ಕೆರೆ ಒತ್ತುವರಿ ತೆರವು ಮಾಡಿ, ರೈತರ ಬೆಳೆ ಉಳಿಸಿ


Team Udayavani, Jul 20, 2021, 2:29 PM IST

ಕೆರೆ ಒತ್ತುವರಿ ತೆರವು ಮಾಡಿ, ರೈತರ ಬೆಳೆ ಉಳಿಸಿ

ಬಂಗಾರಪೇಟೆ: ಕೆರೆಗಳು ತವರು ಎಂದು ಹೆಸರು ಪಡೆದಿರುವ ಜಿಲ್ಲೆಯಲ್ಲಿ ದಿನೇ ದಿನೆ ನಶಿಸಿ ಹೋಗುತ್ತಿವೆ. ಇತ್ತೀಚೆಗೆಸುರಿಯುತ್ತಿರುವ ಭಾರಿ ಮಳೆಗೆರಾಜಕಾಲುವೆಗಳಿಲ್ಲದೆ ಮಳೆ ನೀರು ಕೆರೆಗೆ ಸೇರದೆ ರೈತರ ಹೊಲ, ತೋಟಗಳಿಗೆ ನುಗ್ಗಿ ಬೆಳೆನಾಶ ಆಗುತ್ತಿದೆ ಎಂದು ರೈತಸಂಘದ ರಾಜ್ಯ ಉಪಾಧ್ಯಕ್ಷಕೆ.ನಾರಾಯಣಗೌಡ ಹೇಳಿದರು.

ತಾಲೂಕಾದ್ಯಂತ ಒತ್ತುವರಿಯಾಗಿರುವಕೆರೆ, ರಾಜಕಾಲುವೆ, ಗುಂಡುತೋಪುಗಳನ್ನುರಾಜ್ಯ ಹೈಕೋರ್ಟ್‌ ಆದೇಶದಂತೆ ತೆರವುಗೊಳಿಸಿ ಅಭಿವೃದ್ಧಿಪಡಿಸಬೇಕೆಂದು ಸಾಮೂಹಿಕ ನಾಯಕತ್ವ‌ ರೈತಸಂಘದಿಂದ ತಾಲೂಕು ಕಚೇರಿ ಎದುರು ಹೋರಾಟ ಮಾಡಿ, ಶಿರಸ್ತೇದಾರ್‌ ರವಿಕುಮಾರ್‌ಗೆ ಮನವಿ ಸಲ್ಲಿಸಿ ಮಾತನಾಡಿದರು.

ಹಣ ಲೂಟಿ: ಮನುಷ್ಯನ ದುರಾಸೆಯೇ ಕೆರೆಗಳ ಸರ್ವನಾಶಕ್ಕೆ ಮೂಲ ಕಾರಣವಾಗಿವೆ. ಮತ್ತೂಂದೆಡೆ ಪೂರ್ವಜರು ಬೆವರು ಸುರಿಸಿ ಕಟ್ಟಿ ಬೆಳೆಸಿದಂತಹ ಕೆರೆ, ರಾಜಕಾಲುವೆಗಳುಒತ್ತುವರಿದಾರರ ಪಾಲಾಗುತ್ತಿದ್ದರೂ ಒತ್ತುವರಿ ತೆರವುಗೊಳಿಸಲು ಜಿಲ್ಲಾಡಳಿತ, ತಾಲೂಕು ಆಡಳಿತ ವಿಫ‌ಲವಾಗಿವೆ. ಮತ್ತೂಂದೆಡೆ ಕೆರೆ, ರಾಜಕಾಲುವೆಗಳ ಅಭಿವೃದ್ಧಿಗೆ ನೂರಾರು ಕೋಟಿ ರೂ. ಅನುದಾನ ಬಿಡುಗಡೆ ಯಾಗುತ್ತಿದ್ದರೂ ಕೆರೆ ಹೆಸರಿನಲ್ಲಿ ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿ ಮಾಡಿ ಕೋಟ್ಯಂತರರೂ. ಹಣ ಲೂಟಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾದ್ಯಂತ ಹುಡುಕಾಡಿದರೂ ಸಂಬಂಧಪಟ್ಟ ಇಲಾಖೆಗಳಿಂದ ಯಾವುದೇಕೆರೆ ಅಭಿವೃದ್ಧಿಯಾಗಿಲ್ಲ. ಅಭಿವೃದ್ಧಿ ಮಾಡದೆಟೆಂಡರ್‌ದಾರರು, ಅಧಿಕಾರಿಗಳು ಹಣಲೂಟಿ ಮಾಡುವ ದಂಧೆಯಲ್ಲಿ ತೊಡಗಿದ್ದರೂ ಇವರ ವಿರುದ್ಧ ಯಾವುದೇ ಕ್ರಮ ಏಕಿಲ್ಲ? ರಾಜಕಾರಣಿಗಳಒತ್ತಡಕ್ಕೆಮಣಿದುಒತ್ತುವರಿದಾರರತಂಟೆಗೂ ಹೋಗುತ್ತಿಲ್ಲ. ಇಷ್ಟೆಲ್ಲಾ ಅವ್ಯವಸ್ಥೆತಾಲೂಕಿನಲ್ಲಿ ತಾಂಡವವಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನೀರು ಸಂರಕ್ಷಿಸುತ್ತಿಲ್ಲ: ರೈತ ಸಂಘದ ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್‌ ಮಾತನಾಡಿ,ಮತ್ತೂಂದೆಡೆ ಜನಪ್ರತಿನಿಧಿಗಳು ಕೆರೆಗಳನ್ನು ಉಳಿಸಿಕೊಂಡು ಪ್ರಕೃತಿದತ್ತವಾಗಿ ಬರುವ ಮಳೆ ನೀರು ಸಮರ್ಪಕವಾಗಿ ಸಂಗ್ರಹಿಸಲು ಕಾರ್ಯ ಮಾಡುತ್ತಿಲ್ಲ. ಸಾವಿರಾರು ಕೋಟಿ ಖರ್ಚು ಮಾಡಿ ನೀರಾವರಿ ಯೋಜನೆ ಜಾರಿ ಮಾಡುತ್ತೇವೆಂದು ಜನರ ತೆರಿಗೆ ಹಣದಲ್ಲಿ ಕಮಿಷನ್‌ ಪಡೆಯುತ್ತಿದ್ದಾರೆ ಎಂದುದೂರಿದರು.

ಕಷ್ಟಕ್ಕೆ ಸಿಕ್ಕ ಜಯ: ಭವಿಷ್ಯದ ಹಿತದೃಷ್ಟಿಯಿಂದ ಹೈಕೋರ್ಟ್‌ ರಾಜ್ಯಾದ್ಯಂತಒತ್ತುವರಿಯಾಗಿರುವ ಕೆರೆ, ರಾಜಕಾಲುವೆ, ಗುಂಡುತೋಪುಗಳನ್ನು ಸರ್ವೆ ಮಾಡಿಸಿ, ಎಷ್ಟೇ ಪ್ರಭಾಯಾಗಿದ್ದರೂ ಮುಲಾಜಿಲ್ಲದೆ ತೆರವುಗೊಳಿಸುವಂತೆ ಆದೇಶ ಮಾಡಿರುವುದುಪೂರ್ವಜರ ಕಷ್ಟಕ್ಕೆ ಹಾಗೂ ಕೆರೆ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ಹೇಳಿದರು.

ಹೋರಾಟದಲ್ಲಿ ತಾಲೂಕು ಅಧ್ಯಕ್ಷ ಐತಾಂಡಹಳ್ಳಿ ಮುನ್ನಾ, ಹಸಿರು ಸೇನೆ ಜಿಲ್ಲಾಧ್ಯಕ್ಷಕಿರಣ್‌, ಜಿಲ್ಲಾ ಉಪಾಧ್ಯಕ್ಷ ಚಾಂದ್‌ ಪಾಷ, ಜಿಲ್ಲಾ ಕಾರ್ಯಾಧ್ಯಕ್ಷ ಮರಗಲ್‌ ಮುನಿಯಪ್ಪ, ಆಂಜಿ, ಮಂಜುನಾಥ್‌, ಬಾಬಾಜಾನ್‌, ನವಾಜ್‌, ಜುàರ್‌, ಜಾವೀದ್‌, ಘೌಸ್‌, ಕಾಮಸಮುದ್ರ ಹೋಬಳಿ ಅಧ್ಯಕ್ಷ ಮಂಜುನಾಥ್‌, ಕದಿರಿನತ್ತ ಗುಲ್ಲಟ್ಟಿ ಚಲಪತಿ, ಬೂದಿಕೋಟೆ ಹೋಬಳಿ ಅಧ್ಯಕ್ಷ ನಾಗಯ್ಯ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.