ಆಲೂಗಡ್ಡೆ ಬಿತ್ತನೆ ಬೀಜ ದುಬಾರಿ ಬೆಲೆಗೆ ಮಾರಾಟ


Team Udayavani, Nov 23, 2020, 6:39 PM IST

ಆಲೂಗಡ್ಡೆ ಬಿತ್ತನೆ ಬೀಜ ದುಬಾರಿ ಬೆಲೆಗೆ ಮಾರಾಟ

ಬಂಗಾರಪೇಟೆ: ಜಿಲ್ಲೆಯ ರೈತರ ಪ್ರಮುಖ ತೋಟಗಾರಿಕೆ ಬೆಳೆಯಾಗಿರುವ ಆಲೂಗಡ್ಡೆ ಬಿತ್ತನೆಬೀಜಕ್ಕೆ ಈಗ ಉತ್ತಮ ಬೇಡಿಕೆ ಇದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಆಲೂಗಡ್ಡೆ ಮಂಡಿ ಮಾಲೀಕರು ಜಿಲ್ಲಾಡಳಿತ ನಿಗದಿ ಮಾಡಿರುವ ದರಕ್ಕಿಂತ ಎರಡು ಪಟ್ಟು ಅಧಿಕ ಬೆಲೆಗೆ ಮಾರಾಟ ಮಾಡಿ ರೈತರಿಂದ ಹೆಚ್ಚು ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆ.ನಾರಾಯಣಗೌಡ ಆರೋಪಿಸಿದರು.

ಪಟ್ಟಣದ ಎಪಿಎಂಸಿ ಆವರಣದಲ್ಲಿ ಸಭೆ ಸೇರಿಮಾತನಾಡಿದ ಅವರು, ಬಂಗಾರಪೇಟೆ ಎಪಿಎಂಸಿ ಮಾರುಕಟ್ಟೆಯಲ್ಲಿ ಮಂಡಿ ಮಾಲೀಕರು ಜಿಲ್ಲಾಡಳಿತ ನಿಗದಿಪಡಿಸಿದ ರೂ.3,925 ದರಕ್ಕಿಂತ ಎರಡು ಪಟ್ಟು ಹೆಚ್ಚು ಅಂದ್ರೆ 50 ಕೆ.ಜಿ. ಆಲೂಗಡ್ಡೆ ಬಿತ್ತನೆ ಬೀಜಕ್ಕೆ 6 ಸಾವಿರದಿಂದ 7 ಸಾವಿರ ವರೆಗೂ ಮಾರಾಟ ಮಾಡುತ್ತಿದ್ದಾರೆ.ಕೋವಿಡ್‌-19 ಸೃಷ್ಟಿಸಿದಬಿಕ್ಕಟ್ಟಿನಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಬಿತ್ತನೆ ಆಲೂಗಡ್ಡೆ ಮಾರಾಟ ಮಾಡುವ ವರ್ತಕರು ಹಣ ವಸೂಲಿ ಮಾಡುತ್ತಿದ್ದಾರೆಂದು ದೂರಿದರು.

ವಂಚನೆ ಆರೋಪ: ಇಲ್ಲಿನ ಬಿತ್ತನೆ ಆಲೂಗಡ್ಡೆಯನ್ನು ನೆರೆಯ ಆಂಧ್ರ, ತಮಿಳುನಾಡು ಸೇರಿದಂತೆ ಚಿಕ್ಕಬಳ್ಳಾಪುರ, ತುಮಕೂರು, ಬೆಂ.ಗ್ರಾಮಾಂತರ ಜಿಲ್ಲೆಗಳಿಂದ ರೈತರು ಬಂದು ಹೆಚ್ಚಿನ ಹಣ ಕೊಟ್ಟು ಖರೀದಿ ಮಾಡುತ್ತಿದ್ದಾರೆ. ಖರೀದಿ ಮಾಡಿದ ರೈತರು ರಶೀದಿ ಕೇಳಿದ್ರೆ ಜಿಎಸ್‌ಟಿ ಬಿಲ್‌ಕೊಡಬೇಕಾದ್ರೆ ಇನ್ನು ಹೆಚ್ಚಿನ ಹಣ ನೀಡಬೇಕೆಂದು ಮಂಡಿ ಮಾಲೀಕರು ಯಾರಿಗೂ ರಶೀದಿ ನೀಡದೆ ವಂಚನೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳು ಅಸಹಾಯಕ: ರೈತ ಸಂಘದ ತಾಲೂಕು ಅಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್‌ ಮಾತನಾಡಿ, ಎಪಿಎಂಸಿ ಆಲೂಗಡ್ಡೆ ಮಂಡಿ ಮಾಲೀಕರು ಹಗಲು ದರೋಡೆ ಮಾಡುತ್ತಿರುವುದು ಇಲ್ಲಿನ ಎಪಿಎಂಸಿ ಅಧಿಕಾರಿಗಳು ಹಾಗೂ ಆಡಳಿತ ವರ್ಗಕ್ಕೂ ಗೊತ್ತಿದೆ. ಆದರೆ, ಬಹುತೇಕ ಮಂಡಿ ಮಾಲೀಕರು ರಾಜಕೀಯ ಪ್ರಭಾವದಿಂದಾಗಿ ಎಪಿಎಂಸಿಯಲ್ಲಿ ಗಟ್ಟಿಯಾಗಿ ತಳವೂರಿದ್ದಾರೆ. ಜನಪ್ರತಿನಿಧಿಗಳು ಯಾವಾಗಲೂ ಮಂಡಿ ಮಾಲೀಕರಪರ ನಿಲ್ಲುವುದರಿಂದ ರೈತರಿಗೆ ವಂಚನೆ ಆಗುತ್ತಿದ್ದು,

ಮಂಡಿ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲು ಸಾಧ್ಯವಾಗದೇ ಎಪಿಎಂಸಿ ಅಧಿಕಾರಿಗಳು ಅಸಹಾಯಕರಾಗಿದ್ದಾರೆ ಎಂದು ಟೀಕಿಸಿದರು. ರೈತ ಸಂಘದ ಮುಖಂಡರಾದ ಐತಾಂಡಹಳ್ಳಿ ಮುನ್ನಾ, ಚಾಂದ್‌ ಪಾಷ, ಜಾವೇದ್‌, ಕಿರಣ್, ಶಶಿ, ನಾರಾಯಣ. ಅಲ್ಲು ಪ್ರಕಾಶ, ಅಮರೀಶ್‌, ಮಂಜುನಾಥ್‌, ವೆಂಕಟರಾಮ, ನವಾಜ್, ಗೌಸ್‌ ಪಾಷ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.