ಬೆಳೆ ಪರಿಹಾರಕ್ಕೆ ರೈತಸಂಘ ಆಗ್ರಹ
Team Udayavani, May 17, 2019, 2:54 PM IST
ಬಂಗಾರಪೇಟೆ: ತಾಲೂಕು ಸತತ ಬರಗಾಲಕ್ಕೆ ತುತ್ತಾದರೂ ಲೋಕ ಸಭಾ ಚುನಾವಣೆ ನೆಪದಲ್ಲಿ ಯಾವುದೇ ಬೆಳೆ ಪರಿಹಾರ ರೈತರಿಗೆ ತಲುಪಿಲ್ಲ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್ ಆಗ್ರಹಿಸಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ರೈತ ಸಂಘದಿಂದ ತಹಶೀಲ್ದಾರ್ ಕೆ.ಬಿ.ಚಂದ್ರಮೌಳೇಶ್ಪರ್ರಿಗೆ ಮನವಿ ನೀಡಿ ಮಾತನಾಡಿದರು.
ತಾಲೂಕಿನಲ್ಲಿ ಆಲಿಕಲ್ಲು ಮತ್ತು ಬಿರುಗಾಳಿಗೆ ನಾಶವಾಗಿರುವ ಬೆಳೆ ಸಮೀಕ್ಷೆ ಮಾಡಲು ವಿಶೇಷ ಅಧಿಕಾರಿಗಳ ತಂಡ ರಚನೆ ಮಾಡಿ ಪ್ರತಿ ಎಕರೆಗೆ 2 ಲಕ್ಷ ಬೆಳೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಬರಗಾಲದಿಂದ ಕೊಳವೆ ಬಾವಿಗಳು ಕೈಕೊಟ್ಟು ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೂಲಕ ಸಾವಿರಾರು ರೂ.,ಖರ್ಚು ಮಾಡಿ ಬೆಳೆಗಳಿಗೆ ನೀರು ಹಾಯಿಸಲಾಗುತ್ತಿತ್ತು. ಆದರೆ, ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆ, ಬಿರುಗಾಳಿ ಮಳೆ ತೋಟಗಳನ್ನು ನಾಶಪಡಿಸಿದೆ ಎಂದರು.
ಈಗಾಗಲೇ ಬಿಸಿಲಿನ ತಾಪಕ್ಕೆ ಟೊಮೆಟೋ, ಕ್ಯಾಪ್ಸಿಕಾಂ ಮತ್ತಿತರ ವಾಣಿಜ್ಯ ಬೆಳೆಗಳು ಸಂಪೂರ್ಣವಾಗಿ ನೆಲಕಚ್ಚಿವೆ. ಕೂಡಲೇ ಅಧಿಕಾರಿಗಳು ವಾಣಿಜ್ಯ ಬೆಳೆಗಳ ನಷ್ಟದ ಬಗ್ಗೆ ಪರಿಶೀಲಿಸಲು ವಿಶೇಷವಾದ ತಂಡ ರಚಿಸಬೇಕು. ಜಿಲ್ಲಾಧಿಕಾರಿಗಳಿಗೆ ಬೆಳೆ ನಷ್ಟದ ವರದಿ ಸಲ್ಲಿಸಿ ಪ್ರತಿ ಎಕರೆಗೆ 2 ಲಕ್ಷ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ತಾಲೂಕು ತಹಶೀಲ್ದಾರ್ ಕೆ.ಬಿ.ಚಂದ್ರಮೌಳೇಶ್ವರ್, ಇತ್ತೀಚೆಗೆ ಸುರಿಯುತ್ತಿರುವ ಮಳೆಯಿಂದ ನಾಶವಾಗಿರುವ ಬೆಳೆ ನಷ್ಟ ಪರೀಶೀಲನೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳೊಡನೆ ಸಭೆ ಕರೆಯಲಾಗುತ್ತದೆ. ರೈತರಿಗೆ ಪರಿಹಾರ ನೀಡುವ ಜೊತೆಗೆ ಹೆಚ್ಚಿನ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರುತ್ತೇನೆಂದರು.
ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ತಾಲೂಕು ಮುಖಂಡ ಉದಯ್ ಕುಮಾರ್, ಮರಗಲ್ ಜಯಪ್ಪ, ಹರೀಶ್, ನವೀನ್, ಮುನಿಯಪ್ಪ, ಟಿಎಸ್ಎಸ್ ಅಜಂ ಶರೀಫ್, ಇಸ್ಮಾಯಿಲ್, ಮುಬೀನ್ಪಾಷಾ, ಮಂಜುನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ