ಜಮೀನು ಪರಭಾರೆ ಆರೋಪ: ರೈತ ಸಂಘಪ್ರತಿಭಟನೆ
Team Udayavani, Nov 14, 2020, 9:26 PM IST
ಮುಳಬಾಗಿಲು: ವೀರಭದ್ರ ನಗರದ ಸರ್ವೆ ನಂಬರ್92/3ರಲ್ಲಿನ 1.12 ಎಕರೆ ದಲಿತರ ಜಮೀನನ್ನು ನಗರಸಭೆ ಅಧಿಕಾರಿಗಳು ನಕಲಿ ದಾಖಲೆಗಳ ಮೂಲಕ ಅಕ್ರಮವಾಗಿ ವಶಪಡಿಸಿಕೊಳ್ಳಲು ಯತ್ನಿಸುತ್ತಿದ್ದು, ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ಪ್ರೊ.ನಂಜುಂಡಸ್ವಾಮಿ ಬಣದ ಕಾರ್ಯಕರ್ತರು ನಗರದ ಮಿನಿವಿಧಾನಸೌಧ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ರಾಜಶೇಖರ್ಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿಮಾತನಾಡಿದ ಸಂಘದಜಿಲ್ಲಾಧ್ಯಕ್ಷ ರಾಮಶಿವಣ್ಣ, ಮುಳಬಾಗಿಲಿನ ವೀರಭದ್ರನಗರದಚಂದ್ರಶೇಖರ್ ತಮ್ಮ ತಾತ ಗುರುವನಭೋವಿ ಹೆಸರಿಗೆ ಸರ್ವೆ ನಂಬರ್92/3ರಲ್ಲಿನ1.12 ಎಕರೆ ಜಮೀನಿದ್ದು ,ಸದರಿ ಜಮೀನಿನಲ್ಲಿ ಹಲವಾರು ದಶಗಳಿಂದ ಕೃಷಿಚಟುವಟಿಕೆಗಳನ್ನು ಕೈಗೊಳ್ಳುತ್ತಾ ಸ್ವಾಧೀನದಲ್ಲಿರುತ್ತಾರೆ. ಆದರೆ ಸದರಿ ಜಮೀನನ್ನು ಕಬಳಿಸಲು ನಗರಸಭೆ ಅಧಿಕಾರಿಗಳುಕಂದಾಯ ಇಲಾಖೆಕೆಲವು ಅಧಿಕಾರಿಗಳ ಸಹಕಾರದೊಂದಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ದಲಿತರ ಜಮೀನನ್ನು ಅಕ್ರಮವಾಗಿ ವಶಕ್ಕೆ ಪಡೆದುಕೊಳ್ಳಲು ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.
ಇಂತಹ ಅಕ್ರಮಗಳಿಗೆ ಅವಕಾಶ ನೀಡದೆ ತಹಶೀಲ್ದಾರ್ ಅವರು ಜಮೀನನ್ನು ಗುರ್ತಿಸಿಕೊಡಬೇಕು. ತಪ್ಪಿದಲ್ಲಿ ಸದರಿ ಕುಟುಂಬಸ್ಥರು ಇದೇ ಕಚೇರಿ ಬಳಿಯೇ ಆತ್ಮಹತ್ಯೆಗೆ ಶರಣಾಗುವುದಾಗಿಎಚ್ಚರಿಸಿ ಮನವಿ ಸಲ್ಲಿಸಿದರು.
ಕಾರ್ಯಾಧ್ಯಕ್ಷ ಪ್ರಸ್ ಗಣೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ಎಲ್.ಎನ್.ಬಾಬು, ಉಪಾಧ್ಯಕ್ಷ ನಂದಕುಮಾರ್, ಜಿಲ್ಲಾ ಮುಖಂಡ ಕೊಲದೇವಿ ಗೋಪಾಲಕೃಷ್ಣ, ಸುಣ್ಣಕಲ್ ಗಂಗಾದರ್, ಶ್ರೀನಾಥ್, ಚಂದ್ರಶೇಖರ್, ಕೃಷ್ಣಪ್ಪ ಸೇರಿದಂತೆ ಜಮೀನಿಗೆ ಸಂಬಂಧಿಸಿದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ