ಟೊಮೆಟೋ ಕೆ.ಜಿ.ಗೆ 10ರೂ. ಬೆಂಬಲ ಬೆಲೆ ಘೋಷಿಸಿ


Team Udayavani, Jul 19, 2022, 3:35 PM IST

ಟೊಮೆಟೋ ಕೆ.ಜಿ.ಗೆ 10ರೂ. ಬೆಂಬಲ ಬೆಲೆ ಘೋಷಿಸಿ

ಕೋಲಾರ: ಟೊಮೆಟೋ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರ ರಕ್ಷಣೆಗಾಗಿ ಪ್ರತಿ ಕೆ.ಜಿ. ಟೊಮೆಟೋಗೆ 10 ರೂ. ಬೆಂಬಲ ಬೆಲೆ ಘೋಷಣೆ ಮಾಡಿ, ಮಾರುಕಟ್ಟೆ ಜಾಗದ ಸಮಸ್ಯೆ ಬಗೆಹರಿಸಬೇಕು ಎಂದು ರೈತಸಂಘದಿಂದ ಟೊಮೆಟೋ ಸಮೇತ ಎಪಿಎಂಸಿ ಮಾರುಕಟ್ಟೆಯಿಂದ ಮೆಕ್ಕೆ ವೃತ್ತದವರೆಗೆ ಟ್ರ್ಯಾಕ್ಟರ್‌ ರ್ಯಾಲಿ ನಡೆಸಿ, ಉಪ ವಿಭಾಗಾಧಿಕಾರಿಗಳಿಗೆ ಮನವಿ ನೀಡಿ ಆಗ್ರಹಿಸಲಾಯಿತು.

ದೇಶದ ಕೋಟ್ಯಂತರ ಜನರ ಆಹಾರ ಭದ್ರತೆಒದಗಿಸುವ ರೈತನೇ ತುತ್ತು ಅನ್ನಕ್ಕಾಗಿ ಹೋರಾಡುತ್ತಿದ್ದು,ಆವನು ಕಾನೂನು ಕೈಗೆತ್ತಿಕೊಳ್ಳುವ ಮುಖಾಂತರದೇಶದಲ್ಲಿ ಆಹಾರ ಹೋರಾಟ ನಡೆಯುವ ಕಾಲ ದೂರವಿಲ್ಲವೆಂದು ಸರ್ಕಾರಗಳಿಗೆ ರೈತಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಎಚ್ಚರಿಸಿದರು.

ಸಮಾಜ ಸೇವಕ ಸಿಎಂಆರ್‌ ಶ್ರೀನಾಥ್‌ ಮತ್ತು ಕೆಎನ್‌ ಎನ್‌ ಪ್ರಕಾಶ್‌ ಮಾತನಾಡಿ, ಟೊಮೆಟೋ ಮಾರುಕಟ್ಟೆ ಜಾಗದ ಸಮಸ್ಯೆ ಬಗೆಹರಿಸಿ, ಪ್ರತಿದಿನ ಮಾರುಕಟ್ಟೆಯಲ್ಲಿಹರಾಜು ಪ್ರಕ್ರಿಯೆ ಇಲ್ಲದ ಟೊಮೆಟೋ ಮಾಹಿತಿಯನ್ನು ಜಿಲ್ಲಾ ಧಿಕಾರಿಗಳ ಮುಖಾಂತರಸರ್ಕಾರಕ್ಕೆ ನೀಡಬೇಕು. ಇಲ್ಲವಾದರೆ ಕೋಲಾರಜಿಲ್ಲೆಯ ಟೊಮೆಟೋವನ್ನೇ ಸಂಪೂರ್ಣವಾಗಿ ನಿಷೇಧ ಮಾಡುವ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ರೈತರ ಮೇಲೆ ಪ್ರಮಾಣ ಮಾಡಿ ಅಧಿಕಾರ ಹಿಡಿಯುವ ಪಕ್ಷಗಳು ರೈತರ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿವೆ. ಕೊರೊನಾ 2 ವರ್ಷಗಳ ದರ್ಬಾರಿಗೆ ರೈತರ ಬದುಕು ಬೀದಿಗೆ ಬಿದ್ದು ಮತ್ತೆ ಖಾಸಗಿ ಸಾಲ ಮಾಡಿ ಬೆಳೆದಿರುವ ಜಿಲ್ಲೆಯಸಾವಿರಾರು ಹೆಕ್ಟೇರ್‌ ಟೊಮೆಟೋ ಉತ್ತಮ ಫಸಲುಮಾರುಕಟ್ಟೆಗೆ ಬರುವ ಸಮಯದಲ್ಲಿ ಸಾವಿರಾರು ಬಾಕ್ಸ್‌ಗಳು ಹರಾಜು ಇಲ್ಲದೆ 20 ರಿಂದ 50ರೂಗೆಮಾರಾಟವಾಗುತ್ತಿರುವುದರಿಂದ ಹಾಕಿದ ಬಂಡವಾಳ ಕೈಗೆ ಸಿಗದೆ ಸರ್ಕಾರ ನೀಡುವ ಬೆಂಬಲಬೆಲೆಗಾಗಿ ರೈತರು ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಸರ್ಕಾರ ಕೂಡಲೇ ಸ್ಪಂದಿಸಿ ಪ್ರತಿ ಕೆ.ಜಿ.ಗೆ 10ರೂಪಾಯಿ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯ ಮಾಡಿದರು.

ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ ಮಾತನಾಡಿ, ಗೊಬ್ಬರ ಕೀಟನಾಶಕಗಳಬೆಲೆ ದುಬಾರಿಯಾಗಿದ್ದು, ಕಾರ್ಮಿಕರ ವೆಚ್ಚಸೇರಿ 1 ಎಕರೆ ಟೊಮೆಟೋಗೆ ಕನಿಷ್ಠ 2 ಲಕ್ಷ ಬಂಡವಾಳ ಆಗುತ್ತದೆ. ಮಾರುಕಟ್ಟೆಯಲ್ಲಿ 1 ಬಾಕ್ಸ್‌ಗೆ 300 ರೂ.ಬೆಲೆ ಇದ್ದು, ಯಾವುದೇ ರೋಗವಿಲ್ಲದಿದ್ದರೆ ಹಾಕಿದಬಂಡವಾಳ ಕೈಗೆ ಸಿಗುತ್ತದೆ. ಇತ್ತೀಚೆಗೆ ಏಕಾಏಕಿ ಬೆಲೆ ಕುಸಿತ ಹಾಗೂ ಬೆಳೆಗೆ ಬಾ ಸುತ್ತಿರುವ ನುಸಿ, ಚುಕ್ಕೆ,ರೋಸ್‌, ಜಾಂಡೀಸ್‌ನಿಂದ ಮಾರುಕಟ್ಟೆಯಲ್ಲಿಟೊಮೆಟೋ ಹರಾಜು ಇಲ್ಲದೆ ರಸ್ತೆಗೆ ಚೆಲ್ಲಿರುವದೃಶ್ಯಗಳು ಜಿಲ್ಲಾಡಳಿತದ ಗಮನಕ್ಕೆ ಇದ್ದರೂಸಮಸ್ಯೆ ಗಂಬೀರವಾಗಿ ಪರಿಗಣಿಸದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿದರು.

ಟೊಮೆಟೋ ಕ್ಯಾಪ್ಸಿಕಂಗೂ ಬೆಳೆ ವಿಮೆ ಅಗತ್ಯ: ವಿಮಾ ಕಂಪನಿಗಳು ಮಳೆಯಾಶ್ರಿತ ರಾಗಿ, ಜೋಳ,ತೊಗರಿ, ನೆಲಗಡಲೆ, ಬೆಳೆಗಳಿಗೆ ವಿಮೆ ಕಟ್ಟಿಸಿಕೊಂಡು ಲಕ್ಷಾಂತರ ರೂ. ಬಂಡವಾಳ ಹಾಕುವ ಟೊಮೆಟೋ ಕ್ಯಾಪ್ಸಿಕಂ ಮತ್ತಿತರರ ವಾಣಿಜ್ಯ ಬೆಳೆಗಳಿಗೆವಿಮೆಯನ್ನು ಕಟ್ಟಿಸಿಕೊಳ್ಳದೆ ಸರ್ಕಾರದ ದಿಕ್ಕುತಪ್ಪಿಸುತ್ತಿದ್ದಾರೆ. ಸಂಬಂಧಪಟ್ಟ ವಿಮಾ ಕಂಪನಿಗಳು, ರೈತರು ಅಧಿಕಾರಿಗಳ ಸಭೆ ಕರೆದು ವಾಣಿಜ್ಯ ಬೆಳೆಗಳಿಗೂ ವಿಮಾ ಪಾಲಿಸಿ ಕಡ್ಡಾಯ ಮಾಡುವ ಆದೇಶ ಮಾಡಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಉಪ ವಿಭಾಗಾಧಿಕಾರಿ ಆನಂದ್‌ ಪ್ರಕಾಶ್‌ ಮಿನಾ, ಸಂಬಂಧಪಟ್ಟ ಅಧಿಕಾರಿಗಳನ್ನು ಸಭೆ ಕರೆದು ವರದಿ ತರಿಸಿಕೊಂಡು ಸರ್ಕಾರಕ್ಕೆ ಕಳುಹಿಸಿ ಬೆಂಬಲ ಬೆಲೆ ಜೊತೆಗೆ ಮಾರುಕಟ್ಟೆ ಜಾಗ ಹಾಗೂ ನಕಲಿ ಬಿತ್ತನೆ ಬೀಜ , ರಸಗೊಬ್ಬರಗಳ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರುವ ಭರವಸೆಯನ್ನು ನೀಡಿದರು.

ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್‌, ಯುವ ರೈತ ಮುಖಂಡ ನಂಗಲಿ ಕಿಶೋರ್‌, ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಈಕಂಬಳ್ಳಿ ಮಂಜುನಾಥ್‌, ತೆರ್ನಹಳ್ಳಿಆಂಜಿನಪ್ಪ, ಮಾಸ್ತಿ ಯಲ್ಲಣ್ಣ, ಹರೀಶ್‌, ಚಂದ್ರಪ್ಪ, ಫಾರೂಖ್‌ ಪಾಷ, ಬಂಗಾರಿ ಮಂಜು, ರಾಜೇಶ್‌,ಮರಗಲ್‌ ಮುನಿಯಪ್ಪ, ಸಂದೀಪ್‌ರೆಡ್ಡಿ, ಸಂದೀಪ್‌ ಗೌಡ, ಅಜಯ್‌, ಮಣಿ, ರಂಜಿತ್‌, ಅಭಿಷೇಕ್‌, ಪಾರಂಡಹಳ್ಳಿ ಮಂಜುನಾಥ್‌, ಮಂಗಸಂದ್ರ ತಿಮ್ಮಣ್ಣ, ಕುವ್ವಣ್ಣ, ನಾರಾಯಣಗೌಡ, ವೆಂಕಟೇಶಪ್ಪ, ಸುಪ್ರೀಂ ಚಲ ಇತರರು ಇದ್ದರು.

ಮಾರುಕಟ್ಟೆ  ಜಾಗದ ಸಮಸ್ಯೆ ಬಗೆಹರಿಸಿ :

ಏಷ್ಯಾದಲ್ಲೇ 2ನೇ ಅತಿದೊಡ್ಡ ಮಾರುಕಟ್ಟೆ ಜಾಗದ ಸಮಸ್ಯೆಯೂ ಬೆಲೆ ಕುಸಿತಕ್ಕೆ ಕಾರಣವಾಗಿದೆ. ಟೊಮೆಟೋ ಖರೀದಿ ಮಾಡುವ ವ್ಯಾಪಾರಸ್ಥರು ಲೋಡ್‌ ಮಾಡಲು ಮಳೆ ಅಡ್ಡಿ ಹಾಗೂ ಟ್ರಾಫಿಕ್‌ ಸಮಸ್ಯೆಯಾದಾಗ 1 ಬಾಕ್ಸ್‌ ನ ಮೇಲೆ 100 ರೂ. ಬೆಲೆ ಕಡಿತವಾಗುತ್ತದೆ. ಈ ಸಮಸ್ಯೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಇದ್ದರೂ ಮಾರುಕಟ್ಟೆಯ ಜಾಗದ ಸಮಸ್ಯೆ ಬಗೆಹರಿಸಲು ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿದ್ದು, ಕೂಡಲೇ ಸಮಸ್ಯೆ ಬಗೆಹರಿಸಬೇಕೆಂದು ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.