ರೈತರ ಮನೆ ಬಾಗಿಲಿಗೆ 2 ಕೋಟಿ ಸಾಲ ವಿತರಣೆ


Team Udayavani, Sep 11, 2022, 5:12 PM IST

tdy-15

ಕೆಜಿಎಫ್‌: ತಾಲೂಕು ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲು ರೈತರ ಮನೆ ಬಾಗಿಲಲ್ಲೇ 2 ಕೋಟಿ ರೂ.ಗಳ ಕೆಸಿಸಿ ಸಾಲವನ್ನು ಶಾಸಕಿ ರೂಪಕಲಾ ಶಶಿಧರ್‌ ವಿತರಿಸಿದರು.

ಬೇತಮಂಗಲ ವ್ಯವಸಾಯ ಸೇವಾ ಸಹಕಾರ ಸಂಘದಿಂದ ಸ್ತ್ರೀ ಶಕ್ತಿ ಗುಂಪುಗಳಿಗೆ ಮತ್ತು ಕೃಷಿಯನ್ನೇ ನಂಬಿರುವ ತಾಲೂಕಿನ ಗುಟ್ಟಹಳ್ಳಿ, ದೊಡ್ಡಕಾರಿ, ನತ್ತ, ಬಡಮಾಕನಹಳ್ಳಿ, ಕಂಗಾನ ಲ್ಲೂರು, ಜಯಮಂಗಲ ಮದ್ದನಾಯಕನಹಳ್ಳಿ, ಗೆನ್ನೇರಹಳ್ಳಿ ಕಳ್ಳಿಕುಪ್ಪ, ಪುತರಾಜನಹಳ್ಳಿ ಬೇತಮಂಗಲ ಸೇರಿದಂತೆ 14 ಗ್ರಾಮಗಳ ರೈತರ ಮನೆ ಬಾಗಿಲಿಗೆ ಹೋಗಿ ಎಟಿಎಂ ಕಾರ್ಡ್‌ ಮೂಲಕ ಸಾಲವನ್ನು ವಿತರಿಸಿದರು.

ಈ ವೇಳೆ ಮಾತನಾಡಿದ ಶಾಸಕಿ ರೂಪಕಲಾ, ಕ್ಷೇತ್ರದ ಹೆಣ್ಣು ಮಕ್ಕಳು ಡಿಸಿಸಿ ಬ್ಯಾಂಕ್‌ನಿಂದ ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿ ಮಾಡು ತ್ತಿದ್ದು, ಪಡೆದ ಸಾಲದ ಹಣದಲ್ಲಿ ಕುಟಂಬದ ಅರ್ಥಿಕ ಬಲವರ್ಧನೆಗೆ ಬಳಿಸಿಕೊಂಡು ಗೌರವಯುತ ಜೀವನ ನಡೆಸುತ್ತಿದ್ದಾರೆ ಎಂದರು. ಕಳೆದ ನಾಲ್ಕು ಬಾರಿ ಸಾಲವನ್ನು ನೀಡಿದ್ದೇವೆ. ಹೆಣ್ಣುಮಕ್ಕಳು ಸಾಲದ ಹಣದಿಂದ ಕುರಿ, ಹಸು, ಮೇಕೆ, ತರಕಾರಿ ಮಾರಾಟ, ಹೊಲಿಗೆ ಯಂತ್ರ ಸೇರಿದಂತೆ ಹಲವು ಗುಡಿ ಕೈಗಾರಿಕೆಗಳಲ್ಲಿ ಈ ಹಣ ಹೂಡಿ ಜೀವನ ಮಟ್ಟ ಸುಧಾರಿಸಿಕೊಂಡಿರುವುದು ಹೆಮ್ಮೆಯ ವಿಷಯ ಎಂದರು.

ವಿರೋಧ ಪಕ್ಷದ ಮುಖಂಡರು ಸುಖಾ ಸಮ್ಮನೆ ಡಿಸಿಸಿ ಬ್ಯಾಂಕ್‌ನ ಸಾಲವನ್ನು ನೀಡುವುದೇ ಶಾಸಕರ ಕೆಲಸವಾಗಿದೆ ಎಂಬ ಸುಳ್ಳು ಆರೋಪ ಮಾಡುತ್ತಿದ್ದಾರೆ. ಆದರೆ ಬೇತಮಂಗಲ ಗ್ರಾಪಂ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳಿಂದ ಗ್ರಾಮಗಳ ಅಭಿವೃದ್ಧಿಗೆ 20 ಕೋಟಿ ರೂ.ಗಳ ನಾನಾ ಕಾಮಗಾರಿಗಳಿಗೆ ಚಾಲನೆ ನೀಡಿ ಬಹುತೇಕ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ದಾಖಲೆ ಸಮೇತ ನೀಡುವುದಾಗಿ ವಿರೋಧ ಪಕ್ಷದವರ ಆರೋಪಕ್ಕೆ ತಿರುಗೇಟು ನೀಡಿದರು.

40 ಸಾವಿರ ಹೆಣ್ಣು ಮಕ್ಕಳಿಗೆ ಸಾಲ: ಕೆಜಿಎಫ್‌ ತಾಲೂಕಿನಲ್ಲಿ ಡಿಸಿಸಿ ಬ್ಯಾಂಕ್‌ನಿಂದ 40 ಸಾವಿರ ಹೆಣ್ಣು ಮಕ್ಕಳಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಿ ಸಮಾಜದ ಮುಖ್ಯವಾಹಿನಿಗೆ ಹೆಣ್ಣುಮಕ್ಕಳನ್ನು ಕರೆ ತರುವ ಕೆಲಸ ಮಾಡಿದ್ದು, ನನ್ನ ಕ್ಷೇತ್ರದ ತಾಯಂದಿರು ಬದುಕು ಕಟ್ಟಿಕೊಳ್ಳಲು ಸಾಲ ಸೌಲಭ್ಯ ವಿತರಿಸಿದ ಬ್ಯಾಲಹಳ್ಳಿ ಗೋವಿಂದಗೌಡರಿಗೆ ಧನ್ಯವಾದ ತಿಳಿಸುವುದಾಗಿ ನುಡಿದರು. ಶಾಸಕರ ಬೆಂಬಲಿಸಿ ಮುಖಂಡರಾದ ಅ.ಮು. ಲಕ್ಷ್ಮೀನಾರಾಯಣ ಮತ್ತಿತರರು ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶಾಸಕರು ಕ್ಷೇತ್ರದಲ್ಲಿ ಬಡ ಹೆಣ್ಣು ಮಕ್ಕಳ ಸೇವೆ ಮಾಡಲು ಶಾಸಕರ ಕೈಯನ್ನು ಬಲಪಡಿಸಬೇಕು ಎಂದರು.

ಈ ವೇಳೆ ಮುಖಂಡ ಅ.ಮು. ಲಕ್ಷ್ಮೀನಾರಾಯಣ್‌, ಬೇತಮಂಗಲ ವ್ಯವಾಸಯ ಸೇವಾ ಸಹಕಾರ ಸಂಘ ಅಧ್ಯಕ್ಷ ಪ್ರಸನ್ನ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ರಾಧಾಕೃಷ್ಣರೆಡ್ಡಿ ಸುರೇಂದ್ರಗೌಡ, ವಕೀಲರಾದ ಪದ್ಮನಾಭರೆಡ್ಡಿ, ಓಬಿಸಿ ಮುನಿಸ್ವಾಮಿ ಇತರರು ಹಾಜರಿದ್ದರು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.