ಬಹುರಾಷ್ಟ್ರೀಯ ಕಂಪನಿಗಳ ಪರ ಸರ್ಕಾರ
Team Udayavani, Feb 7, 2021, 1:50 PM IST
ಮಾಲೂರು: ಕಳೆದ ಎರಡು ತಿಂಗಳುಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಪರಿಗಣಿಸದೆ ರೈತ ವಿರೋಧಿ ನೀತಿ ಮತ್ತು ಕೃಷಿ ನೀತಿ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ಪ್ರಾಂತ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯ ಕರ್ತರು ಪಟ್ಟಣದ ಬಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಮುನಿಸ್ವಾಮಿ ಗೌಡ ನೇತೃತ್ವದಲ್ಲಿ ಸಂಘಟಿತರಾದ ಕಾರ್ಯಕರ್ತರು ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀತಿ ಖಂಡಿಸಿದರು.
ದೆಹಲಿಯಲ್ಲಿ ನಡೆಸುತ್ತಿರುವ ರೈತ ಪ್ರತಿಭಟನೆ ಹತ್ತಿಕ್ಕುವ ಉದ್ದೇಶದಿಂದ ಕೇಂದ್ರ ಸರ್ಕಾರ ರೈತರ ಮೇಲೆ ಪೊಲೀಸ್ ಹಾಗೂ ಸೇನಾ ಪಡೆಯ ಬಲ ಪ್ರಯೋಗ ಮಾಡಲು ಸಜ್ಜಾಗಿದ್ದು, ಆಡಳಿತಾರೂಢ ಸರ್ಕಾರಗಳು ಬಹುರಾಷ್ಟ್ರೀಯ ಕಂಪನಿಗಳ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ದೂರಿದರು. ಪ್ರತಿಭಟನೆ ನಂತರ ಪೊಲೀಸ್ ಇಲಾಖೆಯ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಿದರು.
ಇದನ್ನೂ ಓದಿ :ಗೇರು ಕೃಷಿಯಲ್ಲಿ ಕಂಡುಬರುವಂತಹ ಚಹಾ ಸೊಳ್ಳೆ ರೋಗದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ,
ಪ್ರತಿಭಟನೆಯಲ್ಲಿ ಕೆಪಿಆರ್ಎಸ್ನ ಮುನಿ ಸ್ವಾಮಿ ಗೌಡ ವೆಂಕಟಪ್ಪ, ಸಿಪಿಎಂನ ವೆಂಕಟಾ ಚಲಪತಿ, ರೈತ ಸಂಘದ ನರಸಿಂಹಯ್ಯ, ಕೋಡೂರು ಗೋಪಾಲಯ್ಯ, ಎಂ.ಗೌಡ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
MUST WATCH
ಹೊಸ ಸೇರ್ಪಡೆ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ