರ್‌, ಶಿವಶಂಕರ್‌, ಮಂಜುನಾಥ್‌, ಬಿ.ಜಿ ಯಲ್ಲಪ್ಪ, ಮುನಿವೆಂಕಟಪ್ಪ, ನಾಗರಾಜ್‌, ವೆಂಕಟರಾಮಗೌಡ, ಗೋಪಿ, ಗೋಪಾಲ್‌, ನಾಗರಾಜ್‌, ವೆಂಕಟಾಚಲಪತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.